ಗೆಬೆಹಾ (ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾ ಹಾಗೂ ಭಾರತ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ (ಇದು ಹಗಲು–ರಾತ್ರಿ) ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿದೆ.
ಈ ಪಂದ್ಯವನ್ನು ಗೆದ್ದು ಭಾರತ ತಂಡ ಸರಣಿ ಕೈವಶ ಮಾಡಿಕೊಳ್ಳುವ ಉತ್ಸಾಹದಲ್ಲಿದೆ. ಪ್ರತಿಭಾನ್ವಿತ ಬ್ಯಾಟರ್ ಮತ್ತು ‘ಫಿನಿಷರ್’ ಖ್ಯಾತಿಯ ರಿಂಕು ಸಿಂಗ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಯುವ ಬೌಲರ್ಗಳಾದ ಅರ್ಷದೀಪ್ ಸಿಂಗ್ ಮತ್ತು ಆವೇಶ್ ಖಾನ್ ಅವರ ಅಚ್ಚುಕಟ್ಟಾದ ಬೌಲಿಂಗ್ ಪ್ರದರ್ಶನದ ನೆರವಿನಿಂದ ಭಾರತ ಮೊದಲ ಪಂದ್ಯವನ್ನು ಎಂಟು ವಿಕೆಟ್ಗಳಿಂದ ಜಯಿಸಿತ್ತು. ಈಗ ಕೆ.ಎಲ್.ರಾಹುಲ್ ಬಳಗ ಇದೇ ವೇಗದಲ್ಲಿ ಸಾಗಲು ಸಜ್ಜಾಗಿದೆ.
ದಕ್ಷಿಣ ಆಫ್ರಿಕಾ ಇನ್ನೊಂದೆಡೆ ಪರದಾಡುತ್ತಿದೆ. ಸಲೀಸಾಗಿ ಆಡುತ್ತಿದ್ದ ಕ್ವಿಂಟನ್ ಡಿ ಕಾಕ್ ಅವರ ಅನುಪಸ್ಥಿತಿ ಕಾಡುತ್ತಿದೆ. ಭಾರತದ ವೇಗಿಗಳು ಮೊದಲ ಪಂದ್ಯದಲ್ಲಿ ಆತಿಥೇಯ ಬ್ಯಾಟರ್ಗಳನ್ನು ಕಾಡಿದರು. ಎರಡನೇ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿ ಈಗ ದಕ್ಷಿಣ ಆಫ್ರಿಕಾ ತಂಡವಿದೆ.