ರಾಹುಲ್ ವಿರುದ್ಧ ಟೀಕೆ... ಸತತ ವೈಫಲ್ಯ ಅನುಭವಿಸಿರುವ ರಾಹುಲ್ ಅವರನ್ನು ತಂಡದಿಂದ ಕೈಬಿಡಬೇಕು ಎಂದು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಸೇರಿದಂತೆ ಮಾಜಿಗಳು ತೀವ್ರ ವಾಗ್ದಾಳಿ ನಡೆಸಿದ್ದರು.
ರಾಹುಲ್ ಸ್ಥಾನಕ್ಕೆ ದೇಶೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಆಟಗಾರರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮಾಜಿಗಳು ಆಗ್ರಹಿಸಿದ್ದರು.
ರೋಹಿತ್, ದ್ರಾವಿಡ್ ಬೆಂಬಲ... ಈ ಎಲ್ಲ ಟೀಕೆಗಳ ನಡುವೆಯೂ ರಾಹುಲ್ ಅವರಿಗೆ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬೆಂಬಲ ಸೂಚಿಸಿದ್ದರು. ಆದರೂ ಮೂರನೇ ಪಂದ್ಯದಲ್ಲಿ ಆಯ್ಕೆಗೆ ಪರಿಗಣಿಸಲಾಗಿಲ್ಲ.
ಉಪನಾಯಕ ಸ್ಥಾನದಿಂದಲೂ ತೆರವು... ಕೆ.ಎಲ್. ರಾಹುಲ್ ಅವರನ್ನು ಉಪನಾಯಕ ಸ್ಥಾನದಿಂದಲೂ ಕೈಬಿಡಲಾಗಿತ್ತು. ಈ ಮೂಲಕ ಮೂರನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್ನಿಂದ ರಾಹುಲ್ರನ್ನು ಕೈಬಿಡಲಾಗಿದೆ.
ರಾಹುಲ್ ಸ್ಥಾನಕ್ಕೆ ಯುವ ಬ್ಯಾಟರ್ ಶುಭಮನ್ ಗಿಲ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.