<p><strong>ನವದೆಹಲಿ</strong>: ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ಜುಲೈ 27ರಂದು ಆರಂಭವಾಗುವ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಗೆ ನಾಯಕರಾಗಿದ್ದಾರೆ. ಆದರೆ ನಂತರ ನಡೆಯುವ ಏಕದಿನ ಸರಣಿಗೆ ಅವರು ಲಭ್ಯರಿರುವುದಿಲ್ಲ.</p>.<p>ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪೆಲ್ಲೆಕೆಲ್ಲೆಯಲ್ಲಿ ನಡೆಯಲಿವೆ. ಮೂರು ಏಕದಿನ ಪಂದ್ಯಗಳು, ಆಗಸ್ಟ್ 2, 4 ಮತ್ತು 7ರಂದು ನಿಗದಿಯಾಗಿವೆ.</p>.<p>ಟಿ20 ವಿಶ್ವಕಪ್ ಗೆದ್ದ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ಪಾಂಡ್ಯ, ಏಕದಿನ ಸರಣಿಗೆ ‘ವೈಯಕ್ತಿಕ ಕಾರಣ’ಗಳಿಂದ ಅಲಭ್ಯರಾಗಿದ್ದಾರೆ. </p>.<p>‘ಪಾಂಡ್ಯ ಸಂಪೂರ್ಣವಾಗಿ ಫಿಟ್ ಆಗಿದ್ದು, ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಬಿಸಿಸಿಐನ ಮೂಲವೊಂದು ಪಿಟಿಐಗೆ ತಿಳಿಸಿದೆ. ಇತ್ತೀಚಿನ ವಿಶ್ವಕಪ್ ಫೈನಲ್ ನಂತರ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.</p>.<p>ಟಿ20 ತಂಡದ ಉಪನಾಯಕ ಯಾರೆಂದು ಸ್ಪಷ್ಟವಾಗಿಲ್ಲ. ಜಿಂಬಾಬ್ವೆ ವಿರುದ್ಧ 4–1ರಲ್ಲಿ ಸರಣಿ ಗೆದ್ದ ತಂಡದ ನಾಯಕರಾಗಿದ್ದ ಶುಭಮನ್ ಗಿಲ್ ಮತ್ತು ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೆ ನಾಯಕರಾಗಿದ್ದ ಸೂರ್ಯಕುಮಾರ್ ಯಾದವ್ ಇವರಲ್ಲಿ ಒಬ್ಬರು ಉಪನಾಯರಾಗುವ ಸಾಧ್ಯತೆ ದಟ್ಟವಾಗಿದೆ.</p>.<p>ಏಕದಿನ ಸರಣಿಗೆ ಪಾಂಡ್ಯ ಅವರು ಈಗಾಗಲೇ ವಿರಾಮ ಕೇಳಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರಿಗೂ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.</p>.<p>ಏಕದಿನ ಸರಣಿಗೆ ನಾಯಕಪಟ್ಟ ಕೆ.ಎಲ್.ರಾಹುಲ್ ಅಥವಾ ಗಿಲ್ ಇವರಲ್ಲಿ ಒಬ್ಬರಿಗೆ ಒಲಿಯಬಹುದು.</p>.<p><strong>ದುಲೀಪ್–ವಲಯ ಆಯ್ಕೆ ಸಮಿತಿ ಇಲ್ಲ:</strong></p>.