ನವದೆಹಲಿ (ಪಿಟಿಐ): ‘ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ಈಗ ಕಾರ್ಯನಿರ್ವಹಿಸುತ್ತಿರುವವರನ್ನು ತೆಗೆದು ಹಾಕಿ ಅವರ ಜಾಗಕ್ಕೆ ದಕ್ಷ ವ್ಯಕ್ತಿಗಳನ್ನು ನೇಮಿಸಬೇಕಿದೆ. ಈ ಕೆಲಸ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಂದ ಮಾತ್ರ ಸಾಧ್ಯ’ ಎಂದು ಹಿರಿಯ ಆಟಗಾರ ಹರಭಜನ್ ಸಿಂಗ್ ತಿಳಿಸಿದ್ದಾರೆ.