ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತಿ ಬರಗೂರು ರಾಮಚಂದ್ರಪ್ಪಗೆ ಪತ್ನಿವಿಯೋಗ

Last Updated 8 ಏಪ್ರಿಲ್ 2018, 7:51 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಪತ್ನಿ ಎಸ್.ರಾಜಲಕ್ಷ್ಮಿ (66) ಅನಾರೋಗ್ಯದಿಂದ ಭಾನುವಾರ ನಿಧನರಾದರು.

ಕಿಡ್ನಿ ವೈಫಲ್ಯ ಸಮಸ್ಯೆಗೀಡಾಗಿದ್ದ ಅವರು ನಾಲ್ಕು ಬಾರಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು. ಸುಮಾರು 50 ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಅಸುನೀಗಿದರು.

ನಟ ಡಾ. ರಾಜ್ ಕುಮಾರ್ ಅವರ ಪ್ರಭಾವದಿಂದ ರಾಜಲಕ್ಷ್ಮಿಯವರು ನೇತ್ರದಾನ ಮಾಡಲು ನಿರ್ಧರಿದ್ದರು. ಅದರಂತೆ ಈಗ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದನಹಳ್ಳಿ ಗ್ರಾಮದಲ್ಲಿ ಜನಿಸಿದ ರಾಜಲಕ್ಷ್ಮಿಯವರು ಬಿ.ಎ. ಪದವಿ ಮತ್ತು ಹಿಂದಿ ವಿದ್ವಾನ್ ಪದವಿಧರರಾಗಿದ್ದರು. ಕನ್ನಡ  ಸಾಹಿತ್ಯ ಪ್ರೇಮಿಯಾದ ಅವರು ನಾಲ್ಕು ದಶಕಗಳ ಹಿಂದೆ ಸಾಹಿತಿ ಬರಗೂರು ಅವರೊಂದಿಗೆ ಅಂತರಜಾತಿಯ ವಿವಾಹವಾಗಿದ್ದರು. ಬದುಕಿನುದ್ದಕ್ಕೂ ಬರಗೂರರ ಸಾಹಿತ್ಯ ಮತ್ತು ಸಾಮಾಜಿಕ ಚಳವಳಿಗಳ ಕ್ರಿಯಾಶೀಲತೆಗೆ ಬೆಂಬಲವಾಗಿ ನಿಂತಿದ್ದರು.

ಜೆ.ಪಿ.ನಗರದ 2ನೇ ಹಂತದ 11 ಬಿ. ಕ್ರಾಸ್‌ನಲ್ಲಿರುವ ನಿವಾಸದಲ್ಲಿ ನಾಳೆ ಬೆಳಿಗ್ಗೆಯಿಂದ ಮದ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ರಾಜಲಕ್ಷ್ಮಿಯವರ ಅಂತ್ಯಕ್ರಿಯೆಯು ಬೆಂಗಳೂರಿನ ಬನಶಂಕರಿ ಚಿತಗಾರದಲ್ಲಿ ಸೋಮವಾರ ಮಧ್ಯಾಹ್ನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT