<p><strong>ಸಿಡ್ನಿ:</strong> ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. </p><p>ಈ ಕುರಿತು ಟಾಸ್ ವೇಳೆಯಲ್ಲಿ ಉಸ್ತುವಾರಿ ನಾಯಕ ಜಸ್ಪ್ರೀತ್ ಬೂಮ್ರಾ ಮಾಹಿತಿ ನೀಡಿದ್ದಾರೆ. </p><p>'ನಮ್ಮ ಕಪ್ತಾನ ನಾಯಕತ್ವದ ಗುಣಗಳನ್ನು ತೋರಿಸಿದ್ದು, ಸ್ವತಃ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ. ತಂಡದಲ್ಲಿ ಏಕತೆ ಇದೆ. ಸ್ವಾರ್ಥತೆ ಇಲ್ಲ' ಎಂದು ಬೂಮ್ರಾ ತಿಳಿಸಿದ್ದಾರೆ. </p><p>ಸಿಡ್ನಿ ಪಂದ್ಯದಿಂದ ನಾಯಕ ರೋಹಿತ್ ಹೊರಗುಳಿಯಲು ನಿರ್ಧರಿಸಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕಳಪೆ ಬ್ಯಾಟಿಂಗ್ ಲಯದ ಹಿನ್ನೆಲೆಯಲ್ಲಿ ರೋಹಿತ್ ಅವರನ್ನು ಕೈಬಿಡಲಾಗಿದೆಯೇ? ಸ್ವತಃ ರೋಹಿತ್ ಅವರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆಯೇ ಅಥವಾ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇ ಎಂಬ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ. </p><p>ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಆಡಿರುವ 37 ವರ್ಷದ ರೋಹಿತ್ ಕೇವಲ 31 ರನ್ಗಳಷ್ಟೇ ಗಳಿಸಿದ್ದರು. </p><p>ಪಿತೃತ್ವದ ರಜೆ ಹಿನ್ನೆಲೆಯಲ್ಲಿ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದರು. ಜಸ್ಪ್ರೀತ್ ಬೂಮ್ರಾ ನಾಯಕತ್ವದಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿತ್ತು. </p><p>ಬಳಿಕ ಅಡಿಲೇಡ್ನಲ್ಲಿ ನಡೆದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ರೋಹಿತ್ ಕಪ್ತಾನಗಿರಿ ವಹಿಸಿದ್ದರು. ಆ ವೇಳೆಗೆ ಆರಂಭಿಕನಾಗಿ ಛಾಪು ಮೂಡಿಸಿದ್ದ ಕೆ.ಎಲ್. ರಾಹುಲ್ ಅವರಿಗೆ ಓಪನರ್ ಸ್ಥಾನ ಬಿಟ್ಟುಕೊಟ್ಟು ಸ್ವತಃ ತಾವು ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಂಡಿದ್ದರು. </p><p>ಆದರೆ ಆಸ್ಟ್ರೇಲಿಯಾ 10 ವಿಕೆಟ್ ಅಂತರದಿಂದ ಜಯ ಗಳಿಸಿದ ಈ ಪಂದ್ಯದಲ್ಲಿ ರೋಹಿತ್ ವೈಫಲ್ಯ ಅನುಭವಿಸಿದ್ದರು. ಮೊದಲ ಇನಿಂಗ್ಸ್ನಲ್ಲಿ 3 ಮತ್ತು ಎರಡನೇ ಇನಿಂಗ್ಸ್ನಲ್ಲಿ 6 ರನ್ ಗಳಿಸಿ ಔಟ್ ಆಗಿದ್ದರು. </p><p>ಮಳೆ ಬಾಧಿತ ಬ್ರಿಸ್ಬೇನ್ ಪಂದ್ಯದಲ್ಲೂ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ರೋಹಿತ್ 