ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರ್ದಿಕ್‌ ಪಾಂಡ್ಯ ಗರ್ಜನೆ

Last Updated 3 ಮಾರ್ಚ್ 2020, 19:08 IST
ಅಕ್ಷರ ಗಾತ್ರ

ನವಿ ಮುಂಬೈ: ಗಾಯದಿಂದ ಚೇತರಿಸಿಕೊಂಡಿರುವ ಹಾರ್ದಿಕ್‌ ಪಾಂಡ್ಯ, ಮಂಗಳವಾರ ನಡೆದ ಡಿ.ವೈ.ಪಾಟೀಲ ಟಿ–20 ಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಅಬ್ಬರದ ಶತಕ ಸಿಡಿಸಿದ್ದಾರೆ.

ರಿಲಯನ್ಸ್‌ ತಂಡದ ಪರ ಕಣಕ್ಕಿಳಿದಿದ್ದ ಪಾಂಡ್ಯ ಸಿಎಜಿ ಎದುರಿನ ಪಂದ್ಯದಲ್ಲಿ 39 ಎಸೆತಗಳಲ್ಲಿ 105ರನ್‌ ಬಾರಿಸಿದರು. ಇದರಲ್ಲಿ ಎಂಟು ಬೌಂಡರಿ ಮತ್ತು ಹತ್ತು ಸಿಕ್ಸರ್‌ಗಳು ಸೇರಿದ್ದವು. ಈ ಪಂದ್ಯದಲ್ಲಿ ರಿಲಯನ್ಸ್‌ ತಂಡ 101ರನ್‌ಗಳಿಂದ ಗೆದ್ದಿತು.

ಮೊದಲು ಬ್ಯಾಟ್‌ ಮಾಡಿದ್ದ ರಿಲಯನ್ಸ್‌ 20 ಓವರ್‌ಗಳಲ್ಲಿ 252ರನ್‌ ಕಲೆಹಾಕಿತು. ಸಿಎಜಿ 151ರನ್‌ಗಳಿಗೆ ಆಲೌಟ್‌ ಆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT