<p><strong>ಬೆಂಗಳೂರು</strong>: ಅಹಮಾದಾಬಾದ್ ವಿಮಾನ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್, ಇನ್ನು ಮುಂದೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದ ಶಪಥ ಮಾಡಿದ್ದಾರೆ.</p><p>ಗುರುವಾರ(ಜೂ. 12) ಮಧ್ಯಾಹ್ನ 1.39ರ ಸುಮಾರಿಗೆ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ದುರಂತದಲ್ಲಿ ಕನಿಷ್ಠ 265ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. </p><p>ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ವಾರ್ನರ್, ವಿಮಾನದಲ್ಲಿನ ಸಮಸ್ಯೆಗಳ ಬಗ್ಗೆ ಪೈಲಟ್ಗಳು, ಎಂಜಿನಿಯರ್ಗಳು ಮತ್ತು ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದರು. ಅದರ ಬಗ್ಗೆ ಕಂಪನಿಯ ಆಡಳಿತ ಮಂಡಳಿಯ ಗಮನಕ್ಕೂ ತಂದಿದ್ದರು. ಆದರೂ ನಿರ್ಲಕ್ಷ್ಯಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಈ ಕುರಿತ ಏರ್ ಇಂಡಿಯಾ ಕಂಪನಿಯ ಮಾಜಿ ಉದ್ಯೋಗಿ ವಿವೇಕ್ ಎಂಬುವವರ ಹಳೆಯ ಪೋಸ್ಟ್ವೊಂದನ್ನು ವಾರ್ನರ್ ಮರು ಹಂಚಿಕೊಂಡಿದ್ದಾರೆ.</p><p>‘ಇನ್ನು ಮುಂದೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು ತಿಳಿಸಿದ್ದಾರೆ.</p><p>ಈ ಮೊದಲು ಗಂಟೆಗಟ್ಟಲೇ ವಿಮಾನದಲ್ಲಿ ಕಾಯಿಸಿದ್ದಕ್ಕಾಗಿ ಏರ್ ಇಂಡಿಯಾದ ವಿರುದ್ಧ ವಾರ್ನರ್ ಗರಂ ಆಗಿದ್ದರು. ‘ಪೈಲಟ್ಗಳಿಲ್ಲದ ವಿಮಾನವನ್ನು ನಾವು ಹತ್ತಿದ್ದೇವೆ. ಪೈಲಟ್ಗಳು ಇಲ್ಲದಿದ್ದರೆ ವಿಮಾನಕ್ಕೆ ಪ್ರಯಾಣಿಕರನ್ನು ನೀವು ಏಕೆ ಹತ್ತಿಸುತ್ತೀರಿ’ ಎಂದು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಅಹಮಾದಾಬಾದ್ ವಿಮಾನ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್, ಇನ್ನು ಮುಂದೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ ಎಂದ ಶಪಥ ಮಾಡಿದ್ದಾರೆ.</p><p>ಗುರುವಾರ(ಜೂ. 12) ಮಧ್ಯಾಹ್ನ 1.39ರ ಸುಮಾರಿಗೆ ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ದುರಂತದಲ್ಲಿ ಕನಿಷ್ಠ 265ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. </p><p>ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ವಾರ್ನರ್, ವಿಮಾನದಲ್ಲಿನ ಸಮಸ್ಯೆಗಳ ಬಗ್ಗೆ ಪೈಲಟ್ಗಳು, ಎಂಜಿನಿಯರ್ಗಳು ಮತ್ತು ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದರು. ಅದರ ಬಗ್ಗೆ ಕಂಪನಿಯ ಆಡಳಿತ ಮಂಡಳಿಯ ಗಮನಕ್ಕೂ ತಂದಿದ್ದರು. ಆದರೂ ನಿರ್ಲಕ್ಷ್ಯಿಸಲಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಈ ಕುರಿತ ಏರ್ ಇಂಡಿಯಾ ಕಂಪನಿಯ ಮಾಜಿ ಉದ್ಯೋಗಿ ವಿವೇಕ್ ಎಂಬುವವರ ಹಳೆಯ ಪೋಸ್ಟ್ವೊಂದನ್ನು ವಾರ್ನರ್ ಮರು ಹಂಚಿಕೊಂಡಿದ್ದಾರೆ.</p><p>‘ಇನ್ನು ಮುಂದೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವುದಿಲ್ಲ’ ಎಂದು ತಿಳಿಸಿದ್ದಾರೆ.</p><p>ಈ ಮೊದಲು ಗಂಟೆಗಟ್ಟಲೇ ವಿಮಾನದಲ್ಲಿ ಕಾಯಿಸಿದ್ದಕ್ಕಾಗಿ ಏರ್ ಇಂಡಿಯಾದ ವಿರುದ್ಧ ವಾರ್ನರ್ ಗರಂ ಆಗಿದ್ದರು. ‘ಪೈಲಟ್ಗಳಿಲ್ಲದ ವಿಮಾನವನ್ನು ನಾವು ಹತ್ತಿದ್ದೇವೆ. ಪೈಲಟ್ಗಳು ಇಲ್ಲದಿದ್ದರೆ ವಿಮಾನಕ್ಕೆ ಪ್ರಯಾಣಿಕರನ್ನು ನೀವು ಏಕೆ ಹತ್ತಿಸುತ್ತೀರಿ’ ಎಂದು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>