<p>ರಾಷ್ಟ್ರೀಯ ತಂಡದ ಕರ್ತವ್ಯದಲ್ಲಿಲ್ಲದ ವೇಳೆ, ಭಾರತ ತಂಡದ ಪ್ರಮುಖ ಆಟಗಾರರೂ ದೇಶಿಯ ಟೂರ್ನಿಯಲ್ಲಿ ಆಡಬೇಕೆಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. ಇದರ ನಡುವೆಯೂ ಅಪವಾದವೆನ್ನುವಂತೆ ರೋಹಿತ್, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಅವರಂಥ ಆಟಗಾರರಿಗೆ ರಿಯಾಯಿತಿ ದೊರೆತಿದೆ.</p>.<p>ಆದರೆ ಟೆಸ್ಟ್ ಪರಿಣತ ಆಟಗಾರರು, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಸರಣಿಗೆ ಪೂರ್ವಭಾವಿಯಾಗಿ ಆಗಸ್ಟ್ನಲ್ಲಿ ನಡೆಯಲಿರುವ ದುಲೀಪ್ ಟ್ರೋಫಿಯಲ್ಲಿ ಒಂದೆರಡು ಪಂದ್ಯಗಳನ್ನಾದರೂ ಆಡಬೇಕು ಎಂದು ಬಿಸಿಸಿಐ ಬಯಸಿದೆ. ಈ ಬಾರಿ ದುಲೀಪ್ ಟ್ರೋಫಿಗೆ ವಲಯ ಮಟ್ಟದ ಆಯ್ಕೆ ಸಮಿತಿ ಇರುವುದಿಲ್ಲ. ರಾಷ್ಟ್ರೀಯ ಆಯ್ಕೆ ಸಮಿತಿಯೇ ದುಲೀಪ್ ಟ್ರೋಫಿಗೆ ತಂಡಗಳ ಆಯ್ಕೆ ಮಾಡಲಿದೆ.</p>.<p>ಟೆಸ್ಟ್ ತಂಡಕ್ಕೆ ರೇಸ್ನಲ್ಲಿರುವವರನ್ನು ದುಲೀಪ್ ಟ್ರೋಫಿ ಆಯ್ಕೆ ಮಾಡಲಾಗುವುದು. ರೋಹಿತ್, ವಿರಾಟ್ ಮತ್ತು ಬೂಮ್ರಾ ಅವರಿಗೆ ಸಂಬಂಧಿಸಿದಂತೆ ಆಡಬೇಕೇ, ಬೇಡವೇ ಎಂಬುದನ್ನು ಅವರಿಗೆ ಬಿಡಲಾಗುವುದು ಎಂದು ಮೂಲವೊಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ಜುಲೈ 27ರಂದು ಆರಂಭವಾಗುವ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಗೆ ನಾಯಕರಾಗಿದ್ದಾರೆ. ಆದರೆ ನಂತರ ನಡೆಯುವ ಏಕದಿನ ಸರಣಿಗೆ ಅವರು ಲಭ್ಯರಿರುವುದಿಲ್ಲ.</p>.<p>ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪೆಲ್ಲೆಕೆಲ್ಲೆಯಲ್ಲಿ ನಡೆಯಲಿವೆ. ಮೂರು ಏಕದಿನ ಪಂದ್ಯಗಳು, ಆಗಸ್ಟ್ 2, 4 ಮತ್ತು 7ರಂದು ನಿಗದಿಯಾಗಿವೆ.</p>.<p>ಟಿ20 ವಿಶ್ವಕಪ್ ಗೆದ್ದ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾದ ಪಾಂಡ್ಯ, ಏಕದಿನ ಸರಣಿಗೆ ‘ವೈಯಕ್ತಿಕ ಕಾರಣ’ಗಳಿಂದ ಅಲಭ್ಯರಾಗಿದ್ದಾರೆ. </p>.<p>‘ಪಾಂಡ್ಯ ಸಂಪೂರ್ಣವಾಗಿ ಫಿಟ್ ಆಗಿದ್ದು, ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದು ಬಿಸಿಸಿಐನ ಮೂಲವೊಂದು ಪಿಟಿಐಗೆ ತಿಳಿಸಿದೆ. ಇತ್ತೀಚಿನ ವಿಶ್ವಕಪ್ ಫೈನಲ್ ನಂತರ ರೋಹಿತ್ ಶರ್ಮಾ ಅವರು ಟಿ20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.