<p><strong>ಬೆಂಗಳೂರು: </strong>ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ಗೂ (ಐಪಿಎಲ್) ಮುನ್ನ ತಂಡ ಸೇರಿಕೊಳ್ಳಲಿದ್ದಾರೆ ಎಂದು ಆರ್ಸಿಬಿ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ತಿಳಿಸಿದ್ದಾರೆ.</p>.<p>ಟ್ವಿಟರ್ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ‘ಮ್ಯಾಕ್ಸ್ವೆಲ್ ಅವರು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ. ಅವರು ಮುಂಬರುವ (2023) ಐಪಿಎಲ್ಗೆ ಮುಂಚಿತವಾಗಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೆಸ್ಸನ್ ಹೇಳಿದ್ದಾರೆ.</p>.<p>ಶನಿವಾರ ಮೆಲ್ಬರ್ನ್ನಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿ ವೇಳೆ ಮ್ಯಾಕ್ಸ್ವೆಲ್ ಅವರ ಕಾಲು ಮುರಿದಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.</p>.<p>ಡಿ.23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜಿಗೆ ಮುನ್ನ ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಳ್ಳುವ ಮತ್ತು ಬಿಟ್ಟುಕೊಡುವ ಆಟಗಾರರ ಪಟ್ಟಿಯನ್ನು ನೀಡಲು ಮಂಗಳವಾರ ಕೊನೆಯ ದಿನವಾಗಿತ್ತು.</p>.<p>ಈ ಹಿನ್ನೆಲೆಯಲ್ಲಿ ಆರ್ಸಿಬಿ ಫ್ರಾಂಚೈಸ್, ಉಳಿಸಿಕೊಳ್ಳುವ ಮತ್ತು ಬಿಟ್ಟುಕೊಡುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.</p>.<p>ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಫಾಫ್ ಡುಪ್ಲೆಸಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್ಸಿಬಿ) ನಿರೀಕ್ಷೆಯಂತೆಯೇ ತನ್ನಲ್ಲಿ ಉಳಿಸಿಕೊಂಡಿದೆ.</p>.<p>ವಿದೇಶಿ ಆಟಗಾರರಲ್ಲಿ ಮ್ಯಾಕ್ಸ್ವೆಲ್ ಮತ್ತು ಡುಪ್ಲೆಸಿ ಅಲ್ಲದೆ ಶ್ರೀಲಂಕಾದ ಆಲ್ರೌಂಡರ್ ವಣಿಂದು ಹಸರಂಗ, ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಜೆಲ್ವುಡ್, ನ್ಯೂಜಿಲೆಂಡ್ನ ವಿಕೆಟ್ಕೀಪರ್ ಬ್ಯಾಟರ್ ಫಿನ್ ಅಲೆನ್ ಮತ್ತು ಇಂಗ್ಲೆಂಡ್ನ ಆಲ್ರೌಂಡರ್ ಡೇವಿಡ್ ವಿಲಿ ಅವರನ್ನೂ ಉಳಿಸಿಕೊಂಡಿದೆ.</p>.<p>ಭಾರತದ ಆಟಗಾರರಾದ ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಅವರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಕರ್ನಾಟಕದ ಇಬ್ಬರು ಆಟಗಾರರಾದ ಲವನೀತ್ ಸಿಸೋಡಿಯಾ ಮತ್ತು ಅನೀಶ್ವರ್ ಗೌತಮ್ ಸೇರಿದಂತೆ ಐವರು ಆಟಗಾರರನ್ನು ಆರ್ಸಿಬಿ ಕೈಬಿಟ್ಟಿದೆ.</p>.<p>ಮಿನಿ ಹರಾಜಿನಲ್ಲಿ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಲು ಆರ್ಸಿಬಿ ₹ 8.75 ಕೋಟಿ ಖರ್ಚು ಮಾಡಬಹುದು.</p>.<p><strong>ಓದಿ...<a href="https://www.prajavani.net/sports/cricket/this-game-is-not-for-nice-guys-says-sanjay-manjrekar-on-mayank-non-retention-by-punjab-kings-989060.html" target="_blank"> ‘ಈ ಆಟ ಒಳ್ಳೆಯ ಆಟಗಾರರಿಗೆ ಅಲ್ಲ’: ಮಯಂಕ್ ಅಗರವಾಲ್ ಬಗ್ಗೆ ಸಂಜಯ್ ಮಂಜ್ರೇಕರ್ ಮಾತು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅವರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ಗೂ (ಐಪಿಎಲ್) ಮುನ್ನ ತಂಡ ಸೇರಿಕೊಳ್ಳಲಿದ್ದಾರೆ ಎಂದು ಆರ್ಸಿಬಿ ತಂಡದ ನಿರ್ದೇಶಕ ಮೈಕ್ ಹೆಸ್ಸನ್ ತಿಳಿಸಿದ್ದಾರೆ.</p>.<p>ಟ್ವಿಟರ್ನಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ‘ಮ್ಯಾಕ್ಸ್ವೆಲ್ ಅವರು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇವೆ. ಅವರು ಮುಂಬರುವ (2023) ಐಪಿಎಲ್ಗೆ ಮುಂಚಿತವಾಗಿ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಹೆಸ್ಸನ್ ಹೇಳಿದ್ದಾರೆ.</p>.<p>ಶನಿವಾರ ಮೆಲ್ಬರ್ನ್ನಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿ ವೇಳೆ ಮ್ಯಾಕ್ಸ್ವೆಲ್ ಅವರ ಕಾಲು ಮುರಿದಿದೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.</p>.<p>ಡಿ.23 ರಂದು ಕೊಚ್ಚಿಯಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಿನಿ ಹರಾಜಿಗೆ ಮುನ್ನ ಫ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಳ್ಳುವ ಮತ್ತು ಬಿಟ್ಟುಕೊಡುವ ಆಟಗಾರರ ಪಟ್ಟಿಯನ್ನು ನೀಡಲು ಮಂಗಳವಾರ ಕೊನೆಯ ದಿನವಾಗಿತ್ತು.</p>.<p>ಈ ಹಿನ್ನೆಲೆಯಲ್ಲಿ ಆರ್ಸಿಬಿ ಫ್ರಾಂಚೈಸ್, ಉಳಿಸಿಕೊಳ್ಳುವ ಮತ್ತು ಬಿಟ್ಟುಕೊಡುವ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ.</p>.<p>ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ಫಾಫ್ ಡುಪ್ಲೆಸಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (ಆರ್ಸಿಬಿ) ನಿರೀಕ್ಷೆಯಂತೆಯೇ ತನ್ನಲ್ಲಿ ಉಳಿಸಿಕೊಂಡಿದೆ.</p>.<p>ವಿದೇಶಿ ಆಟಗಾರರಲ್ಲಿ ಮ್ಯಾಕ್ಸ್ವೆಲ್ ಮತ್ತು ಡುಪ್ಲೆಸಿ ಅಲ್ಲದೆ ಶ್ರೀಲಂಕಾದ ಆಲ್ರೌಂಡರ್ ವಣಿಂದು ಹಸರಂಗ, ಆಸ್ಟ್ರೇಲಿಯಾದ ವೇಗಿ ಜೋಶ್ ಹ್ಯಾಜೆಲ್ವುಡ್, ನ್ಯೂಜಿಲೆಂಡ್ನ ವಿಕೆಟ್ಕೀಪರ್ ಬ್ಯಾಟರ್ ಫಿನ್ ಅಲೆನ್ ಮತ್ತು ಇಂಗ್ಲೆಂಡ್ನ ಆಲ್ರೌಂಡರ್ ಡೇವಿಡ್ ವಿಲಿ ಅವರನ್ನೂ ಉಳಿಸಿಕೊಂಡಿದೆ.</p>.<p>ಭಾರತದ ಆಟಗಾರರಾದ ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಅವರನ್ನು ಉಳಿಸಿಕೊಳ್ಳಲು ತೀರ್ಮಾನಿಸಿದೆ. ಕರ್ನಾಟಕದ ಇಬ್ಬರು ಆಟಗಾರರಾದ ಲವನೀತ್ ಸಿಸೋಡಿಯಾ ಮತ್ತು ಅನೀಶ್ವರ್ ಗೌತಮ್ ಸೇರಿದಂತೆ ಐವರು ಆಟಗಾರರನ್ನು ಆರ್ಸಿಬಿ ಕೈಬಿಟ್ಟಿದೆ.</p>.<p>ಮಿನಿ ಹರಾಜಿನಲ್ಲಿ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಲು ಆರ್ಸಿಬಿ ₹ 8.75 ಕೋಟಿ ಖರ್ಚು ಮಾಡಬಹುದು.</p>.<p><strong>ಓದಿ...<a href="https://www.prajavani.net/sports/cricket/this-game-is-not-for-nice-guys-says-sanjay-manjrekar-on-mayank-non-retention-by-punjab-kings-989060.html" target="_blank"> ‘ಈ ಆಟ ಒಳ್ಳೆಯ ಆಟಗಾರರಿಗೆ ಅಲ್ಲ’: ಮಯಂಕ್ ಅಗರವಾಲ್ ಬಗ್ಗೆ ಸಂಜಯ್ ಮಂಜ್ರೇಕರ್ ಮಾತು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>