<p><strong>ಪರ್ತ್</strong>: ಆಸ್ಟ್ರೇಲಿಯಾದ ಪರ್ತ್ನಲ್ಲಿ ಭಾರತ -ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಸೋಮವಾರ ಮುಕ್ತಾಯವಾಗಿದ್ದು, ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ದಿಢೀರ್ ಆಗಿ ತವರಿಗೆ ಮರಳಿದ್ದಾರೆ. </p><p>ವೈಯಕ್ತಿಕ ಕಾರಣದಿಂದ ಗಂಭೀರ್ ಭಾರತಕ್ಕೆ ಮರಳಿರುವುದಾಗಿ ತಿಳಿದುಬಂದಿದೆ. ಅಡಿಲೇಡ್ನಲ್ಲಿ ಡಿಸೆಂಬರ್ 6ರಂದು ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.</p><p>‘ಇಂದು ಮುಂಜಾನೆ ತಮ್ಮ ಕುಟುಂಬದೊಂದಿಗೆ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಕೌಟುಂಬಿಕ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಇದು ಅನಿವಾರ್ಯವಾಗಿದೆ. ಎರಡನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮೊದಲು ಅವರು ಅಡಿಲೇಡ್ಗೆ ಹಿಂದಿರುಗುವ ಸಾಧ್ಯತೆಯಿದೆ’ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.</p>.<p>ಭಾರತ ತಂಡ ಬುಧವಾರ ಕೆನ್ಬೆರಾಕ್ಕೆ ತೆರಳಲಿದ್ದು, ಅಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಅಂಟೋನಿ ಅಲ್ಬನೀಸ್ ಅವರು ಔತಣಕೂಟದ ಆತಿಥ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 30ರಂದ ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯ ನಡೆಯಲಿದೆ. ಎರಡನೇ ಟೆಸ್ಟ್ ಹಗಲು ರಾತ್ರಿ ಪಂದ್ಯವಾಗಿರುವ ಕಾರಣ ಈ ಸಿದ್ಧತಾ ಪಂದ್ಯ ಮಹತ್ವದ್ದಾಗಿದೆ.</p>.<p>ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಡವನ್ನು ಆಲ್ರೌಂಡರ್ ಜಾಕ್ ಎಡ್ವರ್ಡ್ಸ್ ಮುನ್ನಡೆಸಲಿದ್ದು, ತಂಡ ಬಹುತೇಕ ಯುವಮುಖಗಳನ್ನು ಒಳಗೊಂಡಿದೆ. ಸ್ಕಾಟ್ ಬೋಲ್ಯಾಂಡ್, ಮ್ಯಾಥ್ಯೂ ರೆನ್ಷಾ ಸೇರಿದ ಟೆಸ್ಟ್ ಆಡಿದ ಕೆಲವರಷ್ಟೇ ಆ ತಂಡದಲ್ಲಿದ್ದಾರೆ.</p> <p>ಪಂದ್ಯದ ನಿಯಮಗಳನ್ನು ಎರಡು ತಂಡಗಳು ನಿರ್ಧರಸಲಿವೆ. ಎಲ್ಲ ಆಟಗಾರರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಅವಕಾಶ ದೊರೆಯಲಿದೆ. ಇದು ಅಧಿಕೃತ ಪಂದ್ಯದ ಸ್ಥಾನಮಾನವಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪರ್ತ್</strong>: ಆಸ್ಟ್ರೇಲಿಯಾದ ಪರ್ತ್ನಲ್ಲಿ ಭಾರತ -ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಸೋಮವಾರ ಮುಕ್ತಾಯವಾಗಿದ್ದು, ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ದಿಢೀರ್ ಆಗಿ ತವರಿಗೆ ಮರಳಿದ್ದಾರೆ. </p><p>ವೈಯಕ್ತಿಕ ಕಾರಣದಿಂದ ಗಂಭೀರ್ ಭಾರತಕ್ಕೆ ಮರಳಿರುವುದಾಗಿ ತಿಳಿದುಬಂದಿದೆ. ಅಡಿಲೇಡ್ನಲ್ಲಿ ಡಿಸೆಂಬರ್ 6ರಂದು ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ.</p><p>‘ಇಂದು ಮುಂಜಾನೆ ತಮ್ಮ ಕುಟುಂಬದೊಂದಿಗೆ ಗಂಭೀರ್ ಭಾರತಕ್ಕೆ ಮರಳಿದ್ದಾರೆ. ಕೌಟುಂಬಿಕ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಇದು ಅನಿವಾರ್ಯವಾಗಿದೆ. ಎರಡನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮೊದಲು ಅವರು ಅಡಿಲೇಡ್ಗೆ ಹಿಂದಿರುಗುವ ಸಾಧ್ಯತೆಯಿದೆ’ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.</p>.<p>ಭಾರತ ತಂಡ ಬುಧವಾರ ಕೆನ್ಬೆರಾಕ್ಕೆ ತೆರಳಲಿದ್ದು, ಅಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಅಂಟೋನಿ ಅಲ್ಬನೀಸ್ ಅವರು ಔತಣಕೂಟದ ಆತಿಥ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 30ರಂದ ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯ ನಡೆಯಲಿದೆ. ಎರಡನೇ ಟೆಸ್ಟ್ ಹಗಲು ರಾತ್ರಿ ಪಂದ್ಯವಾಗಿರುವ ಕಾರಣ ಈ ಸಿದ್ಧತಾ ಪಂದ್ಯ ಮಹತ್ವದ್ದಾಗಿದೆ.</p>.<p>ಪ್ರೈಮ್ ಮಿನಿಸ್ಟರ್ಸ್ ಇಲೆವೆನ್ ತಡವನ್ನು ಆಲ್ರೌಂಡರ್ ಜಾಕ್ ಎಡ್ವರ್ಡ್ಸ್ ಮುನ್ನಡೆಸಲಿದ್ದು, ತಂಡ ಬಹುತೇಕ ಯುವಮುಖಗಳನ್ನು ಒಳಗೊಂಡಿದೆ. ಸ್ಕಾಟ್ ಬೋಲ್ಯಾಂಡ್, ಮ್ಯಾಥ್ಯೂ ರೆನ್ಷಾ ಸೇರಿದ ಟೆಸ್ಟ್ ಆಡಿದ ಕೆಲವರಷ್ಟೇ ಆ ತಂಡದಲ್ಲಿದ್ದಾರೆ.</p> <p>ಪಂದ್ಯದ ನಿಯಮಗಳನ್ನು ಎರಡು ತಂಡಗಳು ನಿರ್ಧರಸಲಿವೆ. ಎಲ್ಲ ಆಟಗಾರರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್ ಅವಕಾಶ ದೊರೆಯಲಿದೆ. ಇದು ಅಧಿಕೃತ ಪಂದ್ಯದ ಸ್ಥಾನಮಾನವಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>