<p><strong>ದುಬೈ:</strong> ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿನಡೆಯಲಿರುವ ಅಭ್ಯಾಸ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದರೆ ಮಾತ್ರ ಹಾರ್ದಿಕ್ ಪಾಂಡ್ಯ ಅವರನ್ನು ಪ್ಲೇಯಿಂಗ್ ಇಲೆವೆನ್ಗೆ ಪರಿಗಣಿಸಬೇಕು ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ, ಐಪಿಎಲ್ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದರೂ ಬೌಲಿಂಗ್ ಮಾಡಿರಲಿಲ್ಲ. ಈಗ ವಿಶ್ವಕಪ್ನಲ್ಲಿ ಬೌಲಿಂಗ್ ಮಾಡುವರೇ ಎಂಬುದು ಅನುಮಾನವೆನಿಸಿದೆ.</p>.<p>ಓರ್ವ ಪರಿಪೂರ್ಣ ಆಲ್ರೌಂಡರ್ ಆಗಿ ಪಾಂಡ್ಯ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದನ್ನೇ ಗೌತಮ್ ಗಂಭೀರ್ ಬೊಟ್ಟು ಮಾಡಿದ್ದಾರೆ.</p>.<p>ಇದನ್ನು ಮನಗಂಡಿರುವ ಆಯ್ಕೆ ಸಮಿತಿಯು ಕೂಡ ಕೊನೆಯ ಹಂತದಲ್ಲಿ ಅಕ್ಷರ್ ಪಟೇಲ್ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಮಧ್ಯಮ ಗತಿಯ ವೇಗದ ಬೌಲರ್ನ ಕೊರತೆಯನ್ನು ತುಂಬುವ ಪ್ರಯತ್ನ ಮಾಡಿದೆ.</p>.<p>'ಹಾರ್ದಿಕ್ ಪಾಂಡ್ಯ ನೆಟ್ಸ್ನಲ್ಲಿಮಾತ್ರವಲ್ಲದೆ ಎರಡು ಅಭ್ಯಾಸ ಪಂದ್ಯಗಳಲ್ಲಿ ಸರಿಯಾಗಿ ಬೌಲಿಂಗ್ ಮಾಡಿದರೆ ಮಾತ್ರ ಪ್ಲೇಯಿಂಗ್ ಇಲೆವೆನ್ಗೆ ಪ್ರವೇಶಿಸಬೇಕು. ನೆಟ್ಸ್ನಲ್ಲಿ ಬೌಲಿಂಗ್ ಮಾಡುವುದಕ್ಕೂ ವಿಶ್ವಕಪ್ನಲ್ಲಿ ಬಾಬರ್ ಆಜಂ ಅವರಂತಹ ಗುಣಮಟ್ಟದ ಬ್ಯಾಟರ್ಗಳ ವಿರುದ್ಧ ಬೌಲಿಂಗ್ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ' ಎಂದು ಹೇಳಿದರು.</p>.<p>'ಹಾರ್ದಿಕ್ ಪಾಂಡ್ಯ ಅಭ್ಯಾಸ ಪಂದ್ಯ ಹಾಗೂ ನೆಟ್ಸ್ನಲ್ಲಿ ಶೇಕಡಾ 100ರಷ್ಟು ಬೌಲಿಂಗ್ ಮಾಡಬೇಕು. ಗಂಟೆಗೆ 115-120 ಕಿ.ಮೀ. ವೇಗದಲ್ಲಿ ಮಾತ್ರ ಬೌಲಿಂಗ್ ಮಾಡಿದರೂ ಅಪಾಯವನ್ನು ಆಹ್ವಾನಿಸಲು ನಾನು ಸಿದ್ಧನಿಲ್ಲ' ಎಂದು ಗಂಭೀರ್ ಹೇಳಿದರು.</p>.