<p><strong>ದುಬೈ:</strong> 'ನಾನು ಕ್ರಿಕೆಟ್ ಅಭಿಮಾನಿಗಳ ಹೃದಯ ಮರಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ' ಎಂದು ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. </p><p>ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ಗೆ ಮರಳಿದ್ದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಅವರಿಂದ ಕಪ್ತಾನಗಿರಿ ವಹಿಸಿಕೊಂಡಿದ್ದರು. </p><p>ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ನ ಈ ನಿರ್ಧಾರವು ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಹಾರ್ದಿಕ್ ಪಾಂಡ್ಯ ಅವರನ್ನು ಗುರಿ ಮಾಡಿದ್ದ ಅಭಿಮಾನಿಗಳು, ಮೈದಾನದಲ್ಲೇ ವ್ಯಾಪಕವಾಗಿ ಗೇಲಿ ಮಾಡಿದ್ದರು. </p><p>ಆದರೆ ಕಳೆದ ವರ್ಷವೇ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಮಹತ್ವದ ಪಾತ್ರ ವಹಿಸಿದ್ದರು. ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಓವರ್ನಲ್ಲಿ ಭಾರತಕ್ಕೆ ಚಾರಿತ್ರಿಕ ಗೆಲುವು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. </p><p>ಟೂರ್ನಿಯಲ್ಲಿ 144 ರನ್ ಗಳಿಸಿದ್ದ ಪಾಂಡ್ಯ 11 ವಿಕೆಟ್ಗಳನ್ನು ಪಡೆದು ಭಾರತದ ನೈಜ ಆಲ್ರೌಂಡ್ ಆಟಗಾರ ಎನಿಸಿದ್ದರು. </p><p>'ಅಭಿಮಾನಿಗಳೇ ಹೇಳಿದಂತೆ ನನ್ನ ಪಾಲಿಗೆ ಜೀವನ ಪೂರ್ಣ ವಲಯವನ್ನು ಪರಿಭ್ರಮಿಸಿದೆ. ಇಲ್ಲಿಂದ ಹಿಂದಕ್ಕೆ ತಿರುಗಿ ನೋಡುವ ಅಗತ್ಯವಿಲ್ಲ. ಅಭಿಮಾನಿಗಳ ಹೃದಯವನ್ನು ಮರಳಿ ಗೆದ್ದಿದ್ದೇನೆ' ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. </p><p>ಹಾರ್ದಿಕ್ ಪಾಂಡ್ಯ ಹೇಳಿಕೆಯನ್ನು ಬಿಸಿಸಿಐ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. </p><p>'ಹೊಸ ವರ್ಷ, ಹೊಸ ಟೂರ್ನಿ ಮತ್ತು ಹೊಸ ಸವಾಲನ್ನು ಎದುರಿಸಲು ಸಜ್ಜಾಗಿದ್ದೇನೆ. ಮತ್ತೆ ಚಾಂಪಿಯನ್ ಆಗಲು ಸಿದ್ದರಾಗಿದ್ದೇವೆ' ಎಂದು ಹೇಳಿದ್ದಾರೆ.</p><p>ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. </p>.Champions Trophy History | ಭಾರತ-ಪಾಕ್ ಐದು ಬಾರಿ ಮುಖಾಮುಖಿ; ಯಾರಿಗೆ ಮೇಲುಗೈ?.Champions Trophy | IND vs PAK: ಮರಳುಗಾಡಿನಲ್ಲಿ ಭಾರತ–ಪಾಕ್ ಹಣಾಹಣಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> 'ನಾನು ಕ್ರಿಕೆಟ್ ಅಭಿಮಾನಿಗಳ ಹೃದಯ ಮರಳಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ' ಎಂದು ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. </p><p>ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ಗೆ ಮರಳಿದ್ದ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಅವರಿಂದ ಕಪ್ತಾನಗಿರಿ ವಹಿಸಿಕೊಂಡಿದ್ದರು. </p><p>ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ನ ಈ ನಿರ್ಧಾರವು ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಹಾರ್ದಿಕ್ ಪಾಂಡ್ಯ ಅವರನ್ನು ಗುರಿ ಮಾಡಿದ್ದ ಅಭಿಮಾನಿಗಳು, ಮೈದಾನದಲ್ಲೇ ವ್ಯಾಪಕವಾಗಿ ಗೇಲಿ ಮಾಡಿದ್ದರು. </p><p>ಆದರೆ ಕಳೆದ ವರ್ಷವೇ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಮಹತ್ವದ ಪಾತ್ರ ವಹಿಸಿದ್ದರು. ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಯ ಓವರ್ನಲ್ಲಿ ಭಾರತಕ್ಕೆ ಚಾರಿತ್ರಿಕ ಗೆಲುವು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. </p><p>ಟೂರ್ನಿಯಲ್ಲಿ 144 ರನ್ ಗಳಿಸಿದ್ದ ಪಾಂಡ್ಯ 11 ವಿಕೆಟ್ಗಳನ್ನು ಪಡೆದು ಭಾರತದ ನೈಜ ಆಲ್ರೌಂಡ್ ಆಟಗಾರ ಎನಿಸಿದ್ದರು. </p><p>'ಅಭಿಮಾನಿಗಳೇ ಹೇಳಿದಂತೆ ನನ್ನ ಪಾಲಿಗೆ ಜೀವನ ಪೂರ್ಣ ವಲಯವನ್ನು ಪರಿಭ್ರಮಿಸಿದೆ. ಇಲ್ಲಿಂದ ಹಿಂದಕ್ಕೆ ತಿರುಗಿ ನೋಡುವ ಅಗತ್ಯವಿಲ್ಲ. ಅಭಿಮಾನಿಗಳ ಹೃದಯವನ್ನು ಮರಳಿ ಗೆದ್ದಿದ್ದೇನೆ' ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. </p><p>ಹಾರ್ದಿಕ್ ಪಾಂಡ್ಯ ಹೇಳಿಕೆಯನ್ನು ಬಿಸಿಸಿಐ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. </p><p>'ಹೊಸ ವರ್ಷ, ಹೊಸ ಟೂರ್ನಿ ಮತ್ತು ಹೊಸ ಸವಾಲನ್ನು ಎದುರಿಸಲು ಸಜ್ಜಾಗಿದ್ದೇನೆ. ಮತ್ತೆ ಚಾಂಪಿಯನ್ ಆಗಲು ಸಿದ್ದರಾಗಿದ್ದೇವೆ' ಎಂದು ಹೇಳಿದ್ದಾರೆ.</p><p>ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ. </p>.Champions Trophy History | ಭಾರತ-ಪಾಕ್ ಐದು ಬಾರಿ ಮುಖಾಮುಖಿ; ಯಾರಿಗೆ ಮೇಲುಗೈ?.Champions Trophy | IND vs PAK: ಮರಳುಗಾಡಿನಲ್ಲಿ ಭಾರತ–ಪಾಕ್ ಹಣಾಹಣಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>