ಹೋದ ವಾರ ಅಡಿಲೇಡ್ನಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿತ್ತು. ಯುವ ಆಟಗಾರರಾದ ಶುಭ ಮನ್ ಗಿಲ್, ಮೊಹಮ್ಮದ್ ಸಿರಾಜ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದರು. ಮೊದಲ ಟೆಸ್ಟ್ನಲ್ಲಿ ವೈಫಲ್ಯ ಅನುಭವಿಸಿದ್ದ ವೃದ್ಧಿಮಾನ್ ಸಹಾ ಅವರಿಗೆ ವಿಶ್ರಾಂತಿ ನೀಡಿ, ವಿಕೆಟ್ಕೀಪರ್ ರಿಷಭ್ ಪಂತ್ಗೆ ಅವಕಾಶ ನೀಡಲಾಗಿದೆ. ಇನ್ನು ಹನುಮವಿಹಾರಿ ತಂಡದಲ್ಲಿ ಮುಂದುವರಿದಿದ್ದಾರೆ.