‘ಅಗರವಾಲ್ ನಿಯಮಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದನ್ನು ಪತ್ತೆ ಹಚ್ಚಲಾಗಿತ್ತು. ಅವರೊಂದಿಗೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕದಲ್ಲಿದ್ದ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ಆರೋಪವೂ ಅವರ ಮೇಲಿದೆ. ಅವರಿಬ್ಬರ ಫೋನ್ ಕರೆಗಳ ದಾಖಲೆಗಳು ಸಿಕ್ಕಿವೆ. ಅವರಿಬ್ಬರ ನಡುವೆ ಮಾತುಕತೆ ಮತ್ತು ಸಂದೇಶಗಳ ವಿನಿಮಯಗಳು ನಡೆದಿರುವುದು ದೃಢಪಟ್ಟಿದೆ. ಅಲ್ಲದೇ ತನಿಖೆಯನ್ನು ವಿಳಂಬಗೊಳಿಸಲು ಮತ್ತು ಹಾದಿ ತಪ್ಪಿಸಲು ಕೂಡ ಅವರು ಪ್ರಯತ್ನಿಸಿದ್ದಾರೆ. ಆದ್ದರಿಂದ ಅವರಿಗೆ ಶಿಕ್ಷೆ ವಿಧಿಸಲಾಗಿದೆ’ ಎಂದು ಐಸಿಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.