<p>ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್–8 ಪಂದ್ಯದಲ್ಲಿ ಭಾರತ ತಂಡವು ಹೀನಾಯವಾಗಿ ಸೋಲುವ ಮೂಲಕ ನಿರಾಸೆ ಅನುಭವಿಸಿತು. ಮಾತ್ರವಲ್ಲ, ಸೆಮಿಫೈನಲ್ ತಲುಪುವುದು ಕೂಡ ಕಠಿಣ ಎಂಬ ವಾತಾವರಣ ನಿರ್ಮಾಣವಾಗಿದೆ.</p><p>ಈ ಪಂದ್ಯದ ನಡುವೆ ಹಾರ್ದಿಕ್ ಪಾಂಡ್ಯ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಿನ ಮಾತಿನ ಚಕಮಕಿ ನಡೆದಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p><p>ಅಹಮದಾಬಾದ್ನಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆರಂಭದಲ್ಲಿ ಭಾರತೀಯ ಬೌಲರ್ಗಳು ಮೇಲುಗೈ ಸಾಧಿಸಿದರು. ಪವರ್ಪ್ಲೇನಲ್ಲಿ ದಕ್ಷಿಣ ಆಫ್ರಿಕಾದ ಪ್ರಮುಖ ಮೂವರು ಬ್ಯಾಟರ್ಗಳನ್ನು ಪೆವಿಲಿಯನ್ಗೆ ಕಳಿಸುವಲ್ಲಿ ಭಾರತೀಯ ವೇಗಿಗಳು ಯಶಸ್ವಿಯಾದರು. </p><p>ಆದರೆ, ನಂತದ ಜೊತೆಯಾದ ಡೆವಾಲ್ಡ್ ಬ್ರೆವಿಸ್ ಮತ್ತು ಡೇವಿಡ್ ಮಿಲ್ಲರ್ ಭಾರತೀಯ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಈ ಹಂತದಲ್ಲಿ ಬೌಂಡರಿ ಗೆರೆ ಬಳಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ವಿರುದ್ಧ ತರಬೇತುದಾರ ಗೌತಮ್ ಗಂಭೀರ್ ಬೇಸರ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ವೇಳೆ ಪಾಂಡ್ಯ ಕೂಡ ಗಂಭೀರ್ ಜೊತೆ ಮಾತುಕತೆಗೆ ಇಳಿದಿದ್ದಾರೆ.</p><p>ಆ ಇಬ್ಬರ ನಡುವಿನ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ತಿಳಿದಿಲ್ಲವಾದರೂ, ಗಂಭೀರ್ ಕೋಪಗೊಂಡು ಮಾತನಾಡಿರುವುದು ಮುಖಭಾವದಲ್ಲಿ ಸ್ಪಷ್ಟವಾಗಿತ್ತು.</p>.<p><strong>ಏನಿದು ಘಟನೆ?</strong></p><p>ದಕ್ಷಿಣ ಆಫ್ರಿಕಾದ ಬ್ಯಾಟರ್ ಮಿಲ್ಲರ್ ಹಾಗೂ ಬ್ರೇವಿಸ್ ಬ್ಯಾಟಿಂಗ್ ಮಾಡುವಾಗ, ವರುಣ್ ಚಕ್ರವರ್ತಿಯವರ 12ನೇ ಓವರ್ನಲ್ಲಿ ಮಿಲ್ಲರ್ ಅವರು ಭರ್ಜರಿ ಬೌಂಡರಿ ಬಾರಿಸುತ್ತಾರೆ. ಆ ವೇಳೆಗೆ ಆಗಲೆ ದಕ್ಷಿಣ ಆಫ್ರಿಕಾ ತಂಡ 100ರನ್ಗಳ ಗಡಿ ದಾಟಿತ್ತು.</p><p>ಆ ಸಂದರ್ಭದಲ್ಲಿ ಬೌಂಡರಿ ಗೆರೆ ಬಳಿ ನಿಂತಿದ್ದ ಪಾಂಡ್ಯರ ಜೊತೆ ಮಾತಿಗೆ ಇಳಿದ ಗಂಭೀರ್, ನಮ್ಮ ಯೋಜನೆಯ ಪ್ರಕಾರ ಯಾವುದೂ ನಡೆಯುತ್ತಿಲ್ಲ ಎಂಬಂತೆ ಪಾಂಡ್ಯ ಅವರನ್ನು ಪ್ರಶ್ನಿಸುತ್ತಾರೆ. ಅದಕ್ಕೆ ಪಾಂಡ್ಯ ಕೂಡ ಪ್ರತ್ಯುತ್ತರ ನೀಡುತ್ತಾರೆ. ಈ ಇಬ್ಬರ ಮಾತುಕತೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. </p><p>ಪಂದ್ಯದ ಉದ್ದಕ್ಕೂ ತಾಳ್ಮೆ ಕಳೆದುಕೊಂಡಿದ್ದ ಗಂಭೀರ್ ಅವರು ಪದೇ ಪದೇ ಸಿಟ್ಟಾಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಸೂಪರ್–8 ಪಂದ್ಯದಲ್ಲಿ ಭಾರತ ತಂಡವು ಹೀನಾಯವಾಗಿ ಸೋಲುವ ಮೂಲಕ ನಿರಾಸೆ ಅನುಭವಿಸಿತು. ಮಾತ್ರವಲ್ಲ, ಸೆಮಿಫೈನಲ್ ತಲುಪುವುದು ಕೂಡ ಕಠಿಣ ಎಂಬ ವಾತಾವರಣ ನಿರ್ಮಾಣವಾಗಿದೆ.</p><p>ಈ ಪಂದ್ಯದ ನಡುವೆ ಹಾರ್ದಿಕ್ ಪಾಂಡ್ಯ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಿನ ಮಾತಿನ ಚಕಮಕಿ ನಡೆದಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.</p><p>ಅಹಮದಾಬಾದ್ನಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆರಂಭದಲ್ಲಿ ಭಾರತೀಯ ಬೌಲರ್ಗಳು ಮೇಲುಗೈ ಸಾಧಿಸಿದರು. ಪವರ್ಪ್ಲೇನಲ್ಲಿ ದಕ್ಷಿಣ ಆಫ್ರಿಕಾದ ಪ್ರಮುಖ ಮೂವರು ಬ್ಯಾಟರ್ಗಳನ್ನು ಪೆವಿಲಿಯನ್ಗೆ ಕಳಿಸುವಲ್ಲಿ ಭಾರತೀಯ ವೇಗಿಗಳು ಯಶಸ್ವಿಯಾದರು. </p><p>ಆದರೆ, ನಂತದ ಜೊತೆಯಾದ ಡೆವಾಲ್ಡ್ ಬ್ರೆವಿಸ್ ಮತ್ತು ಡೇವಿಡ್ ಮಿಲ್ಲರ್ ಭಾರತೀಯ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಈ ಹಂತದಲ್ಲಿ ಬೌಂಡರಿ ಗೆರೆ ಬಳಿ ಕ್ಷೇತ್ರ ರಕ್ಷಣೆ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ವಿರುದ್ಧ ತರಬೇತುದಾರ ಗೌತಮ್ ಗಂಭೀರ್ ಬೇಸರ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ವೇಳೆ ಪಾಂಡ್ಯ ಕೂಡ ಗಂಭೀರ್ ಜೊತೆ ಮಾತುಕತೆಗೆ ಇಳಿದಿದ್ದಾರೆ.</p><p>ಆ ಇಬ್ಬರ ನಡುವಿನ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ತಿಳಿದಿಲ್ಲವಾದರೂ, ಗಂಭೀರ್ ಕೋಪಗೊಂಡು ಮಾತನಾಡಿರುವುದು ಮುಖಭಾವದಲ್ಲಿ ಸ್ಪಷ್ಟವಾಗಿತ್ತು.</p>.<p><strong>ಏನಿದು ಘಟನೆ?</strong></p><p>ದಕ್ಷಿಣ ಆಫ್ರಿಕಾದ ಬ್ಯಾಟರ್ ಮಿಲ್ಲರ್ ಹಾಗೂ ಬ್ರೇವಿಸ್ ಬ್ಯಾಟಿಂಗ್ ಮಾಡುವಾಗ, ವರುಣ್ ಚಕ್ರವರ್ತಿಯವರ 12ನೇ ಓವರ್ನಲ್ಲಿ ಮಿಲ್ಲರ್ ಅವರು ಭರ್ಜರಿ ಬೌಂಡರಿ ಬಾರಿಸುತ್ತಾರೆ. ಆ ವೇಳೆಗೆ ಆಗಲೆ ದಕ್ಷಿಣ ಆಫ್ರಿಕಾ ತಂಡ 100ರನ್ಗಳ ಗಡಿ ದಾಟಿತ್ತು.</p><p>ಆ ಸಂದರ್ಭದಲ್ಲಿ ಬೌಂಡರಿ ಗೆರೆ ಬಳಿ ನಿಂತಿದ್ದ ಪಾಂಡ್ಯರ ಜೊತೆ ಮಾತಿಗೆ ಇಳಿದ ಗಂಭೀರ್, ನಮ್ಮ ಯೋಜನೆಯ ಪ್ರಕಾರ ಯಾವುದೂ ನಡೆಯುತ್ತಿಲ್ಲ ಎಂಬಂತೆ ಪಾಂಡ್ಯ ಅವರನ್ನು ಪ್ರಶ್ನಿಸುತ್ತಾರೆ. ಅದಕ್ಕೆ ಪಾಂಡ್ಯ ಕೂಡ ಪ್ರತ್ಯುತ್ತರ ನೀಡುತ್ತಾರೆ. ಈ ಇಬ್ಬರ ಮಾತುಕತೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. </p><p>ಪಂದ್ಯದ ಉದ್ದಕ್ಕೂ ತಾಳ್ಮೆ ಕಳೆದುಕೊಂಡಿದ್ದ ಗಂಭೀರ್ ಅವರು ಪದೇ ಪದೇ ಸಿಟ್ಟಾಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>