ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಶಿವಯ್ಯ ಮಠಪತಿ ಮಾತನಾಡಿ, ‘ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಪರಿಕಲ್ಪನೆ ಮತ್ತು ಧೋರಣೆಗಳೇ ಬದಲಾಗುತ್ತಿವೆ. ಎಲ್ಲರೂ ಇಂಗ್ಲಿಷದದ ಶಿಕ್ಷಣದತ್ತ ವಾಲುತ್ತಿದ್ದಾರೆ. ಆದರೆ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನೀವು, ಹಿಂದಿನ ವಿದ್ಯಾರ್ಥಿ ಜೀವನದ ಜೊತೆಗಿನ ನೆನಪುಗಳನ್ನು ಸ್ಮರಿಸಿಕೊಂಡು, ಇಂದಿನ ಪಾಲಕರಾಗಿ ತಮ್ಮ ಮಕ್ಕಳಿಗೆ ಸಂಸ್ಕಾರ ಮತ್ತು ಮುಕ್ತ ಮನಸ್ಸಿನ ಶಿಕ್ಷಣ ಕೊಡಿಸಬೇಕು’ ಎಂದು ತಿಳಿಸಿದರು.