ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆಗೆ ತೆರಳಿದ ಹಾರ್ದಿಕ್ ಪಾಂಡ್ಯ

Last Updated 7 ಡಿಸೆಂಬರ್ 2021, 15:31 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಗಾಯದ ಆರೈಕೆಗಾಗಿ ಮುಂಬೈಗೆ ತೆರಳಿದ್ದಾರೆ. ಇದರಿಂದಾಗಿ ಅವರು ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಬರೋಡಾ ತಂಡದಲ್ಲಿ ಕಣಕ್ಕಿಳಿಯುವುದಿಲ್ಲ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಬ್ಯಾಟಿಂಗ್‌ನಲ್ಲಿಯೂ ಬಹಳಷ್ಟು ವೈಫಲ್ಯ ಅನುಭವಿಸಿದ್ದರು.

‘ಕಳೆದ ಮೂರು ವರ್ಷಗಳಲ್ಲಿ ಹಾರ್ದಿಕ್ ಬರೋಡಾ ತಂಡದಲ್ಲಿ ಆಡಿದ್ದು ಕಡಿಮೆ. ಈ ಬಾರಿ ಆಡುವ ಕುರಿತು ನಾವು ವಿಚಾರಿಸಿದೆವು. ಅದಕ್ಕೆ ಅವರು ಒಂದು ಸಾಲಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಮುಂಬೈಗೆ ಪುನಶ್ಚೇತನಕ್ಕಾಗಿ ತೆರಳುವುದಾಗಿ ತಿಳಿಸಿದ್ದಾರೆ’ ಎಂದು ಬರೋಡ ಕ್ರಿಕೆಟ್ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT