<p>ಹೊಸದುರ್ಗ: ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.</p>.<p>ಜೂನಿಯರ್ ಕಾಲೇಜು ಆವರಣದಲ್ಲಿ ಎಲ್ಇಡಿ ಪರದೆಯಲ್ಲಿ ಕ್ರಿಕೆಟ್ ವೀಕ್ಷಿಸುತ್ತಿದ್ದ ಅಭಿಮಾನಿಗಳು ಆರ್ಸಿಬಿ ಗೆಲುವನ್ನು ಸಂಭ್ರಮಿಸಿದರು.</p>.<p>ಮುಖಂಡರಾದ ಬಿ.ಜಿ. ಅರುಣ್ ಕುಮಾರ್ ಹಾಗೂ ದಳವಾಯಿ ವೆಂಕಟೇಶ್ ಅವರ ಸಹಕಾರದಿಂದ ಜೂನಿಯರ್ ಕಾಲೇಜು ಆವರಣದಲ್ಲಿ ದೊಡ್ಡ ಪರದೆ ಅಳವಡಿಸಲಾಗಿತ್ತು. ಸಂಜೆ 7 ಗಂಟೆ ಆಗುತ್ತಿದ್ದಂತೆಯೇ ಯುವಕರು, ಮಕ್ಕಳು, ಅಭಿಮಾನಿಗಳೆಲ್ಲಾ ಘೋಷಣೆ ಕೂಗುತ್ತ, ಆರ್ಸಿಬಿ ಜೆರ್ಸಿ ಹಾಕಿಕೊಂಡು ಆವರಣದಲ್ಲಿ ಜಮಾಯಿಸಿದ್ದರು.</p>.<p>‘ಸೋತರೂ ಗೆದ್ದರೂ ಆರ್ಸಿಬಿ ಮೇಲೆ ನಮ್ಮ ಪ್ರೀತಿ, ಅಭಿಮಾನ ಎಂದಿಗೂ ಕಡಿಮೆಯಾಗಲ್ಲ. 17 ವರ್ಷದಿಂದ ಆರ್ಸಿಬಿ ಅಭಿಮಾನಿಯಾಗಿ ಪಂದ್ಯ ವೀಕ್ಷಣೆ ಮಾಡುತ್ತಿದ್ದೇವೆ. 2025ರಲ್ಲಿ ಮೊದಲನೇ ಬಾರಿ ಕಪ್ ಗೆದ್ದ ಸಂದರ್ಭದಲ್ಲಿ ತಾಲ್ಲೂಕಿನಾದ್ಯಂತ ಒಂದು ವಾರ ಹಬ್ಬದ ವಾತಾವರಣ ಮನೆ ಮಾಡಿತ್ತು. ಈ ಬಾರಿಯೂ ಕಪ್ ಗೆದ್ದಿದ್ದೇವೆ. ತಾಲ್ಲೂಕಿನ ಯುವಕರು, ಪೊಲೀಸ್ ಇಲಾಖೆ, ಸಾರ್ವಜನಿಕರ ಸಹಕಾರದಿಂದ ಪಂದ್ಯ ವೀಕ್ಷಣೆ ಮಾಡಿದ್ದೇವೆ’ ಎಂದು ಮುಖಂಡ ದಳವಾಯಿ ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತಾಲ್ಲೂಕಿನಾದ್ಯಂತ ಆರ್ಸಿಬಿ ಅಭಿಮಾನಿಗಳು ಬಹಳ ಇದ್ದಾರೆ. ಪ್ರತಿ ವರ್ಷ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಈ ಬಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಕ್ರಿಕೆಟ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಯುವಕರು ಆರ್ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ ಎಂದು ಬಿ.ಜಿ. ಅರುಣ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-1276586566</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸದುರ್ಗ: ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.</p>.<p>ಜೂನಿಯರ್ ಕಾಲೇಜು ಆವರಣದಲ್ಲಿ ಎಲ್ಇಡಿ ಪರದೆಯಲ್ಲಿ ಕ್ರಿಕೆಟ್ ವೀಕ್ಷಿಸುತ್ತಿದ್ದ ಅಭಿಮಾನಿಗಳು ಆರ್ಸಿಬಿ ಗೆಲುವನ್ನು ಸಂಭ್ರಮಿಸಿದರು.</p>.<p>ಮುಖಂಡರಾದ ಬಿ.ಜಿ. ಅರುಣ್ ಕುಮಾರ್ ಹಾಗೂ ದಳವಾಯಿ ವೆಂಕಟೇಶ್ ಅವರ ಸಹಕಾರದಿಂದ ಜೂನಿಯರ್ ಕಾಲೇಜು ಆವರಣದಲ್ಲಿ ದೊಡ್ಡ ಪರದೆ ಅಳವಡಿಸಲಾಗಿತ್ತು. ಸಂಜೆ 7 ಗಂಟೆ ಆಗುತ್ತಿದ್ದಂತೆಯೇ ಯುವಕರು, ಮಕ್ಕಳು, ಅಭಿಮಾನಿಗಳೆಲ್ಲಾ ಘೋಷಣೆ ಕೂಗುತ್ತ, ಆರ್ಸಿಬಿ ಜೆರ್ಸಿ ಹಾಕಿಕೊಂಡು ಆವರಣದಲ್ಲಿ ಜಮಾಯಿಸಿದ್ದರು.</p>.<p>‘ಸೋತರೂ ಗೆದ್ದರೂ ಆರ್ಸಿಬಿ ಮೇಲೆ ನಮ್ಮ ಪ್ರೀತಿ, ಅಭಿಮಾನ ಎಂದಿಗೂ ಕಡಿಮೆಯಾಗಲ್ಲ. 17 ವರ್ಷದಿಂದ ಆರ್ಸಿಬಿ ಅಭಿಮಾನಿಯಾಗಿ ಪಂದ್ಯ ವೀಕ್ಷಣೆ ಮಾಡುತ್ತಿದ್ದೇವೆ. 2025ರಲ್ಲಿ ಮೊದಲನೇ ಬಾರಿ ಕಪ್ ಗೆದ್ದ ಸಂದರ್ಭದಲ್ಲಿ ತಾಲ್ಲೂಕಿನಾದ್ಯಂತ ಒಂದು ವಾರ ಹಬ್ಬದ ವಾತಾವರಣ ಮನೆ ಮಾಡಿತ್ತು. ಈ ಬಾರಿಯೂ ಕಪ್ ಗೆದ್ದಿದ್ದೇವೆ. ತಾಲ್ಲೂಕಿನ ಯುವಕರು, ಪೊಲೀಸ್ ಇಲಾಖೆ, ಸಾರ್ವಜನಿಕರ ಸಹಕಾರದಿಂದ ಪಂದ್ಯ ವೀಕ್ಷಣೆ ಮಾಡಿದ್ದೇವೆ’ ಎಂದು ಮುಖಂಡ ದಳವಾಯಿ ವೆಂಕಟೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ತಾಲ್ಲೂಕಿನಾದ್ಯಂತ ಆರ್ಸಿಬಿ ಅಭಿಮಾನಿಗಳು ಬಹಳ ಇದ್ದಾರೆ. ಪ್ರತಿ ವರ್ಷ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಈ ಬಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಕ್ರಿಕೆಟ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಯುವಕರು ಆರ್ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ ಎಂದು ಬಿ.ಜಿ. ಅರುಣ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-1276586566</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>