ಆರ್ಸಿಬಿಯ ನಾಲ್ಕು ವಿಕೆಟ್ ಕಬಳಿಸಿದ ಶ್ರೀಲಂಕಾದ ಲಸಿತ್ ಮಾಲಿಂಗ ಅವರನ್ನೂ ರೋಹಿತ್ ಕೊಂಡಾಡಿದರು. ‘ಲಸಿತ್ ಮಾಲಿಂಗ ಕೆಲವು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಆದರೆ ಆಡಿದ ಪಂದ್ಯಗಳಲ್ಲೆಲ್ಲ ಉತ್ತಮ ಸಾಧನೆ ಮಾಡಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ಅಂತಿಮ ಓವರ್ಗಳಲ್ಲಿ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕುವುದು ಕಷ್ಟ. ಮಾಲಿಂಗ ಈ ಸವಾಲನ್ನು ಸಮರ್ಥವಾಗಿ ಮೆಟ್ಟಿ ನಿಂತಿದ್ದಾರೆ’ ಎಂದು ರೋಹಿತ್ ನುಡಿದರು.