ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ (ಎಂಪಿಸಿಎ) ಆಜೀವ ಸದಸ್ಯ ಸಂಜೀವ್ ಗುಪ್ತಾ ಅವರು ದೂರು ನೀಡಿದ್ದರು. ರಾಹುಲ್ ಅವರು ಇಂಡಿಯಾ ಸಿಮೆಂಟ್ಸ್ನಲ್ಲಿ ಉನ್ನತ ಸ್ಥಾನದಲ್ಲಿರುವ ಉದ್ಯೋಗಿ. ಆದರೂ ಅವರಿಗೆ ಎನ್ಸಿಎ (ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ)ಯ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವುದು ಹಿತಾಸಕ್ತಿ ಸಂಘರ್ಷ ನಿಯಮದ ಉಲ್ಲಂಘನೆ ಎಂದು ಗುಪ್ತಾ ದೂರಿದ್ದರು. ಅದಕ್ಕಾಗಿ ಹೋದ ತಿಂಗಳು ದ್ರಾವಿಡ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಇದೀಗ ಎರಡನೇ ಬಾರಿ ವಿಚಾರಣೆಗೆ ಕರೆಯಲಾಗಿತ್ತು. 46 ವರ್ಷದ ದ್ರಾವಿಡ್ ಅವರು ತಮ್ಮ ವಕೀಲರೊಂದಿಗೆ ಹಾಜರಾಗಿದ್ದರು.