<p>ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೋಮವಾರ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಅಂತಿಮ ಪಂದ್ಯದಲ್ಲಿ ಭಾರತ ತಂಡವು ನಮೀಬಿಯಾ ವಿರುದ್ಧ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. </p> <p>ಈ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗೆಲುವಿನ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಇದು ವಿದಾಯದ ಪಂದ್ಯವಾಗಿತ್ತು. </p> <p>ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾಗಿರುವ ಭಾರತ ತಂಡವು ಸತತ ಮೂರನೇ ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿದೆ. ಆ ಮೂಲಕ ಐದು ಪಂದ್ಯಗಳಲ್ಲಿ ಒಟ್ಟು ಆರು ಅಂಕಗಳನ್ನು ಕಲೆ ಹಾಕಿದೆ. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದು ಭಾರತದ ವಿಶ್ವಕಪ್ ಕನಸು ಭಗ್ನಗೊಳ್ಳಲು ಕಾರಣವಾಗಿದೆ. </p> <p>ರವೀಂದ್ರ ಜಡೇಜ (16ಕ್ಕೆ 3) ಹಾಗೂ ಆರ್. ಅಶ್ವಿನ್ (20ಕ್ಕೆ 3) ಸ್ಪಿನ್ ಮೋಡಿಗೆ ಸಿಲುಕಿರುವ ನಮೀಬಿಯಾ 20 ಓವರ್ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಸಾಧ್ಯವಾಯಿತು.</p> <p>ಬಳಿಕ ಗುರಿ ಬೆನ್ನತ್ತಿದ ಭಾರತ 15.2 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ರೋಹಿತ್ ಶರ್ಮಾ (56) ಹಾಗೂ ಕೆ.ಎಲ್. ರಾಹುಲ್ (54*) ಆಕರ್ಷಕ ಅರ್ಧಶತಕ ಗಳಿಸಿ ತಂಡದ ಗೆಲುವನ್ನು ಸುಲಭಗೊಳಿಸಿದರು. </p> .<p>ಐದು ಓವರ್ ಅಂತ್ಯಕ್ಕೆ ಭಾರತ ವಿಕೆಟ್ ನಷ್ಟವಿಲ್ಲದೆ 44 ರನ್ ಗಳಿಸಿದೆ. ರೋಹಿತ್ ಶರ್ಮಾ (37*) ಹಾಗೂ ಕೆ.ಎಲ್. ರಾಹುಲ್ (7*) ಕ್ರೀಸಿನಲ್ಲಿದ್ದಾರೆ. </p> .<p>ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೋಮವಾರ ನಡೆಯುತ್ತಿರುವ ಸೂಪರ್-12 ಹಂತದ ಎರಡನೇ ಗುಂಪಿನ ಅಂತಿಮ ಪಂದ್ಯದಲ್ಲಿ ರವೀಂದ್ರ ಜಡೇಜ (16ಕ್ಕೆ 3) ಹಾಗೂ ಆರ್. ಅಶ್ವಿನ್ (20ಕ್ಕೆ 3) ಸ್ಪಿನ್ ದಾಳಿಗೆ ಸಿಲುಕಿರುವ ನಮೀಬಿಯಾ 20 ಓವರ್ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಸಾಧ್ಯವಾಯಿತು.</p> <p>ನಮೀಬಿಯಾ ಪರ ಡೇವಿಡ್ ವೀಸ್ ಗರಿಷ್ಠ 26 ರನ್ ಗಳಿಸಿದರು. ಸ್ಟೀಫನ್ ಬಾರ್ಡ್ (21), ಮೈಕೆಲ್ ವಾನ್ ಲಿಂಗೆನ್ (14), ಜಾನ್ ಫ್ರಿಲಿಂಕ್ (15*) ಹಾಗೂ ರುಬೆನ್ ಟ್ರಂಪಲ್ಮ್ಯಾನ್ (13*) ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು. </p> <p>ಭಾರತದ ಪರ ಜಡೇಜ ಹಾಗೂ ಅಶ್ವಿನ್ ತಲಾ ಮೂರು ಮತ್ತು ಜಸ್ಪ್ರೀತ್ ಬೂಮ್ರಾ ಎರಡು ವಿಕೆಟ್ಗಳನ್ನು ಕಬಳಿಸಿದರು. </p> .<p>10 ಓವರ್ ಅಂತ್ಯಕ್ಕೆ ನಮೀಬಿಯಾ ನಾಲ್ಕು ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿದೆ. ನಮೀಬಿಯಾ ಆರಂಭಿಕರ ಪತನದ ಬಳಿಕ ಭಾರತೀಯ ಬೌಲರ್ಗಳು ಹಿಡಿತ ಸಾಧಿಸಿದ್ದಾರೆ. ರವೀಂದ್ರ ಜಡೇಜ ಎರಡು ವಿಕೆಟ್ ಕಬಳಿಸಿದ್ದಾರೆ. </p> .<p>ಪವರ್ ಪ್ಲೇ ಅಂತ್ಯಕ್ಕೆ ನಮೀಬಿಯಾ ಎರಡು ವಿಕೆಟ್ ನಷ್ಟಕ್ಕೆ 34 ರನ್ ಗಳಿಸಿದೆ. ರವೀಂದ್ರ ಜಡೇಜ ಹಾಗೂ ಜಸ್ಪ್ರೀತ್ ಬೂಮ್ರಾ ತಲಾ ಒಂದು ವಿಕೆಟನ್ನು ಹಂಚಿದ್ದಾರೆ. </p> .<p>ಭಾರತ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ವರುಣ್ ಚಕ್ರವರ್ತಿ ಸ್ಥಾನಕ್ಕೆ ರಾಹುಲ್ ಚಾಹರ್ ಅವರನ್ನು ಆಯ್ಕೆ ಮಾಡಲಾಗಿದೆ.<br /> </p> .<p>ನಮೀಬಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. </p> .<p><a href="https://www.prajavani.net/sports/cricket/outgoing-bowling-coach-arun-speach-881810.html" itemprop="url">ಬೌಲಿಂಗ್ ಕೋಚ್ ಭರತ್ ಅರುಣ್ಗೆ ವಿದಾಯ ಪಂದ್ಯ </a></p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>