<p>ಭಾರತ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾದ ಗೌತಮ್ ಗಂಭೀರ್ ಅವರ ನೇತೃತ್ವದಲ್ಲಿ ಭಾರತ ತಂಡ ಮೊದಲ ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಒಟ್ಟು 3 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. </p><p>ಟಿ20 ವಿಶ್ವಕಪ್ಗೂ ಮುನ್ನ ಭಾರತ ತಂಡ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಈ ನಡುವೆ ಗಂಭೀರ್ ಅವರ ಕೋಚಿಂಗ್ ವೈಫಲ್ಯದ ಕುರಿತು ಆರೋಪಗಳು ಕೇಳಿ ಬಂದಿದ್ದವು. ಈ ಎಲ್ಲ ಆರೋಪಗಳಿಗೂ ಗಂಭೀರ್ ಉತ್ತರಿಸಿದ್ದಾರೆ.</p>.IND vs SA| ಪಿಚ್ ಆಡಲಾಗದಂತಿರಲಿಲ್ಲ, ನಾವು ಕೇಳಿದ್ದು ಇದನ್ನೇ: ಗೌತಮ್ ಗಂಭೀರ್.<p>ಭಾನುವಾರ ಅಹಮದಾಬಾದ್ನಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಬಳಿಕ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮಾತನಾಡಿ, ‘ನನ್ನ ಜವಾಬ್ದಾರಿ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡುವ ಜನರಿಗೆ ಅಲ್ಲ. ಬದಲಾಗಿ ಡ್ರೆಸ್ಸಿಂಗ್ ಕೋಣೆಯಲ್ಲಿರುವ 30 ಜನರಿಗೆ ಮಾತ್ರ ನಾನು ಜವಾಬ್ದಾರನಾಗಿದ್ದೇನೆ’ ಎಂದು ಟೀಕೆಗಳಿಗೆ ತೀರುಗೇಟು ನೀಡಿದ್ದಾರೆ. </p><p>‘ನಾನು ಈ ಟ್ರೋಫಿಯನ್ನು ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಿಗೆ ಅರ್ಪಿಸುತ್ತೇನೆ. ಭಾರತ ತಂಡವನ್ನು ಉತ್ತಮ ಸ್ಥಾನದಲ್ಲಿ ಇರಿಸಿದ್ದಕ್ಕಾಗಿ ರಾಹುಲ್ ಭಾಯ್ ಮತ್ತು ಲಕ್ಷ್ಮಣ್ ಅವರಿಗೆ ಧನ್ಯವಾದಗಳು. ಒಬ್ಬ ತರಬೇತುದಾರ ತನ್ನ ತಂಡದಷ್ಟೇ ಒಳ್ಳೆಯವನು. ಆಟಗಾರರು ನನ್ನನ್ನು ತರಬೇತುದಾರನನ್ನಾಗಿ ಮಾಡಿದ್ದಾರೆ’ ಎಂದು ಗಂಭೀರ್ ತಂಡದ ಆಟಗಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. </p><p>’ತವರಿನಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸೋಲು ಅನುಭವಿಸಿತ್ತು. ಆಗ ಸಾಕಷ್ಟು ಜನರು ಆಟಗಾರರ ಆಯ್ಕೆ ಸಮಿತಿಯ ಅಜಿತ್ ಅಗರ್ಕರ್ ಮತ್ತು ನನ್ನನ್ನು ಟೀಕಿಸಿದ್ದರು. ಈ ಸಮಯದಲ್ಲಿ ಬಿಸಿಸಿಐನ ಮಾಜಿ ಕಾರ್ಯದರ್ಶಿ ಜಯ್ ಶಾ ಅವರು ಕರೆ ಮಾಡಿ, ನನ್ನ ಬೆಂಬಲಕ್ಕೆ ನಿಂತರು’ ಎಂದು ಹೇಳಿದ್ದಾರೆ.</p><p>‘ಭಾರತದ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ನನ್ನ ಕೆಲಸವನ್ನು ಮತ್ತಷ್ಟು ಸುಲಭಗೊಳಿಸಿದರು. ನಮ್ಮ ಉದ್ದೇಶ ಮೈಲುಗಲ್ಲು ಸ್ಥಾಪಿಸುವುದು ಆಗಿರಲಿಲ್ಲ. ಬದಲಾಗಿ ಟ್ರೋಫಿಯನ್ನು ಗೆಲ್ಲುವುದಾಗಿತ್ತು. ವೈಯಕ್ತಿಕ ಮೈಲಿಗಲ್ಲುಗಳನ್ನು ಸಾಧಿಸುವುದನ್ನು ಇನ್ನಾದರೂ ನಿಲ್ಲಿಸುವಂತೆ ಒತ್ತಾಯಿಸುತ್ತೇನೆ’ ಎಂದು ಗಂಭೀರ್ ಪುನರುಚ್ಚರಿಸಿದ್ದಾರೆ. </p>.T20 WC| ಸತತ ಎರಡನೇ ವಿಶ್ವಕಪ್ ಗೆದ್ದ ಭಾರತ: ಇತಿಹಾಸ ನಿರ್ಮಿಸಿದ ಸೂರ್ಯ ಪಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತ ತಂಡದ ಮುಖ್ಯ ಕೋಚ್ ಆಗಿ ಆಯ್ಕೆಯಾದ ಗೌತಮ್ ಗಂಭೀರ್ ಅವರ ನೇತೃತ್ವದಲ್ಲಿ ಭಾರತ ತಂಡ ಮೊದಲ ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಒಟ್ಟು 3 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. </p><p>ಟಿ20 ವಿಶ್ವಕಪ್ಗೂ ಮುನ್ನ ಭಾರತ ತಂಡ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲು ಅನುಭವಿಸಿತ್ತು. ಈ ನಡುವೆ ಗಂಭೀರ್ ಅವರ ಕೋಚಿಂಗ್ ವೈಫಲ್ಯದ ಕುರಿತು ಆರೋಪಗಳು ಕೇಳಿ ಬಂದಿದ್ದವು. ಈ ಎಲ್ಲ ಆರೋಪಗಳಿಗೂ ಗಂಭೀರ್ ಉತ್ತರಿಸಿದ್ದಾರೆ.</p>.IND vs SA| ಪಿಚ್ ಆಡಲಾಗದಂತಿರಲಿಲ್ಲ, ನಾವು ಕೇಳಿದ್ದು ಇದನ್ನೇ: ಗೌತಮ್ ಗಂಭೀರ್.<p>ಭಾನುವಾರ ಅಹಮದಾಬಾದ್ನಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಬಳಿಕ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಮಾತನಾಡಿ, ‘ನನ್ನ ಜವಾಬ್ದಾರಿ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡುವ ಜನರಿಗೆ ಅಲ್ಲ. ಬದಲಾಗಿ ಡ್ರೆಸ್ಸಿಂಗ್ ಕೋಣೆಯಲ್ಲಿರುವ 30 ಜನರಿಗೆ ಮಾತ್ರ ನಾನು ಜವಾಬ್ದಾರನಾಗಿದ್ದೇನೆ’ ಎಂದು ಟೀಕೆಗಳಿಗೆ ತೀರುಗೇಟು ನೀಡಿದ್ದಾರೆ. </p><p>‘ನಾನು ಈ ಟ್ರೋಫಿಯನ್ನು ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಅವರಿಗೆ ಅರ್ಪಿಸುತ್ತೇನೆ. ಭಾರತ ತಂಡವನ್ನು ಉತ್ತಮ ಸ್ಥಾನದಲ್ಲಿ ಇರಿಸಿದ್ದಕ್ಕಾಗಿ ರಾಹುಲ್ ಭಾಯ್ ಮತ್ತು ಲಕ್ಷ್ಮಣ್ ಅವರಿಗೆ ಧನ್ಯವಾದಗಳು. ಒಬ್ಬ ತರಬೇತುದಾರ ತನ್ನ ತಂಡದಷ್ಟೇ ಒಳ್ಳೆಯವನು. ಆಟಗಾರರು ನನ್ನನ್ನು ತರಬೇತುದಾರನನ್ನಾಗಿ ಮಾಡಿದ್ದಾರೆ’ ಎಂದು ಗಂಭೀರ್ ತಂಡದ ಆಟಗಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. </p><p>’ತವರಿನಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸೋಲು ಅನುಭವಿಸಿತ್ತು. ಆಗ ಸಾಕಷ್ಟು ಜನರು ಆಟಗಾರರ ಆಯ್ಕೆ ಸಮಿತಿಯ ಅಜಿತ್ ಅಗರ್ಕರ್ ಮತ್ತು ನನ್ನನ್ನು ಟೀಕಿಸಿದ್ದರು. ಈ ಸಮಯದಲ್ಲಿ ಬಿಸಿಸಿಐನ ಮಾಜಿ ಕಾರ್ಯದರ್ಶಿ ಜಯ್ ಶಾ ಅವರು ಕರೆ ಮಾಡಿ, ನನ್ನ ಬೆಂಬಲಕ್ಕೆ ನಿಂತರು’ ಎಂದು ಹೇಳಿದ್ದಾರೆ.</p><p>‘ಭಾರತದ ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ನನ್ನ ಕೆಲಸವನ್ನು ಮತ್ತಷ್ಟು ಸುಲಭಗೊಳಿಸಿದರು. ನಮ್ಮ ಉದ್ದೇಶ ಮೈಲುಗಲ್ಲು ಸ್ಥಾಪಿಸುವುದು ಆಗಿರಲಿಲ್ಲ. ಬದಲಾಗಿ ಟ್ರೋಫಿಯನ್ನು ಗೆಲ್ಲುವುದಾಗಿತ್ತು. ವೈಯಕ್ತಿಕ ಮೈಲಿಗಲ್ಲುಗಳನ್ನು ಸಾಧಿಸುವುದನ್ನು ಇನ್ನಾದರೂ ನಿಲ್ಲಿಸುವಂತೆ ಒತ್ತಾಯಿಸುತ್ತೇನೆ’ ಎಂದು ಗಂಭೀರ್ ಪುನರುಚ್ಚರಿಸಿದ್ದಾರೆ. </p>.T20 WC| ಸತತ ಎರಡನೇ ವಿಶ್ವಕಪ್ ಗೆದ್ದ ಭಾರತ: ಇತಿಹಾಸ ನಿರ್ಮಿಸಿದ ಸೂರ್ಯ ಪಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>