ವಿರಾಟ್ ಕೊಹ್ಲಿಯವರು ಟಿ–20 ನಾಯಕತ್ವವನ್ನು ತ್ಯಜಿಸಿದಾಗ ಅವರ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ಬಿಸಿಸಿಐ ಕೇಳಿತ್ತು ಎಂದು ಸೌರವ್ ಗಂಗೂಲಿ ಹೇಳಿದ್ದರು. ಆದರೆ, ಬಿಸಿಸಿಐನಿಂದ ಆ ರೀತಿಯ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ನನ್ನ ನಿರ್ಧಾರವನ್ನು ಸ್ವಾಗತಿಸಲಾಗಿತ್ತು ಎಂದು ನಿನ್ನೆಯ ಪತ್ರಿಕಾಗೋಷ್ಠಿಯಲ್ಲಿ ಗಂಗೂಲಿ ಹೇಳಿಕೆಯನ್ನು ವಿರಾಟ್ ಕೊಹ್ಲಿ ಅಲ್ಲಗಳೆದಿದ್ದರು.