<p>ಕಳೆದ ಕೆಲವು ವರ್ಷಗಳಲ್ಲಿ ಬೆನ್ನು ನೋವು ಸೇರಿದಂತೆ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಪಾಂಡ್ಯ, ವಿಶ್ವಕಪ್ನಲ್ಲಿ ಬೌಲಿಂಗ್ ಮಾಡುವರೇ ಎಂಬುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿನಡೆಯಲಿರುವ ಅಭ್ಯಾಸ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದರೆ ಮಾತ್ರ ಹಾರ್ದಿಕ್ ಪಾಂಡ್ಯ ಅವರನ್ನು ಪ್ಲೇಯಿಂಗ್ ಇಲೆವೆನ್ಗೆ ಪರಿಗಣಿಸಬೇಕು ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ, ಐಪಿಎಲ್ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದರೂ ಬೌಲಿಂಗ್ ಮಾಡಿರಲಿಲ್ಲ. ಈಗ ವಿಶ್ವಕಪ್ನಲ್ಲಿ ಬೌಲಿಂಗ್ ಮಾಡುವರೇ ಎಂಬುದು ಅನುಮಾನವೆನಿಸಿದೆ.</p>.<p>ಓರ್ವ ಪರಿಪೂರ್ಣ ಆಲ್ರೌಂಡರ್ ಆಗಿ ಪಾಂಡ್ಯ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದನ್ನೇ ಗೌತಮ್ ಗಂಭೀರ್ ಬೊಟ್ಟು ಮಾಡಿದ್ದಾರೆ.</p>.<p>ಇದನ್ನು ಮನಗಂಡಿರುವ ಆಯ್ಕೆ ಸಮಿತಿಯು ಕೂಡ ಕೊನೆಯ ಹಂತದಲ್ಲಿ ಅಕ್ಷರ್ ಪಟೇಲ್ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಮಧ್ಯಮ ಗತಿಯ ವೇಗದ ಬೌಲರ್ನ ಕೊರತೆಯನ್ನು ತುಂಬುವ ಪ್ರಯತ್ನ ಮಾಡಿದೆ.</p>.<p>'ಹಾರ್ದಿಕ್ ಪಾಂಡ್ಯ ನೆಟ್ಸ್ನಲ್ಲಿಮಾತ್ರವಲ್ಲದೆ ಎರಡು ಅಭ್ಯಾಸ ಪಂದ್ಯಗಳಲ್ಲಿ ಸರಿಯಾಗಿ ಬೌಲಿಂಗ್ ಮಾಡಿದರೆ ಮಾತ್ರ ಪ್ಲೇಯಿಂಗ್ ಇಲೆವೆನ್ಗೆ ಪ್ರವೇಶಿಸಬೇಕು. ನೆಟ್ಸ್ನಲ್ಲಿ ಬೌಲಿಂಗ್ ಮಾಡುವುದಕ್ಕೂ ವಿಶ್ವಕಪ್ನಲ್ಲಿ ಬಾಬರ್ ಆಜಂ ಅವರಂತಹ ಗುಣಮಟ್ಟದ ಬ್ಯಾಟರ್ಗಳ ವಿರುದ್ಧ ಬೌಲಿಂಗ್ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ' ಎಂದು ಹೇಳಿದರು.</p>.<p>'ಹಾರ್ದಿಕ್ ಪಾಂಡ್ಯ ಅಭ್ಯಾಸ ಪಂದ್ಯ ಹಾಗೂ ನೆಟ್ಸ್ನಲ್ಲಿ ಶೇಕಡಾ 100ರಷ್ಟು ಬೌಲಿಂಗ್ ಮಾಡಬೇಕು. ಗಂಟೆಗೆ 115-120 ಕಿ.ಮೀ. ವೇಗದಲ್ಲಿ ಮಾತ್ರ ಬೌಲಿಂಗ್ ಮಾಡಿದರೂ ಅಪಾಯವನ್ನು ಆಹ್ವಾನಿಸಲು ನಾನು ಸಿದ್ಧನಿಲ್ಲ' ಎಂದು ಗಂಭೀರ್ ಹೇಳಿದರು.</p>.<p>ಕಳೆದ ಕೆಲವು ವರ್ಷಗಳಲ್ಲಿ ಬೆನ್ನು ನೋವು ಸೇರಿದಂತೆ ಫಿಟ್ನೆಸ್ ಸಮಸ್ಯೆ ಎದುರಿಸುತ್ತಿರುವ ಪಾಂಡ್ಯ, ವಿಶ್ವಕಪ್ನಲ್ಲಿ ಬೌಲಿಂಗ್ ಮಾಡುವರೇ ಎಂಬುದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>