<p><strong>ಮುಂಬೈ</strong>: ಮಂಡಿರಜ್ಜು ನೋವಿನಿಂದ ಬಳಲುತ್ತಿರುವ ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಗೆ ಅಲಭ್ಯರಾಗಲಿದ್ದಾರೆ. ಅವರ ಬದಲಿಗೆ ಬಾರತ ‘ಎ’ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.</p>.<p>ಮುಂಬೈಯಲ್ಲಿ ತಂಡವು ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ರೋಹಿತ್ ಶರ್ಮಾ ಅವರಲ್ಲಿ ನೋವು ಉಲ್ಬಣಿಸಿತ್ತು. ಅವರ ಕೈಗೆ ಪೆಟ್ಟು ಕೂಡ ಬಿದ್ದಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಬಿಸಿಸಿಐ ತಿಳಿಸಿದೆ. ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಉಪನಾಯಕ ಯಾರು ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿಲ್ಲ.</p>.<p>ಕೆ.ಎಲ್.ರಾಹುಲ್ ಉಪನಾಯಕನಾಗುವುದು ಖಚಿತ ಎನ್ನಲಾಗಿದೆ. ರಿಷಭ್ ಪಂತ್ ಅಥವಾ ರವಿಚಂದ್ರನ್ ಅಶ್ವಿನ್ ಅವರ ಹೆಸರನ್ನು ಪರಿಗಣಿಸುವ ಸಾಧ್ಯತೆ ಇದೆ. ಅಜಿಂಕ್ಯ ರಹಾನೆ ಅವರನ್ನು ಈಗಾಗಲೇ ಆ ಸ್ಥಾನದಿಂದ ತೆರವುಗೊಳಿಸಲಾಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಜನವರಿ 15ರಂದು ಕೊನೆಗೊಳ್ಳಲಿದ್ದು 19ರಿಂದ ಏಕದಿನ ಸರಣಿ ನಡೆಯಲಿದೆ.</p>.<p><strong>ಕೊಹ್ಲಿ ನಾಯಕತ್ವ ಖುಷಿ ನೀಡಿದೆ: ರೋಹಿತ್</strong></p>.<p>ಐದು ವರ್ಷ ಭಾರತ ಏಕದಿನ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಅವರ ನಾಯಕತ್ವದ ಅವಧಿಯನ್ನು ಎಲ್ಲರೂ ಖುಷಿಯಿಂದ ಕಳೆದಿದ್ದಾರೆ ಎಂದು ಹೊಸ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.</p>.<p>ಬಿಸಿಸಿಐ ಡಾಟ್ ಟಿವಿ ಜೊತೆ ಮಾತನಾಡಿದ ಅವರು ಕೊಹ್ಲಿ ಅವಧಿ ತಂಡದ ಪಾಲಿಗೆ ಅತ್ಯುತ್ತಮವಾಗಿತ್ತು ಎಂದಿದ್ದಾರೆ. ಯುಎಇಯಲ್ಲಿ ನಡೆದ ವಿಶ್ವಕಪ್ ಟೂರ್ನಿಯ ನಂತರ ಟ್ವೆಂಟಿ20 ನಾಯಕತ್ವವನ್ನು ವಿರಾಟ್ ಕೊಹ್ಲಿ ತೊರೆದಿದ್ದರು. ಈಗ ಅವರನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಂಡಿರಜ್ಜು ನೋವಿನಿಂದ ಬಳಲುತ್ತಿರುವ ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ಎದುರಿನ ಟೆಸ್ಟ್ ಸರಣಿಗೆ ಅಲಭ್ಯರಾಗಲಿದ್ದಾರೆ. ಅವರ ಬದಲಿಗೆ ಬಾರತ ‘ಎ’ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.</p>.<p>ಮುಂಬೈಯಲ್ಲಿ ತಂಡವು ನೆಟ್ಸ್ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ರೋಹಿತ್ ಶರ್ಮಾ ಅವರಲ್ಲಿ ನೋವು ಉಲ್ಬಣಿಸಿತ್ತು. ಅವರ ಕೈಗೆ ಪೆಟ್ಟು ಕೂಡ ಬಿದ್ದಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಬಿಸಿಸಿಐ ತಿಳಿಸಿದೆ. ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಉಪನಾಯಕ ಯಾರು ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿಲ್ಲ.</p>.<p>ಕೆ.ಎಲ್.ರಾಹುಲ್ ಉಪನಾಯಕನಾಗುವುದು ಖಚಿತ ಎನ್ನಲಾಗಿದೆ. ರಿಷಭ್ ಪಂತ್ ಅಥವಾ ರವಿಚಂದ್ರನ್ ಅಶ್ವಿನ್ ಅವರ ಹೆಸರನ್ನು ಪರಿಗಣಿಸುವ ಸಾಧ್ಯತೆ ಇದೆ. ಅಜಿಂಕ್ಯ ರಹಾನೆ ಅವರನ್ನು ಈಗಾಗಲೇ ಆ ಸ್ಥಾನದಿಂದ ತೆರವುಗೊಳಿಸಲಾಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಜನವರಿ 15ರಂದು ಕೊನೆಗೊಳ್ಳಲಿದ್ದು 19ರಿಂದ ಏಕದಿನ ಸರಣಿ ನಡೆಯಲಿದೆ.</p>.<p><strong>ಕೊಹ್ಲಿ ನಾಯಕತ್ವ ಖುಷಿ ನೀಡಿದೆ: ರೋಹಿತ್</strong></p>.<p>ಐದು ವರ್ಷ ಭಾರತ ಏಕದಿನ ತಂಡವನ್ನು ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಅವರ ನಾಯಕತ್ವದ ಅವಧಿಯನ್ನು ಎಲ್ಲರೂ ಖುಷಿಯಿಂದ ಕಳೆದಿದ್ದಾರೆ ಎಂದು ಹೊಸ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.</p>.<p>ಬಿಸಿಸಿಐ ಡಾಟ್ ಟಿವಿ ಜೊತೆ ಮಾತನಾಡಿದ ಅವರು ಕೊಹ್ಲಿ ಅವಧಿ ತಂಡದ ಪಾಲಿಗೆ ಅತ್ಯುತ್ತಮವಾಗಿತ್ತು ಎಂದಿದ್ದಾರೆ. ಯುಎಇಯಲ್ಲಿ ನಡೆದ ವಿಶ್ವಕಪ್ ಟೂರ್ನಿಯ ನಂತರ ಟ್ವೆಂಟಿ20 ನಾಯಕತ್ವವನ್ನು ವಿರಾಟ್ ಕೊಹ್ಲಿ ತೊರೆದಿದ್ದರು. ಈಗ ಅವರನ್ನು ಏಕದಿನ ತಂಡದ ನಾಯಕತ್ವದಿಂದ ಕೆಳಗಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>