<p><strong>ಬೆಂಗಳೂರು:</strong> 'ಭಾರತಕ್ಕಾಗಿ ಸಾಧ್ಯವಾದಷ್ಟು ಐಸಿಸಿ ಟ್ರೋಫಿಗಳನ್ನು ಗೆಲ್ಲುವುದು ನನ್ನ ಗುರಿಯಾಗಿದೆ' ಎಂದು ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. </p><p>ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಗೆಲುವಿನ ಬಳಿಕ ಪಾಂಡ್ಯ ನೀಡಿರುವ ಸಂದರ್ಶನದ ವಿಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ. </p><p>'2024ರಲ್ಲಿ ನಾವು ಟ್ವೆಂಟಿ-20 ವಿಶ್ವಕಪ್ ಗೆದ್ದಾಗ ಇದು ಇಲ್ಲಿಗೆ ಅಂತ್ಯವಾಗುವುದಿಲ್ಲ ಎಂದು ಹೇಳಿದ್ದೆ. ನಾನೀಗಲೂ 5-6 ಐಸಿಸಿ ಟ್ರೋಫಿಗಳನ್ನು ಗೆಲ್ಲಲು ಬಯಸುತ್ತೇನೆ. ಈಗ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಸಾಧ್ಯವಾಗಿರುವುದರಲ್ಲಿ ಸಂತಸವಿದೆ. ಈ ಗೆಲುವು ಇಡೀ ಭಾರತೀಯರಿಗೆ ಸಲ್ಲುತ್ತದೆ' ಎಂದು ಅವರು ಹೇಳಿದ್ದಾರೆ. </p><p>'2017ರಲ್ಲಿ ನನ್ನ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಈಗ ನಾನು ಕೂಡಾ ಚಾಂಪಿಯನ್ಸ್ ಟ್ರೋಫಿ ವಿಜೇತ ಎಂದು ಹೇಳಬಲ್ಲೆ' ಎಂದು ಹಾರ್ದಿಕ್ ಸಂತಸ ವ್ಯಕ್ತಪಡಿಸಿದ್ದಾರೆ. </p><p>2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋಲನುಭವಿಸಿತ್ತು. ಫೈನಲ್ನಲ್ಲಿ ಹಾರ್ದಿಕ್ 43 ಎಸೆತಗಳಲ್ಲಿ 76 ರನ್ ಗಳಿಸಿ ರನೌಟ್ ಆಗಿದ್ದರು. </p><p>'ನನ್ನ ತಂಡದ ಗೆಲುವನ್ನು ಖಚಿತಪಡಿಸಿಕೊಳ್ಳುವುದು ನನ್ನ ಇರಾದೆಯಾಗಿದೆ. ಹಾಗಾಗಿ ಈ ಗೆಲುವು ತುಂಬಾ ತೃಪ್ತಿದಾಯಕವಾಗಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>'ಚಾಂಪಿಯನ್ಸ್ ಟ್ರೋಫಿ ಕನಸು ಈಡೇರಿದೆ. ಮುಂದಿನ ಗುರಿ ತವರಿನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಾಗಿದೆ' ಎಂದು ಪಾಂಡ್ಯ ಹೇಳಿದ್ದಾರೆ. </p> .2027ರ ವಿಶ್ವಕಪ್ನಲ್ಲಿ ರೋಹಿತ್ ಆಡುತ್ತಾರೆಯೇ? ಇಲ್ಲಿದೆ ಹಿಟ್ಮ್ಯಾನ್ ಉತ್ತರ.ಏಕದಿನ ರ್ಯಾಂಕಿಂಗ್: ರೋಹಿತ್ ಶರ್ಮಾಗೆ ಬಡ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಭಾರತಕ್ಕಾಗಿ ಸಾಧ್ಯವಾದಷ್ಟು ಐಸಿಸಿ ಟ್ರೋಫಿಗಳನ್ನು ಗೆಲ್ಲುವುದು ನನ್ನ ಗುರಿಯಾಗಿದೆ' ಎಂದು ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. </p><p>ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಗೆಲುವಿನ ಬಳಿಕ ಪಾಂಡ್ಯ ನೀಡಿರುವ ಸಂದರ್ಶನದ ವಿಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ. </p><p>'2024ರಲ್ಲಿ ನಾವು ಟ್ವೆಂಟಿ-20 ವಿಶ್ವಕಪ್ ಗೆದ್ದಾಗ ಇದು ಇಲ್ಲಿಗೆ ಅಂತ್ಯವಾಗುವುದಿಲ್ಲ ಎಂದು ಹೇಳಿದ್ದೆ. ನಾನೀಗಲೂ 5-6 ಐಸಿಸಿ ಟ್ರೋಫಿಗಳನ್ನು ಗೆಲ್ಲಲು ಬಯಸುತ್ತೇನೆ. ಈಗ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಸಾಧ್ಯವಾಗಿರುವುದರಲ್ಲಿ ಸಂತಸವಿದೆ. ಈ ಗೆಲುವು ಇಡೀ ಭಾರತೀಯರಿಗೆ ಸಲ್ಲುತ್ತದೆ' ಎಂದು ಅವರು ಹೇಳಿದ್ದಾರೆ. </p><p>'2017ರಲ್ಲಿ ನನ್ನ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಈಗ ನಾನು ಕೂಡಾ ಚಾಂಪಿಯನ್ಸ್ ಟ್ರೋಫಿ ವಿಜೇತ ಎಂದು ಹೇಳಬಲ್ಲೆ' ಎಂದು ಹಾರ್ದಿಕ್ ಸಂತಸ ವ್ಯಕ್ತಪಡಿಸಿದ್ದಾರೆ. </p><p>2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋಲನುಭವಿಸಿತ್ತು. ಫೈನಲ್ನಲ್ಲಿ ಹಾರ್ದಿಕ್ 43 ಎಸೆತಗಳಲ್ಲಿ 76 ರನ್ ಗಳಿಸಿ ರನೌಟ್ ಆಗಿದ್ದರು. </p><p>'ನನ್ನ ತಂಡದ ಗೆಲುವನ್ನು ಖಚಿತಪಡಿಸಿಕೊಳ್ಳುವುದು ನನ್ನ ಇರಾದೆಯಾಗಿದೆ. ಹಾಗಾಗಿ ಈ ಗೆಲುವು ತುಂಬಾ ತೃಪ್ತಿದಾಯಕವಾಗಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ' ಎಂದು ಅವರು ತಿಳಿಸಿದ್ದಾರೆ. </p><p>'ಚಾಂಪಿಯನ್ಸ್ ಟ್ರೋಫಿ ಕನಸು ಈಡೇರಿದೆ. ಮುಂದಿನ ಗುರಿ ತವರಿನಲ್ಲಿ ನಡೆಯಲಿರುವ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಾಗಿದೆ' ಎಂದು ಪಾಂಡ್ಯ ಹೇಳಿದ್ದಾರೆ. </p> .2027ರ ವಿಶ್ವಕಪ್ನಲ್ಲಿ ರೋಹಿತ್ ಆಡುತ್ತಾರೆಯೇ? ಇಲ್ಲಿದೆ ಹಿಟ್ಮ್ಯಾನ್ ಉತ್ತರ.ಏಕದಿನ ರ್ಯಾಂಕಿಂಗ್: ರೋಹಿತ್ ಶರ್ಮಾಗೆ ಬಡ್ತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>