10 ರನ್ ಗಳಿಸಿ ನಿರಾಸೆ ಅನುಭವಿಸಿದ್ದರು. ಈ ಪಂದ್ಯ ಡ್ರಾಗೊಳಿಸುವಲ್ಲಿ ಕೊನೆಗೂ ಭಾರತ ಯಶಸ್ವಿಯಾಗಿತ್ತು. </p><p>ನಂತರ ಮೆಲ್ಬರ್ನ್ ಪಂದ್ಯದಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿದರೂ ರೋಹಿತ್ ಅವರ ಬ್ಯಾಟ್ ಸದ್ದು ಮಾಡಲಿಲ್ಲ. ಮೊದಲ ಇನಿಂಗ್ಸ್ನಲ್ಲಿ 3 ಮತ್ತು ಎರಡನೇ ಇನಿಂಗ್ಸ್ನಲ್ಲಿ 9 ರನ್ ಗಳಿಸಿ ಪೆವಿಲಿಯನ್ಗೆ ಮರಳಿದ್ದರು. </p><p>ಈ ಪಂದ್ಯದಲ್ಲಿ 184 ರನ್ ಅಂತರದ ಸೋಲನುಭವಿಸಿದ್ದ ಟೀಮ್ ಇಂಡಿಯಾ ಸರಣಿಯಲ್ಲಿ 1-2ರ ಅಂತರದ ಹಿನ್ನಡೆ ಅನುಭವಿಸಿತ್ತು. </p><p>ಈಗ ಸರಣಿಯಲ್ಲಿ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ತನ್ನ ಬಳಿಯಲ್ಲಿಯೇ ಉಳಿಸಿಕೊಳ್ಳಲು ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. </p>.Sydney Test | ಸಿಡ್ನಿಯಲ್ಲೂ ಮುಂದುವರಿದ ವೈಫಲ್ಯ; ಭಾರತ 185ಕ್ಕೆ ಆಲೌಟ್.IND vs AUS Test: ಭಾರತಕ್ಕೆ ಪುಟಿದೇಳುವ ಸವಾಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ:</strong> ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ನಿರ್ಧರಿಸಿದ್ದಾರೆ. </p><p>ಈ ಕುರಿತು ಟಾಸ್ ವೇಳೆಯಲ್ಲಿ ಉಸ್ತುವಾರಿ ನಾಯಕ ಜಸ್ಪ್ರೀತ್ ಬೂಮ್ರಾ ಮಾಹಿತಿ ನೀಡಿದ್ದಾರೆ. </p><p>'ನಮ್ಮ ಕಪ್ತಾನ ನಾಯಕತ್ವದ ಗುಣಗಳನ್ನು ತೋರಿಸಿದ್ದು, ಸ್ವತಃ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ. ತಂಡದಲ್ಲಿ ಏಕತೆ ಇದೆ. ಸ್ವಾರ್ಥತೆ ಇಲ್ಲ' ಎಂದು ಬೂಮ್ರಾ ತಿಳಿಸಿದ್ದಾರೆ. </p><p>ಸಿಡ್ನಿ ಪಂದ್ಯದಿಂದ ನಾಯಕ ರೋಹಿತ್ ಹೊರಗುಳಿಯಲು ನಿರ್ಧರಿಸಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಕಳಪೆ ಬ್ಯಾಟಿಂಗ್ ಲಯದ ಹಿನ್ನೆಲೆಯಲ್ಲಿ ರೋಹಿತ್ ಅವರನ್ನು ಕೈಬಿಡಲಾಗಿದೆಯೇ? ಸ್ವತಃ ರೋಹಿತ್ ಅವರೇ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆಯೇ ಅಥವಾ ತಂಡದಲ್ಲಿ ಎಲ್ಲವೂ ಸರಿ ಇಲ್ಲವೇ ಎಂಬ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ. </p><p>ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳಲ್ಲಿ ಆಡಿರುವ 37 ವರ್ಷದ ರೋಹಿತ್ ಕೇವಲ 31 ರನ್ಗಳಷ್ಟೇ ಗಳಿಸಿದ್ದರು. </p><p>ಪಿತೃತ್ವದ ರಜೆ ಹಿನ್ನೆಲೆಯಲ್ಲಿ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದರು. ಜಸ್ಪ್ರೀತ್ ಬೂಮ್ರಾ ನಾಯಕತ್ವದಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದ ಭಾರತ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿತ್ತು. </p><p>ಬಳಿಕ ಅಡಿಲೇಡ್ನಲ್ಲಿ ನಡೆದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ರೋಹಿತ್ ಕಪ್ತಾನಗಿರಿ ವಹಿಸಿದ್ದರು. ಆ ವೇಳೆಗೆ ಆರಂಭಿಕನಾಗಿ ಛಾಪು ಮೂಡಿಸಿದ್ದ ಕೆ.ಎಲ್. ರಾಹುಲ್ ಅವರಿಗೆ ಓಪನರ್ ಸ್ಥಾನ ಬಿಟ್ಟುಕೊಟ್ಟು ಸ್ವತಃ ತಾವು ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಂಡಿದ್ದರು. </p><p>ಆದರೆ ಆಸ್ಟ್ರೇಲಿಯಾ 10 ವಿಕೆಟ್ ಅಂತರದಿಂದ ಜಯ ಗಳಿಸಿದ ಈ ಪಂದ್ಯದಲ್ಲಿ ರೋಹಿತ್ ವೈಫಲ್ಯ ಅನುಭವಿಸಿದ್ದರು. ಮೊದಲ ಇನಿಂಗ್ಸ್ನಲ್ಲಿ 3 ಮತ್ತು ಎರಡನೇ ಇನಿಂಗ್ಸ್ನಲ್ಲಿ 6 ರನ್ ಗಳಿಸಿ ಔಟ್ ಆಗಿದ್ದರು. </p><p>ಮಳೆ ಬಾಧಿತ ಬ್ರಿಸ್ಬೇನ್ ಪಂದ್ಯದಲ್ಲೂ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ರೋಹಿತ್ 10 ರನ್ ಗಳಿಸಿ ನಿರಾಸೆ ಅನುಭವಿಸಿದ್ದರು. ಈ ಪಂದ್ಯ ಡ್ರಾಗೊಳಿಸುವಲ್ಲಿ ಕೊನೆಗೂ ಭಾರತ ಯಶಸ್ವಿಯಾಗಿತ್ತು. </p><p>ನಂತರ ಮೆಲ್ಬರ್ನ್ ಪಂದ್ಯದಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿದರೂ ರೋಹಿತ್ ಅವರ ಬ್ಯಾಟ್ ಸದ್ದು ಮಾಡಲಿಲ್ಲ. ಮೊದಲ ಇನಿಂಗ್ಸ್ನಲ್ಲಿ 3 ಮತ್ತು ಎರಡನೇ ಇನಿಂಗ್ಸ್ನಲ್ಲಿ 9 ರನ್ ಗಳಿಸಿ ಪೆವಿಲಿಯನ್ಗೆ ಮರಳಿದ್ದರು. </p><p>ಈ ಪಂದ್ಯದಲ್ಲಿ 184 ರನ್ ಅಂತರದ ಸೋಲನುಭವಿಸಿದ್ದ ಟೀಮ್ ಇಂಡಿಯಾ ಸರಣಿಯಲ್ಲಿ 1-2ರ ಅಂತರದ ಹಿನ್ನಡೆ ಅನುಭವಿಸಿತ್ತು. </p><p>ಈಗ ಸರಣಿಯಲ್ಲಿ ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿ ತನ್ನ ಬಳಿಯಲ್ಲಿಯೇ ಉಳಿಸಿಕೊಳ್ಳಲು ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. </p>.Sydney Test | ಸಿಡ್ನಿಯಲ್ಲೂ ಮುಂದುವರಿದ ವೈಫಲ್ಯ; ಭಾರತ 185ಕ್ಕೆ ಆಲೌಟ್.IND vs AUS Test: ಭಾರತಕ್ಕೆ ಪುಟಿದೇಳುವ ಸವಾಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>