ಹೌದು, ಯುವರಾಜ್ ಸಿಂಗ್ ಅವರು ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ. ತಮ್ಮ ಅತ್ಯುತ್ತಮ ಆಟದ ಮೂಲಕ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಪಂಜಾಬ್ ಮೂಲದ ಯುವಿ ರಾಷ್ಟ್ರೀಯ ತಂಡದ ನಾಯಕರಾಗುತ್ತಾರೆ ಎನ್ನುವುದು ಅವರ ಅಭಿಮಾನಿಗಳ ನಿರೀಕ್ಷೆಯಾಗಿತ್ತು. ಆದರೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯುವರಾಜ್ ಅವರನ್ನು ಕಡೆಗಣಿಸಿ ಧೋನಿ ಅವರಿಗೆ ನಾಯಕತ್ವ ವಹಿಸಿತ್ತು.