<p><strong>ನವದೆಹಲಿ (ಪಿಟಿಐ):</strong> ‘ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವವರನ್ನು ತೆಗೆದು ಹಾಕಿ ಅವರ ಜಾಗಕ್ಕೆ ದಕ್ಷ ವ್ಯಕ್ತಿಗಳನ್ನು ನೇಮಿಸಬೇಕಿದೆ. ಈ ಕೆಲಸ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಂದ ಮಾತ್ರ ಸಾಧ್ಯ’ ಎಂದು ಹಿರಿಯ ಆಟಗಾರ ಹರಭಜನ್ ಸಿಂಗ್ ತಿಳಿಸಿದ್ದಾರೆ.</p>.<p>ತವರಿನಲ್ಲಿ ನಡೆದಿದ್ದ ಬಾಂಗ್ಲಾದೇಶ ಎದುರಿನ ಮೂರು ಪಂದ್ಯಗಳ ಟ್ವೆಂಟಿ–20 ಕ್ರಿಕೆಟ್ ಸರಣಿಗೆ ಕೇರಳದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರು. ಅವರಿಗೆ ಆಡುವ ಬಳಗದಲ್ಲಿ ಅವಕಾಶ ನೀಡಿರಲಿಲ್ಲ.</p>.<p>ಈ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>‘ಬಾಂಗ್ಲಾ ಎದುರಿನ ಸರಣಿಗೆ ಆಯ್ಕೆಯಾಗಿದ್ದ ಸಂಜು ಅವರನ್ನು ತಂಡದ ಆಡಳಿತ ಮಂಡಳಿಯು ಸಹ ಆಟಗಾರರಿಗೆ ಪಾನೀಯ ನೀಡುವುದಕ್ಕಷ್ಟೇ ಬಳಸಿಕೊಂಡಿತು. ಅವರಿಗೆ ಯಾವ ಪಂದ್ಯದಲ್ಲೂ ಕಣಕ್ಕಿಳಿಸದಿರುವುದು ಬೇಸರದ ಸಂಗತಿ’ ಎಂದು ತರೂರ್ ಟ್ವೀಟ್ ಮಾಡಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಹರಭಜನ್ ‘ಆಯ್ಕೆ ಸಮಿತಿಯು ಸಂಜು ಅವರ ಸಹನೆಯನ್ನು ಪರೀಕ್ಷಿಸುತ್ತಿದೆ. ಈಗಿರುವ ಆಯ್ಕೆ ಸಮಿತಿ ಬದಲಾಗಬೇಕಿದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>25 ವರ್ಷದ ಸ್ಯಾಮ್ಸನ್, ಈ ಸಲದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟ್ವೆಂಟಿ–20 ಟೂರ್ನಿಯಲ್ಲಿ ನಾಲ್ಕು ಪಂದ್ಯಗಳಿಂದ 112ರನ್ ಗಳಿಸಿದ್ದರು.</p>.<p>ಸ್ಯಾಮ್ಸನ್ ಅವರು 2015ರಲ್ಲಿ ಅಂತರರಾಷ್ಟ್ರೀಯ ಟ್ವೆಂಟಿ–20 ಮಾದರಿಗೆ ಪದಾರ್ಪಣೆ ಮಾಡಿದ್ದರು. ಜಿಂಬಾಬ್ವೆ ಎದುರಿನ ಪಂದ್ಯ ಅವರ ಪಾಲಿಗೆ ಮೊದಲ ಮತ್ತು ಕೊನೆಯದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ‘ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವವರನ್ನು ತೆಗೆದು ಹಾಕಿ ಅವರ ಜಾಗಕ್ಕೆ ದಕ್ಷ ವ್ಯಕ್ತಿಗಳನ್ನು ನೇಮಿಸಬೇಕಿದೆ. ಈ ಕೆಲಸ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಂದ ಮಾತ್ರ ಸಾಧ್ಯ’ ಎಂದು ಹಿರಿಯ ಆಟಗಾರ ಹರಭಜನ್ ಸಿಂಗ್ ತಿಳಿಸಿದ್ದಾರೆ.</p>.<p>ತವರಿನಲ್ಲಿ ನಡೆದಿದ್ದ ಬಾಂಗ್ಲಾದೇಶ ಎದುರಿನ ಮೂರು ಪಂದ್ಯಗಳ ಟ್ವೆಂಟಿ–20 ಕ್ರಿಕೆಟ್ ಸರಣಿಗೆ ಕೇರಳದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದರು. ಅವರಿಗೆ ಆಡುವ ಬಳಗದಲ್ಲಿ ಅವಕಾಶ ನೀಡಿರಲಿಲ್ಲ.</p>.<p>ಈ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>‘ಬಾಂಗ್ಲಾ ಎದುರಿನ ಸರಣಿಗೆ ಆಯ್ಕೆಯಾಗಿದ್ದ ಸಂಜು ಅವರನ್ನು ತಂಡದ ಆಡಳಿತ ಮಂಡಳಿಯು ಸಹ ಆಟಗಾರರಿಗೆ ಪಾನೀಯ ನೀಡುವುದಕ್ಕಷ್ಟೇ ಬಳಸಿಕೊಂಡಿತು. ಅವರಿಗೆ ಯಾವ ಪಂದ್ಯದಲ್ಲೂ ಕಣಕ್ಕಿಳಿಸದಿರುವುದು ಬೇಸರದ ಸಂಗತಿ’ ಎಂದು ತರೂರ್ ಟ್ವೀಟ್ ಮಾಡಿದ್ದರು.</p>.<p>ಇದಕ್ಕೆ ಪ್ರತಿಕ್ರಿಯಿಸಿರುವ ಹರಭಜನ್ ‘ಆಯ್ಕೆ ಸಮಿತಿಯು ಸಂಜು ಅವರ ಸಹನೆಯನ್ನು ಪರೀಕ್ಷಿಸುತ್ತಿದೆ. ಈಗಿರುವ ಆಯ್ಕೆ ಸಮಿತಿ ಬದಲಾಗಬೇಕಿದೆ’ ಎಂದು ಟ್ವೀಟ್ ಮಾಡಿದ್ದಾರೆ.</p>.<p>25 ವರ್ಷದ ಸ್ಯಾಮ್ಸನ್, ಈ ಸಲದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟ್ವೆಂಟಿ–20 ಟೂರ್ನಿಯಲ್ಲಿ ನಾಲ್ಕು ಪಂದ್ಯಗಳಿಂದ 112ರನ್ ಗಳಿಸಿದ್ದರು.</p>.<p>ಸ್ಯಾಮ್ಸನ್ ಅವರು 2015ರಲ್ಲಿ ಅಂತರರಾಷ್ಟ್ರೀಯ ಟ್ವೆಂಟಿ–20 ಮಾದರಿಗೆ ಪದಾರ್ಪಣೆ ಮಾಡಿದ್ದರು. ಜಿಂಬಾಬ್ವೆ ಎದುರಿನ ಪಂದ್ಯ ಅವರ ಪಾಲಿಗೆ ಮೊದಲ ಮತ್ತು ಕೊನೆಯದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>