</p>.<p>ಟಿ20 ತಂಡದ ಉಪನಾಯಕ ಯಾರೆಂದು ಸ್ಪಷ್ಟವಾಗಿಲ್ಲ. ಜಿಂಬಾಬ್ವೆ ವಿರುದ್ಧ 4–1ರಲ್ಲಿ ಸರಣಿ ಗೆದ್ದ ತಂಡದ ನಾಯಕರಾಗಿದ್ದ ಶುಭಮನ್ ಗಿಲ್ ಮತ್ತು ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಗೆ ನಾಯಕರಾಗಿದ್ದ ಸೂರ್ಯಕುಮಾರ್ ಯಾದವ್ ಇವರಲ್ಲಿ ಒಬ್ಬರು ಉಪನಾಯರಾಗುವ ಸಾಧ್ಯತೆ ದಟ್ಟವಾಗಿದೆ.</p>.<p>ಏಕದಿನ ಸರಣಿಗೆ ಪಾಂಡ್ಯ ಅವರು ಈಗಾಗಲೇ ವಿರಾಮ ಕೇಳಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರಿಗೂ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.</p>.<p>ಏಕದಿನ ಸರಣಿಗೆ ನಾಯಕಪಟ್ಟ ಕೆ.ಎಲ್.ರಾಹುಲ್ ಅಥವಾ ಗಿಲ್ ಇವರಲ್ಲಿ ಒಬ್ಬರಿಗೆ ಒಲಿಯಬಹುದು.</p>.<p><strong>ದುಲೀಪ್–ವಲಯ ಆಯ್ಕೆ ಸಮಿತಿ ಇಲ್ಲ:</strong></p>.<p>ರಾಷ್ಟ್ರೀಯ ತಂಡದ ಕರ್ತವ್ಯದಲ್ಲಿಲ್ಲದ ವೇಳೆ, ಭಾರತ ತಂಡದ ಪ್ರಮುಖ ಆಟಗಾರರೂ ದೇಶಿಯ ಟೂರ್ನಿಯಲ್ಲಿ ಆಡಬೇಕೆಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ. ಇದರ ನಡುವೆಯೂ ಅಪವಾದವೆನ್ನುವಂತೆ ರೋಹಿತ್, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬೂಮ್ರಾ ಅವರಂಥ ಆಟಗಾರರಿಗೆ ರಿಯಾಯಿತಿ ದೊರೆತಿದೆ.</p>.<p>ಆದರೆ ಟೆಸ್ಟ್ ಪರಿಣತ ಆಟಗಾರರು, ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ಸರಣಿಗೆ ಪೂರ್ವಭಾವಿಯಾಗಿ ಆಗಸ್ಟ್ನಲ್ಲಿ ನಡೆಯಲಿರುವ ದುಲೀಪ್ ಟ್ರೋಫಿಯಲ್ಲಿ ಒಂದೆರಡು ಪಂದ್ಯಗಳನ್ನಾದರೂ ಆಡಬೇಕು ಎಂದು ಬಿಸಿಸಿಐ ಬಯಸಿದೆ. ಈ ಬಾರಿ ದುಲೀಪ್ ಟ್ರೋಫಿಗೆ ವಲಯ ಮಟ್ಟದ ಆಯ್ಕೆ ಸಮಿತಿ ಇರುವುದಿಲ್ಲ. ರಾಷ್ಟ್ರೀಯ ಆಯ್ಕೆ ಸಮಿತಿಯೇ ದುಲೀಪ್ ಟ್ರೋಫಿಗೆ ತಂಡಗಳ ಆಯ್ಕೆ ಮಾಡಲಿದೆ.</p>.<p>ಟೆಸ್ಟ್ ತಂಡಕ್ಕೆ ರೇಸ್ನಲ್ಲಿರುವವರನ್ನು ದುಲೀಪ್ ಟ್ರೋಫಿ ಆಯ್ಕೆ ಮಾಡಲಾಗುವುದು. ರೋಹಿತ್, ವಿರಾಟ್ ಮತ್ತು ಬೂಮ್ರಾ ಅವರಿಗೆ ಸಂಬಂಧಿಸಿದಂತೆ ಆಡಬೇಕೇ, ಬೇಡವೇ ಎಂಬುದನ್ನು ಅವರಿಗೆ ಬಿಡಲಾಗುವುದು ಎಂದು ಮೂಲವೊಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>