‘2019ರ ವಿಶ್ವಕಪ್ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಲು ಬೇಸರವಾಗುತ್ತಿದೆ. ದೌರ್ಭಾಗ್ಯವಶಾತ್, ನನ್ನ ಹೆಬ್ಬೆರಳ ಗಾಯ ನಿಗದಿತ ಸಮಯದಲ್ಲಿ ಗುಣವಾಗಿಲ್ಲ. ನಿಜವಾಗಿಯೂ ನನ್ನ ದೇಶಕ್ಕಾಗಿ ವಿಶ್ವಕಪ್ ಟೂರ್ನಿಯಲ್ಲಿ ಆಡಬೇಕು ಎಂಬ ಬಯಕೆ ನನ್ನದಾಗಿತ್ತು. ಇದೀಗ ತಂಡದಿಂದ ಹೊರಗುಳಿದು ಗುಣಮುಖನಾಗುವುದರತ್ತ ಮತ್ತು ಮುಂದಿನ ಟೂರ್ನಿಗಳತ್ತ ಗಮನಹರಿಸಬೇಕಿದೆ. ಭಾರತ ತಂಡದ ಎಲ್ಲ ಆಟಗಾರರು ಚೆನ್ನಾಗಿ ಆಡುತ್ತಿದ್ದಾರೆ. ಅವರು ವಿಶ್ವಕಪ್ ಗೆಲ್ಲಲಿದ್ದಾರೆ. ನಮಗಾಗಿ ಪ್ರಾರ್ಥಿಸುತ್ತಿರಿ, ನಮ್ಮನ್ನು ಬೆಂಬಲಿಸುತ್ತಿರಿ. ಸಹ ಆಟಗಾರರು ನೀಡಿದ ಬೆಂಬಲ ಮತ್ತು ಪ್ರೀತಿಗೆ ಋಣಿ. ಹಾಗೆಯೇ ನಿಮ್ಮ ಸಪೋರ್ಟ್ಮತ್ತು ಪ್ರಾರ್ಥನೆ ನಮಗೆ ತುಂಬಾ ಮುಖ್ಯವಾದದ್ದು. ಅದಕ್ಕಾಗಿ ಧನ್ಯವಾದಗಳು. ಜೈ ಹಿಂದ್!’ ಎಂದು ಧವನ್ ಟ್ವೀಟ್ ಮಾಡಿದ್ದಾರೆ. ಜತೆಗೆ, ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೊವನ್ನೂ ಪೋಸ್ಟ್ ಮಾಡಿದ್ದಾರೆ.