<p><strong>ಬೆಂಗಳೂರು:</strong> ಏಕದಿನ ವಿಶ್ವಕಪ್ಗೆ ಘೋಷಿಸಿರುವ ಭಾರತ ತಂಡ ಹೆಚ್ಚು ಸಮತೋಲನದಿಂದ ಕೂಡಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೇಳಿದ್ದಾರೆ. </p><p>ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ 15 ಸದಸ್ಯ ಬಳಗದ ಭಾರತ ತಂಡವನ್ನು ಇಂದು (ಮಂಗಳವಾರ) ಘೋಷಿಸಲಾಯಿತು. </p><p>ಈ ನಡುವೆ ಕರ್ನಾಟಕದ ಕೆ.ಎಲ್. ರಾಹುಲ್ ಫಿಟ್ನೆಸ್ ಬಗ್ಗೆ ಅನುಮಾನ ಮೂಡಿದ್ದು, ಅವರ ಆಯ್ಕೆ ಬಗ್ಗೆ ಪ್ರಶ್ನೆಗಳು ಎದ್ದಿವೆ. </p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಗರ್ಕರ್, ರಾಹುಲ್ ಫಿಟ್ ಆಗಿದ್ದು, ಅವರ ಆಗಮನದಿಂದ ತಂಡ ಹೆಚ್ಚು ಸಮತೋಲನದಿಂದ ಕೂಡಿದೆ ಎಂದು ತಿಳಿಸಿದ್ದಾರೆ. </p><p>ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ರಾಹುಲ್ ಅಭ್ಯಾಸ ಪಂದ್ಯಗಳನ್ನು ಆಡಿದ್ದಾರೆ. ಅವರ ಫಿಟ್ನೆಸ್ ಬಗ್ಗೆ ಸಂತುಷ್ಟರಾಗಿದ್ದೇವೆ ಎಂದು ಹೇಳಿದ್ದಾರೆ. </p><p>ಸಂಪೂರ್ಣ ಫಿಟ್ ಆಗದ ಕಾರಣ ಏಷ್ಯಾ ಕಪ್ ಟೂರ್ನಿಯಲ್ಲಿ ಮೊದಲೆರಡು ಪಂದ್ಯಗಳಿಂದ ರಾಹುಲ್ ಹೊರಗುಳಿದಿದ್ದರು. </p><p>ರಾಹುಲ್ ಹೊರತುಪಡಿಸಿ ವಿಕೆಟ್ ಕೀಪರ್ ಸ್ಥಾನಕ್ಕೆ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಅಜಿತ್, ಈ ಆರೋಗ್ಯಕರ ಪೈಪೋಟಿ ಉತ್ತಮವಾಗಿದೆ. ಇಶಾನ್ ಇತ್ತೀಚಿನ ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ್ದಾರೆ. ಏಕದಿನದಲ್ಲಿ ರಾಹುಲ್ ದಾಖಲೆಯು ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ. </p><p>ಇಬ್ಬರು ವಿಕೆಟ್ ಕೀಪರ್ಗಳು ನಮ್ಮಲ್ಲಿದ್ದಾರೆ. ಆಡುವ ಬಳಗದಲ್ಲಿ ಸ್ಥಾನಕ್ಕಾಗಿ ಅವರಿಬ್ಬರ ಮಧ್ಯೆ ಸ್ಪರ್ಧೆ ಏರ್ಪಡಲಿದೆ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಏಕದಿನ ವಿಶ್ವಕಪ್ಗೆ ಘೋಷಿಸಿರುವ ಭಾರತ ತಂಡ ಹೆಚ್ಚು ಸಮತೋಲನದಿಂದ ಕೂಡಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹೇಳಿದ್ದಾರೆ. </p><p>ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ 15 ಸದಸ್ಯ ಬಳಗದ ಭಾರತ ತಂಡವನ್ನು ಇಂದು (ಮಂಗಳವಾರ) ಘೋಷಿಸಲಾಯಿತು. </p><p>ಈ ನಡುವೆ ಕರ್ನಾಟಕದ ಕೆ.ಎಲ್. ರಾಹುಲ್ ಫಿಟ್ನೆಸ್ ಬಗ್ಗೆ ಅನುಮಾನ ಮೂಡಿದ್ದು, ಅವರ ಆಯ್ಕೆ ಬಗ್ಗೆ ಪ್ರಶ್ನೆಗಳು ಎದ್ದಿವೆ. </p><p>ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಗರ್ಕರ್, ರಾಹುಲ್ ಫಿಟ್ ಆಗಿದ್ದು, ಅವರ ಆಗಮನದಿಂದ ತಂಡ ಹೆಚ್ಚು ಸಮತೋಲನದಿಂದ ಕೂಡಿದೆ ಎಂದು ತಿಳಿಸಿದ್ದಾರೆ. </p><p>ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ರಾಹುಲ್ ಅಭ್ಯಾಸ ಪಂದ್ಯಗಳನ್ನು ಆಡಿದ್ದಾರೆ. ಅವರ ಫಿಟ್ನೆಸ್ ಬಗ್ಗೆ ಸಂತುಷ್ಟರಾಗಿದ್ದೇವೆ ಎಂದು ಹೇಳಿದ್ದಾರೆ. </p><p>ಸಂಪೂರ್ಣ ಫಿಟ್ ಆಗದ ಕಾರಣ ಏಷ್ಯಾ ಕಪ್ ಟೂರ್ನಿಯಲ್ಲಿ ಮೊದಲೆರಡು ಪಂದ್ಯಗಳಿಂದ ರಾಹುಲ್ ಹೊರಗುಳಿದಿದ್ದರು. </p><p>ರಾಹುಲ್ ಹೊರತುಪಡಿಸಿ ವಿಕೆಟ್ ಕೀಪರ್ ಸ್ಥಾನಕ್ಕೆ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಅಜಿತ್, ಈ ಆರೋಗ್ಯಕರ ಪೈಪೋಟಿ ಉತ್ತಮವಾಗಿದೆ. ಇಶಾನ್ ಇತ್ತೀಚಿನ ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ್ದಾರೆ. ಏಕದಿನದಲ್ಲಿ ರಾಹುಲ್ ದಾಖಲೆಯು ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ. </p><p>ಇಬ್ಬರು ವಿಕೆಟ್ ಕೀಪರ್ಗಳು ನಮ್ಮಲ್ಲಿದ್ದಾರೆ. ಆಡುವ ಬಳಗದಲ್ಲಿ ಸ್ಥಾನಕ್ಕಾಗಿ ಅವರಿಬ್ಬರ ಮಧ್ಯೆ ಸ್ಪರ್ಧೆ ಏರ್ಪಡಲಿದೆ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>