<p><strong>ಸಿಡ್ನಿ:</strong> ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ಎದುರಿನ ಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಆಡುವರೇ ಎಂಬುದನ್ನು ಖಚಿತಪಡಿಸಲು ಮುಖ್ಯ ಕೋಚ್ ಗೌತಮ್ ಗಂಭೀರ್ ನಿರಾಕರಿಸಿದ್ದಾರೆ.</p><p>ಸರಣಿಯ 5ನೇ ಹಾಗೂ ಅಂತಿಮ ಪಂದ್ಯವು ಸಿಡ್ನಿಯಲ್ಲಿ ನಾಳೆಯಿಂದ (ಶುಕ್ರವಾರ) ಆರಂಭವಾಗಲಿದೆ.</p><p>ಪಂದ್ಯದ ಮುನ್ನಾದಿನ ನಡೆಯುವ ಮಾಧ್ಯಮಗೋಷ್ಠಿಯಲ್ಲಿ ನಾಯಕ ಭಾಗವಹಿಸುವುದು ಸಾಮಾನ್ಯ. ಆದರೆ, ಈ ಬಾರಿ ಕೋಚ್ ಹಾಜರಾಗಿರುವುದೇಕೆ ಎಂಬ ಪ್ರಶ್ನೆಗೆ ಗಂಭೀರ್ ಪ್ರತಿಕ್ರಿಯಿಸಿದ್ದಾರೆ. 'ರೋಹಿತ್ ಜೊತೆಗಿನ ನಂಟು ಚೆನ್ನಾಗಿದೆ. ಇದು (ನಾಯಕ ಭಾಗವಹಿಸಬೇಕು ಎಂಬುದು) ಸಾಂಪ್ರದಾಯವೇನಲ್ಲ ಎಂದುಕೊಂಡಿದ್ದೇನೆ' ಎಂದಿದ್ದಾರೆ.</p><p>'ವಿಕೆಟ್ (ಪಿಚ್) ನೋಡಿದ ನಂತರ, ನಾಳೆ ತಂಡವನ್ನು ಅಂತಿಮಗೊಳಿಸುತ್ತೇವೆ' ಎಂದು ತಿಳಿಸಿದ್ದಾರೆ.</p><p>ರೋಹಿತ್ ಶರ್ಮಾ ಆಡಲಿದ್ದಾರೆಯೇ ಎಂಬ ಪ್ರಶ್ನೆಗೆ, 'ನಾನು ಈಗಷ್ಟೇ ಹೇಳಿದೆ. ಪಿಚ್ ನೋಡುತ್ತೇವೆ. ಬಹುಶಃ ನಾಳೆ ತಂಡವನ್ನು ಪ್ರಕಟಿಸುತ್ತೇವೆ' ಎಂದು ಪುನರುಚ್ಚರಿಸುವ ಮೂಲಕ, ಹೆಚ್ಚು ಹೇಳಲು ನಿರಾಕರಿಸಿದ್ದಾರೆ.</p><p>ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಕಾಶ್ ದೀಪ್ ತಂಡದಿಂದ ಹೊರಗುಳಿಯಲಿದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ, ಅವರ ಬದಲು ಯಾರಿಗೆ ಸ್ಥಾನ ನೀಡಲಾಗುತ್ತದೆ ಎಂಬುದನ್ನು ತಿಳಿಸಿಲ್ಲ.</p><p>ಟೂರ್ನಿಯಲ್ಲಿ ಆಸ್ಟ್ರೇಲಿಯಾ 2–1 ಅಂತರದ ಮುನ್ನಡೆ ಸಾಧಿಸಿದೆ.</p><p>ಮೊದಲ ಪಂದ್ಯದಲ್ಲಿ ಜಸ್ಪ್ರೀತ್ ಬೂಮ್ರಾ ನಾಯಕತ್ವದಲ್ಲಿ ಆಡಿದ್ದ ಭಾರತ, ಜಯ ಸಾಧಿಸಿತ್ತು. ನಂತರದ ಮೂರು ಪಂದ್ಯಗಳಲ್ಲಿ ರೋಹಿತ್ ತಂಡ ಮುನ್ನಡೆಸಿದ್ದರು. ಈ ಪೈಕಿ ಎರಡಲ್ಲಿ ಸೋಲು ಎದುರಾದರೆ, ಇನ್ನೊಂದು ಪಂದ್ಯ ಡ್ರಾ ಆಗಿದೆ. ಹೀಗಾಗಿ, ಬೂಮ್ರಾಗೆ ನಾಯಕತ್ವ ವಹಿಸುವ ಸಾಧ್ಯತೆ ಬಗ್ಗೆ ಚರ್ಚೆಯಾಗುತ್ತಿದೆ.</p>.ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುವ ಚರ್ಚೆಗಳು ಅಲ್ಲೇ ಉಳಿಯಲಿ: ಕೋಚ್ ಗೌತಮ್ ಗಂಭೀರ್.AUS vs IND | ಭಾರತದ ಎದುರು ಕಳಪೆ ಆಟ; ಮಾರ್ಷ್ಗೆ ಕೋಕ್, ಹೊಸಬರಿಗೆ ಆಸಿಸ್ ಮಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ:</strong> ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ಎದುರಿನ ಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಆಡುವರೇ ಎಂಬುದನ್ನು ಖಚಿತಪಡಿಸಲು ಮುಖ್ಯ ಕೋಚ್ ಗೌತಮ್ ಗಂಭೀರ್ ನಿರಾಕರಿಸಿದ್ದಾರೆ.</p><p>ಸರಣಿಯ 5ನೇ ಹಾಗೂ ಅಂತಿಮ ಪಂದ್ಯವು ಸಿಡ್ನಿಯಲ್ಲಿ ನಾಳೆಯಿಂದ (ಶುಕ್ರವಾರ) ಆರಂಭವಾಗಲಿದೆ.</p><p>ಪಂದ್ಯದ ಮುನ್ನಾದಿನ ನಡೆಯುವ ಮಾಧ್ಯಮಗೋಷ್ಠಿಯಲ್ಲಿ ನಾಯಕ ಭಾಗವಹಿಸುವುದು ಸಾಮಾನ್ಯ. ಆದರೆ, ಈ ಬಾರಿ ಕೋಚ್ ಹಾಜರಾಗಿರುವುದೇಕೆ ಎಂಬ ಪ್ರಶ್ನೆಗೆ ಗಂಭೀರ್ ಪ್ರತಿಕ್ರಿಯಿಸಿದ್ದಾರೆ. 'ರೋಹಿತ್ ಜೊತೆಗಿನ ನಂಟು ಚೆನ್ನಾಗಿದೆ. ಇದು (ನಾಯಕ ಭಾಗವಹಿಸಬೇಕು ಎಂಬುದು) ಸಾಂಪ್ರದಾಯವೇನಲ್ಲ ಎಂದುಕೊಂಡಿದ್ದೇನೆ' ಎಂದಿದ್ದಾರೆ.</p><p>'ವಿಕೆಟ್ (ಪಿಚ್) ನೋಡಿದ ನಂತರ, ನಾಳೆ ತಂಡವನ್ನು ಅಂತಿಮಗೊಳಿಸುತ್ತೇವೆ' ಎಂದು ತಿಳಿಸಿದ್ದಾರೆ.</p><p>ರೋಹಿತ್ ಶರ್ಮಾ ಆಡಲಿದ್ದಾರೆಯೇ ಎಂಬ ಪ್ರಶ್ನೆಗೆ, 'ನಾನು ಈಗಷ್ಟೇ ಹೇಳಿದೆ. ಪಿಚ್ ನೋಡುತ್ತೇವೆ. ಬಹುಶಃ ನಾಳೆ ತಂಡವನ್ನು ಪ್ರಕಟಿಸುತ್ತೇವೆ' ಎಂದು ಪುನರುಚ್ಚರಿಸುವ ಮೂಲಕ, ಹೆಚ್ಚು ಹೇಳಲು ನಿರಾಕರಿಸಿದ್ದಾರೆ.</p><p>ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಆಕಾಶ್ ದೀಪ್ ತಂಡದಿಂದ ಹೊರಗುಳಿಯಲಿದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೆ, ಅವರ ಬದಲು ಯಾರಿಗೆ ಸ್ಥಾನ ನೀಡಲಾಗುತ್ತದೆ ಎಂಬುದನ್ನು ತಿಳಿಸಿಲ್ಲ.</p><p>ಟೂರ್ನಿಯಲ್ಲಿ ಆಸ್ಟ್ರೇಲಿಯಾ 2–1 ಅಂತರದ ಮುನ್ನಡೆ ಸಾಧಿಸಿದೆ.</p><p>ಮೊದಲ ಪಂದ್ಯದಲ್ಲಿ ಜಸ್ಪ್ರೀತ್ ಬೂಮ್ರಾ ನಾಯಕತ್ವದಲ್ಲಿ ಆಡಿದ್ದ ಭಾರತ, ಜಯ ಸಾಧಿಸಿತ್ತು. ನಂತರದ ಮೂರು ಪಂದ್ಯಗಳಲ್ಲಿ ರೋಹಿತ್ ತಂಡ ಮುನ್ನಡೆಸಿದ್ದರು. ಈ ಪೈಕಿ ಎರಡಲ್ಲಿ ಸೋಲು ಎದುರಾದರೆ, ಇನ್ನೊಂದು ಪಂದ್ಯ ಡ್ರಾ ಆಗಿದೆ. ಹೀಗಾಗಿ, ಬೂಮ್ರಾಗೆ ನಾಯಕತ್ವ ವಹಿಸುವ ಸಾಧ್ಯತೆ ಬಗ್ಗೆ ಚರ್ಚೆಯಾಗುತ್ತಿದೆ.</p>.ಡ್ರೆಸ್ಸಿಂಗ್ ಕೋಣೆಯಲ್ಲಿ ನಡೆಯುವ ಚರ್ಚೆಗಳು ಅಲ್ಲೇ ಉಳಿಯಲಿ: ಕೋಚ್ ಗೌತಮ್ ಗಂಭೀರ್.AUS vs IND | ಭಾರತದ ಎದುರು ಕಳಪೆ ಆಟ; ಮಾರ್ಷ್ಗೆ ಕೋಕ್, ಹೊಸಬರಿಗೆ ಆಸಿಸ್ ಮಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>