<p><strong>ಬೆಂಗಳೂರು:</strong> ನೀರಿನ ಬವಣೆ ಹೆಚ್ಚಾಗಿರುವ ಬೆಂಗಳೂರಿನಲ್ಲಿ ಮೂರು ಕೆರೆಗಳನ್ನು ಮರುಅಭಿವೃದ್ಧಿಗೊಳಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕ್ರಿಕೆಟ್ ಫ್ರ್ಯಾಂಚೈಸಿ ಮುಂದಾಗಿದೆ. </p><p>ತಂಡದ ಹಸಿರು ಅಭಿಯಾನ ಯೋಜನೆಯಲ್ಲಿ ಕಾರ್ಯವನ್ನೂ ಫ್ರ್ಯಾಂಚೈಸಿಯು ಕೈಗೆತ್ತಿಕೊಂಡಿದೆ. ಇಟ್ಟಗಾಲಪುರ ಕೆರೆ ಮತ್ತು ಸದೇನಹಳ್ಳಿ ಕೆರೆ ಪುನರಾಭಿವೃದ್ಧಿ ಕಾರ್ಯವು ಮುಕ್ತಾಯ ಹಂತ ತಲುಪಿದೆ.</p><p>ಕಣ್ಣೂರು ಕೆರೆಯಲ್ಲಿ ನಾಗರಿಕರಿಗೆ ಮೂಲ ಸೌಲಭ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಇಂಡಿಯಾ ಕೇರ್ಸ್ ಫೌಂಡೇಷನ್ ವರದಿ ನೀಡಿದೆ. </p><p>ಆರ್ಸಿಬಿಯು ಕಳೆದ ಅಕ್ಟೋಬರ್ನಿಂದಲೇ ಇಎಸ್ಜಿ ಬದ್ಧತೆಯಡಿಯಲ್ಲಿ ಕೆರೆ ಸುಧಾರಣೆ ಕಾರ್ಯ ಯೋಜನೆಯನ್ನು ಆರಂಭಿಸಿದೆ.</p><p>ಕಾವೇರಿ ನೀರಿನಿಂದ ವಂಚಿತವಾಗಿರುವ ಹಾಗೂ ಅಂತರ್ಜಲ ಮತ್ತು ಮಳೆ ನೀರಿನ ಮೂಲದ ಮೇಲೆಯೇ ಅವಲಂಬಿತವಾಗಿರುವ ಪ್ರದೇಶಗಳ ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ. </p><p>ಇಟ್ಟಗಾಲಪುರ ಮತ್ತು ಸದೇನಹಳ್ಳಿ ಕೆರೆಗಳಿಂದ ಇದುವರೆಗೆ 1.20 ಲಕ್ಷ ಟನ್ ಹೂಳು ಮತ್ತು ಮರಳನ್ನು ಹೊರತೆಗೆಯಲಾಗಿದೆ. ಅದೇ ಮಣ್ಣನ್ನು ಕೆರೆಗಳಿಗೆ ಒಡ್ಡು ಕಟ್ಟಲು ಮತ್ತು ಕಾಲುಹಾದಿ ನಿರ್ಮಿಸಲು ಬಳಸಲಾಗಿದೆ.</p><p>ಅಲ್ಲದೇ ಸುತ್ತಮುತ್ತಲಿಗೆ 52 ರೈತರು ತಮ್ಮ ಹೊಲ,ಗದ್ದೆಗಳಿಗಾಗಿ ಈ ಮಣ್ಣು ತೆಗೆದುಕೊಂಡೂ ಹೋಗಿದ್ದಾರೆ ಎಂದು ಆರ್ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.</p><p>‘ಸ್ಥಳೀಯ ಸಮುದಾಯದ ಕಲ್ಯಾಣ ನಮ್ಮ ಗುರಿಯಾಗಿದೆ. ಬೆಂಗಳೂರಿನ ಪ್ರಮುಖ ಕೆರೆಗಳನ್ನು ಮರಳಿ ಅಭಿವೃದ್ಧಿಪಡಿಸುವುದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚಳಕ್ಕೆ ಕಾರಣವಾಗಲಿದೆ. ಅಲ್ಲದೇ ಅಕ್ಕಪಕ್ಕದ ಗ್ರಾಮಗಳಿಗೆ ಕೃಷಿ ಮತ್ತಿತರ ಕಾರ್ಯಗಳಿಗೂ ನೀರಿನ ಸೌಲಭ್ಯ ಒದಗಿಸಲಿದೆ’ ಎಂದು ಆರ್ಸಿಬಿ ಮುಖ್ಯಸ್ಥ ರಾಜೇಶ್ ಮೆನನ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನೀರಿನ ಬವಣೆ ಹೆಚ್ಚಾಗಿರುವ ಬೆಂಗಳೂರಿನಲ್ಲಿ ಮೂರು ಕೆರೆಗಳನ್ನು ಮರುಅಭಿವೃದ್ಧಿಗೊಳಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಕ್ರಿಕೆಟ್ ಫ್ರ್ಯಾಂಚೈಸಿ ಮುಂದಾಗಿದೆ. </p><p>ತಂಡದ ಹಸಿರು ಅಭಿಯಾನ ಯೋಜನೆಯಲ್ಲಿ ಕಾರ್ಯವನ್ನೂ ಫ್ರ್ಯಾಂಚೈಸಿಯು ಕೈಗೆತ್ತಿಕೊಂಡಿದೆ. ಇಟ್ಟಗಾಲಪುರ ಕೆರೆ ಮತ್ತು ಸದೇನಹಳ್ಳಿ ಕೆರೆ ಪುನರಾಭಿವೃದ್ಧಿ ಕಾರ್ಯವು ಮುಕ್ತಾಯ ಹಂತ ತಲುಪಿದೆ.</p><p>ಕಣ್ಣೂರು ಕೆರೆಯಲ್ಲಿ ನಾಗರಿಕರಿಗೆ ಮೂಲ ಸೌಲಭ್ಯಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಇಂಡಿಯಾ ಕೇರ್ಸ್ ಫೌಂಡೇಷನ್ ವರದಿ ನೀಡಿದೆ. </p><p>ಆರ್ಸಿಬಿಯು ಕಳೆದ ಅಕ್ಟೋಬರ್ನಿಂದಲೇ ಇಎಸ್ಜಿ ಬದ್ಧತೆಯಡಿಯಲ್ಲಿ ಕೆರೆ ಸುಧಾರಣೆ ಕಾರ್ಯ ಯೋಜನೆಯನ್ನು ಆರಂಭಿಸಿದೆ.</p><p>ಕಾವೇರಿ ನೀರಿನಿಂದ ವಂಚಿತವಾಗಿರುವ ಹಾಗೂ ಅಂತರ್ಜಲ ಮತ್ತು ಮಳೆ ನೀರಿನ ಮೂಲದ ಮೇಲೆಯೇ ಅವಲಂಬಿತವಾಗಿರುವ ಪ್ರದೇಶಗಳ ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದೆ. </p><p>ಇಟ್ಟಗಾಲಪುರ ಮತ್ತು ಸದೇನಹಳ್ಳಿ ಕೆರೆಗಳಿಂದ ಇದುವರೆಗೆ 1.20 ಲಕ್ಷ ಟನ್ ಹೂಳು ಮತ್ತು ಮರಳನ್ನು ಹೊರತೆಗೆಯಲಾಗಿದೆ. ಅದೇ ಮಣ್ಣನ್ನು ಕೆರೆಗಳಿಗೆ ಒಡ್ಡು ಕಟ್ಟಲು ಮತ್ತು ಕಾಲುಹಾದಿ ನಿರ್ಮಿಸಲು ಬಳಸಲಾಗಿದೆ.</p><p>ಅಲ್ಲದೇ ಸುತ್ತಮುತ್ತಲಿಗೆ 52 ರೈತರು ತಮ್ಮ ಹೊಲ,ಗದ್ದೆಗಳಿಗಾಗಿ ಈ ಮಣ್ಣು ತೆಗೆದುಕೊಂಡೂ ಹೋಗಿದ್ದಾರೆ ಎಂದು ಆರ್ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.</p><p>‘ಸ್ಥಳೀಯ ಸಮುದಾಯದ ಕಲ್ಯಾಣ ನಮ್ಮ ಗುರಿಯಾಗಿದೆ. ಬೆಂಗಳೂರಿನ ಪ್ರಮುಖ ಕೆರೆಗಳನ್ನು ಮರಳಿ ಅಭಿವೃದ್ಧಿಪಡಿಸುವುದರಿಂದ ಅಂತರ್ಜಲ ಮಟ್ಟವನ್ನು ಹೆಚ್ಚಳಕ್ಕೆ ಕಾರಣವಾಗಲಿದೆ. ಅಲ್ಲದೇ ಅಕ್ಕಪಕ್ಕದ ಗ್ರಾಮಗಳಿಗೆ ಕೃಷಿ ಮತ್ತಿತರ ಕಾರ್ಯಗಳಿಗೂ ನೀರಿನ ಸೌಲಭ್ಯ ಒದಗಿಸಲಿದೆ’ ಎಂದು ಆರ್ಸಿಬಿ ಮುಖ್ಯಸ್ಥ ರಾಜೇಶ್ ಮೆನನ್ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>