<p><strong>ನವದೆಹಲಿ: </strong>ಆಸ್ಟ್ರೇಲಿಯಾದಲ್ಲಿ ಇದೇ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಟಿ20 ವಿಶ್ವಕಪ್ ಟೂರ್ನಿಯು ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಗಾದರೆ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಆಯೋಜಿಸಲು ಅವಕಾಶ ಸಿಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಪೆಕ್ಸ್ ಕೌನ್ಸಿಲ್ ಸದಸ್ಯ ಅನ್ಷುಮನ್ ಗಾಯಕವಾಡ್ ತಿಳಿಸಿದ್ದಾರೆ.</p>.<p>ಕೊರೊನಾ ವೈರಸ್ ಸೋಂಕು ತಡೆಯಲು ದೇಶದಲ್ಲಿ ಲಾಕ್ಡೌನ್ ವಿಧಿಸಲಾಗಿದೆ. ಅದರಿಂದಾಗಿ ಮಾರ್ಚ್ ಕೊನೆಯ ವಾರದಲ್ಲಿ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ.</p>.<p>‘ಟಿ20 ವಿಶ್ವಕಪ್ ಟೂರ್ನಿಯು ಆಯೋಜನೆಗೊಳ್ಳುವುದು ಅನುಮಾನವಾಗಿದೆ. ಅಕ್ಟೋಬರ್ ಹೊತ್ತಿಗೆ ನಮ್ಮ ದೇಶದಲ್ಲಿ ಪರಿಸ್ಥಿತಿ ಸುಧಾರಣೆಯಾಗಿದ್ದರೆ ಐಪಿಎಲ್ ನಡೆಸಲು ಅವಕಾಶ ಸಿಗಬಹುದು. ಕೊರೊನಾ ಮಹಾಮಾರಿಯು ನಿಯಂತ್ರಣಕ್ಕೆ ಬರುವುದು ಮುಖ್ಯ. ಆಗ ಮಾತ್ರ ಯೋಜನೆ ರೂಪಿಸಲು ಸಾಧ್ಯವಾಗುತ್ತದೆ’ ಎಂದು ಹೇಳಿದ್ದಾರೆ.</p>.<p>‘ಭವಿಷ್ಯದಲ್ಲಿ ಕ್ರಿಕೆಟ್ ನಲ್ಲಿ ಹಲವು ಬದಲಾವಣೆಗಳಾಗುವುದು ಖಚಿತ. ಪ್ರೇಕ್ಷಕರಿಲ್ಲದ ಕ್ರೀಡಾಂಗಣದಲ್ಲಿ ಆಡುವುದನ್ನು ಆಟಗಾರರು ರೂಢಿಸಿಕೊಳ್ಳಬೇಕಾಗಬಹುದು. ಇದಲ್ಲದೇ ಇನ್ನೂ ಕೆಲವು ಬದಲಾವಣೆಗಳನ್ನು ಸವಾಲುಗಳಂತೆ ಸ್ವೀಕರಿಸಿ ಯಶಸ್ವಿಯಾಗಬೇಕಿದೆ’ ಎಂದು ಅನ್ಷುಮನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಸ್ಟ್ರೇಲಿಯಾದಲ್ಲಿ ಇದೇ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಟಿ20 ವಿಶ್ವಕಪ್ ಟೂರ್ನಿಯು ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಹಾಗಾದರೆ, ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಆಯೋಜಿಸಲು ಅವಕಾಶ ಸಿಗಬಹುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಪೆಕ್ಸ್ ಕೌನ್ಸಿಲ್ ಸದಸ್ಯ ಅನ್ಷುಮನ್ ಗಾಯಕವಾಡ್ ತಿಳಿಸಿದ್ದಾರೆ.</p>.<p>ಕೊರೊನಾ ವೈರಸ್ ಸೋಂಕು ತಡೆಯಲು ದೇಶದಲ್ಲಿ ಲಾಕ್ಡೌನ್ ವಿಧಿಸಲಾಗಿದೆ. ಅದರಿಂದಾಗಿ ಮಾರ್ಚ್ ಕೊನೆಯ ವಾರದಲ್ಲಿ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ.</p>.<p>‘ಟಿ20 ವಿಶ್ವಕಪ್ ಟೂರ್ನಿಯು ಆಯೋಜನೆಗೊಳ್ಳುವುದು ಅನುಮಾನವಾಗಿದೆ. ಅಕ್ಟೋಬರ್ ಹೊತ್ತಿಗೆ ನಮ್ಮ ದೇಶದಲ್ಲಿ ಪರಿಸ್ಥಿತಿ ಸುಧಾರಣೆಯಾಗಿದ್ದರೆ ಐಪಿಎಲ್ ನಡೆಸಲು ಅವಕಾಶ ಸಿಗಬಹುದು. ಕೊರೊನಾ ಮಹಾಮಾರಿಯು ನಿಯಂತ್ರಣಕ್ಕೆ ಬರುವುದು ಮುಖ್ಯ. ಆಗ ಮಾತ್ರ ಯೋಜನೆ ರೂಪಿಸಲು ಸಾಧ್ಯವಾಗುತ್ತದೆ’ ಎಂದು ಹೇಳಿದ್ದಾರೆ.</p>.<p>‘ಭವಿಷ್ಯದಲ್ಲಿ ಕ್ರಿಕೆಟ್ ನಲ್ಲಿ ಹಲವು ಬದಲಾವಣೆಗಳಾಗುವುದು ಖಚಿತ. ಪ್ರೇಕ್ಷಕರಿಲ್ಲದ ಕ್ರೀಡಾಂಗಣದಲ್ಲಿ ಆಡುವುದನ್ನು ಆಟಗಾರರು ರೂಢಿಸಿಕೊಳ್ಳಬೇಕಾಗಬಹುದು. ಇದಲ್ಲದೇ ಇನ್ನೂ ಕೆಲವು ಬದಲಾವಣೆಗಳನ್ನು ಸವಾಲುಗಳಂತೆ ಸ್ವೀಕರಿಸಿ ಯಶಸ್ವಿಯಾಗಬೇಕಿದೆ’ ಎಂದು ಅನ್ಷುಮನ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>