’ನನ್ನ ತವರು ರಾಜ್ಯದಲ್ಲಿ ಕೆಲವು ನಿಯಮಬಾಹಿರ ಸಂಗತಿಗಳು ನಡೆಯುತ್ತವೆ. ಅದು ಬೇಸರದ ವಿಷಯ. ಜೂನಿಯರ್ ಕ್ರಿಕೆಟಿಗನಾಗಿದ್ದಾಗ ನನ್ನೊಂದಿಗೂ ಇಂತಹದೊಂದು ಘಟನೆ ನಡೆದಿತ್ತು. ಅಯ್ಕೆ ಸಮಿತಿಯಲ್ಲಿದ್ದ ಒಬ್ಬರು ನನ್ನ ಅಪ್ಪನ ಬಳಿ ಬಂದು ವಿರಾಟ್ಗೆ ಆಯ್ಕೆಯಾಗುವ ಅರ್ಹತೆ ಇದೆ. ಆದರೆ ಸ್ವಲ್ಪ ಹೆಚ್ಚುವರಿಯಾಗಿ ಕೊಡಬೇಕಾಗುತ್ತದೆಯೆಂದು ಲಂಚ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ನನ್ನ ತಂದೆ, ಆಯ್ಕೆ ಮಾಡುವುದಾದರೆ ಮೆರಿಟ್ ಮೇಲೆ ಮಾಡಿ ಹೆಚ್ಚಿನದನ್ನೇನೂ ಕೊಡುವುದಿಲ್ಲವೆಂದು ಕಡ್ಡಿ ಮುರಿದಂತೆ ಹೇಳಿದ್ದರು‘ ಎಂದು ಸ್ಮರಿಸಿಕೊಂಡಿದ್ದಾರೆ.