<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯನ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ತಂಡ ಏನನ್ನೂ ಸಾಬೀತು ಮಾಡಬೇಕಿಲ್ಲ. ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನುಪ್ರದರ್ಶಿಸಲು ಉತ್ತಮ ವಾತಾವರಣ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದು ನೂತನ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.</p>.<p>2015ರಲ್ಲಿ ಐಪಿಎಲ್ಗೆ ಕಾಲಿಟ್ಟ ಬಳಿಕ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/sa-leave-out-ipl-bound-players-from-bangladesh-series-test-squad-920652.html" itemprop="url">ಐಪಿಎಲ್ ಆಟಗಾರರನ್ನು ಕೈಬಿಟ್ಟ ದಕ್ಷಿಣ ಆಫ್ರಿಕಾ </a></p>.<p>ಆದರೆ ಪದೇ ಪದೇ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದುದರಿಂದ ಮುಂಬೈ ತಂಡವು ಈ ಬಾರಿಯ ಮೆಗಾ ಹರಾಜಿನ ಸಂದರ್ಭದಲ್ಲಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.</p>.<p>ಬಳಿಕ ನೂತನ ಗುಜರಾತ್ ಫ್ರಾಂಚೈಸ್, ಡ್ರಾಫ್ಟ್ ಮೂಲಕ ಹಾರ್ದಿಕ್ ಅವರನ್ನು ತಮ್ಮ ತೆಕ್ಕೆಗೆ ಸೇರಿಸಿತ್ತಲ್ಲದೆ ತಂಡದ ನಾಯಕನನ್ನಾಗಿ ಘೋಷಣೆ ಮಾಡಿತು.</p>.<p>'ನಾನು ನನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದೆ. ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಂದಿನಂತೆ ಕಠಿಣ ಪರಿಶ್ರಮ ವಹಿಸುತ್ತಿದ್ದೇನೆ. ನಮ್ಮ ತಂಡದ ಆಯ್ಕೆಯ ಬಗ್ಗೆಯೂ ಸಂತುಷ್ಟಗೊಂಡಿದ್ದೇನೆ. ಇದೊಂದು ಹೊಸ ತಂಡವಾಗಿದ್ದು, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಯಾರಿಗೂ ಏನನ್ನೂ ಸಾಬೀತು ಮಾಡಬೇಕಿಲ್ಲ. ನಾವು ಉತ್ತಮ ಕ್ರಿಕೆಟ್ ಆಡಲು ಇಲ್ಲಿದ್ದೇವೆ. ಆಟಗಾರರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಉತ್ತಮ ಆಟವನ್ನು ಪ್ರದರ್ಶಿಸಲು ಉತ್ತಮ ವಾತಾವರಣ ನಿರ್ಮಿಸುವುದು ನಮ್ಮ ಗುರಿಯಾಗಿದೆ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯನ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತಮ್ಮ ತಂಡ ಏನನ್ನೂ ಸಾಬೀತು ಮಾಡಬೇಕಿಲ್ಲ. ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನುಪ್ರದರ್ಶಿಸಲು ಉತ್ತಮ ವಾತಾವರಣ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದು ನೂತನ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.</p>.<p>2015ರಲ್ಲಿ ಐಪಿಎಲ್ಗೆ ಕಾಲಿಟ್ಟ ಬಳಿಕ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರಲ್ಲದೆ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/sports/cricket/sa-leave-out-ipl-bound-players-from-bangladesh-series-test-squad-920652.html" itemprop="url">ಐಪಿಎಲ್ ಆಟಗಾರರನ್ನು ಕೈಬಿಟ್ಟ ದಕ್ಷಿಣ ಆಫ್ರಿಕಾ </a></p>.<p>ಆದರೆ ಪದೇ ಪದೇ ಗಾಯದ ಸಮಸ್ಯೆಗೆ ಒಳಗಾಗುತ್ತಿದ್ದುದರಿಂದ ಮುಂಬೈ ತಂಡವು ಈ ಬಾರಿಯ ಮೆಗಾ ಹರಾಜಿನ ಸಂದರ್ಭದಲ್ಲಿ ಅವರನ್ನು ತಂಡದಿಂದ ಕೈಬಿಟ್ಟಿತ್ತು.</p>.<p>ಬಳಿಕ ನೂತನ ಗುಜರಾತ್ ಫ್ರಾಂಚೈಸ್, ಡ್ರಾಫ್ಟ್ ಮೂಲಕ ಹಾರ್ದಿಕ್ ಅವರನ್ನು ತಮ್ಮ ತೆಕ್ಕೆಗೆ ಸೇರಿಸಿತ್ತಲ್ಲದೆ ತಂಡದ ನಾಯಕನನ್ನಾಗಿ ಘೋಷಣೆ ಮಾಡಿತು.</p>.<p>'ನಾನು ನನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದೆ. ಉತ್ತಮ ತಯಾರಿ ನಡೆಸುತ್ತಿದ್ದೇನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಂದಿನಂತೆ ಕಠಿಣ ಪರಿಶ್ರಮ ವಹಿಸುತ್ತಿದ್ದೇನೆ. ನಮ್ಮ ತಂಡದ ಆಯ್ಕೆಯ ಬಗ್ಗೆಯೂ ಸಂತುಷ್ಟಗೊಂಡಿದ್ದೇನೆ. ಇದೊಂದು ಹೊಸ ತಂಡವಾಗಿದ್ದು, ಪ್ರಾಮಾಣಿಕವಾಗಿ ಹೇಳಬೇಕೆಂದರೆ ಯಾರಿಗೂ ಏನನ್ನೂ ಸಾಬೀತು ಮಾಡಬೇಕಿಲ್ಲ. ನಾವು ಉತ್ತಮ ಕ್ರಿಕೆಟ್ ಆಡಲು ಇಲ್ಲಿದ್ದೇವೆ. ಆಟಗಾರರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಉತ್ತಮ ಆಟವನ್ನು ಪ್ರದರ್ಶಿಸಲು ಉತ್ತಮ ವಾತಾವರಣ ನಿರ್ಮಿಸುವುದು ನಮ್ಮ ಗುರಿಯಾಗಿದೆ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>