ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಆಟಗಾರರಿಗೆ ಎದುರಾಗಿರುವ ಜನಾಂಗೀಯ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತ ಆರು ಮಂದಿ ಪ್ರೇಕ್ಷಕರನ್ನು ಮೈದಾನದಿಂದ ಹೊರ ಹಾಕಲಾಗಿದೆ.
ಪ್ರಸ್ತುತ ಪ್ರಕರಣವನ್ನು ಮಾಜಿ ದಿಗ್ಗಜರಾದ ವೀರೇಂದ್ರ ಸೆಹ್ವಾಗ್ ಹಾಗೂ ವಿವಿಎಸ್ ಲಕ್ಷ್ಮಣ್ ಸೇರಿದಂತೆ ಪ್ರಮುಖರು ಖಂಡಿಸಿದ್ದಾರೆ.
Shameful and unacceptable.
— Rishav Shukla (@rishavshukla22) January 10, 2021
The look on Mohammad Siraj’s face is heartbreaking💔#AUSvIND
#Siraj #INDvsAUS #racism pic.twitter.com/UtLjGlYiFf
ನಾಲ್ಕನೇ ದಿನದಾಟದಲ್ಲೂ ಭೋಜನ ವಿರಾಮಕ್ಕೆ ಕೆಲವೇ ಕ್ಷಣಗಳಿರುವಾಗ ಮೊಹಮ್ಮದ್ ಸಿರಾಜ್ಗೆ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರ ಗುಂಪಿನಿಂದ ಜನಾಂಗೀಯ ನಿಂದನೆ ಎದುರಾಗಿತ್ತು. ತಕ್ಷಣ ನಾಯಕ ಅಜಿಂಕ್ಯ ರಹಾನೆ ಗಮನಕ್ಕೆ ತಂದ ಸಿರಾಜ್, ಅಂಪೈರ್ ಬಳಿ ದೂರು ದಾಖಲಿಸಿದರು. ಬಳಿಕ ಎಚ್ಚೆತ್ತುಕೊಂಡ ಅಂಪೈರ್ ಸುದೀರ್ಘ ಮಾತುಕತೆಯ ಬಳಿಕ, ಭದ್ರತಾ ಸಿಬ್ಬಂದಿಗಳ ಸಹಾಯದಿಂದ ಆಪಾದಿತ ಆರು ಮಂದಿ ಪ್ರೇಕ್ಷಕರನ್ನು ಮೈದಾನದಿಂದ ಹೊರ ಹಾಕಿದರು.
ಕಳೆದ ದಿನವಷ್ಟೇ ಭಾರತೀಯ ಆಟಗಾರರಾದ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬೂಮ್ರಾಗೆ ಪ್ರೇಕ್ಷಕರಿಂದ ಜನಾಂಗೀಯ ನಿಂದನೆ ಎದುರಾಗಿರುವುದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತ ದೂರು ದಾಖಲಿಸಿತ್ತು.
I hope these young men's families and friends are ashamed:#AUSvsIND #racism pic.twitter.com/Ew3Ecs5OkL
— David House (@DreadLWRoberts) January 10, 2021
ಪ್ರಕರಣದ ಗಂಭೀರತೆಯನ್ನು ಅರಿತುಕೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಭಾನುವಾರದಂದು ಭಾರತ ಕ್ರಕೆಟ್ ತಂಡದ ಕ್ಷಮೆಯಾಚನೆಯನ್ನು ಕೋರಿದೆ. ಅಲ್ಲದೆ ಘಟನೆ ಬಗ್ಗೆ ಐಸಿಸಿ ತನಿಖೆಯನ್ನು ನಡೆಸಲಿದೆ.
ಈ ಘಟನೆಯನ್ನು ಖಂಡಿಸಿರುವ ವೀರೇಂದ್ರ ಸೆಹ್ವಾಗ್, ನೀವು ಮಾಡಿದರೆ ಕೆಣಕಿದ ಮಾತು ಆದರೆ ಬೇರೊಬ್ಬರು ಮಾಡಿದರೆ ಜನಾಂಗೀಯ ನಿಂದನೆ. ಎಸ್ಸಿಜಿಯಲ್ಲಿ ಆಸ್ಟ್ರೇಲಿಯಾದ ಕೆಲವು ಪ್ರೇಕ್ಷಕರ ವರ್ತನೆ ದುರದೃಷ್ಟಕರವಾಗಿದ್ದು, ಟೆಸ್ಟ್ ಸರಣಿಯ ಉತ್ತಮ ವಾತಾವರಣವನ್ನು ಕೆಡಿಸುತ್ತಿದೆ ಎಂದು ಹೇಳಿದರು.
Tum karo toh Sarcasm , aur koi Kare toh Racism .
— Virender Sehwag (@virendersehwag) January 10, 2021
Very unfortunate with what some of the Australian crowd has been doing at the SCG and spoiling the vibes of a good test series. pic.twitter.com/mrDTbX4t7i
ಭಾರತದ ಮಾಜಿ ಕಲಾತ್ಮಕಬ್ಯಾಟ್ಸ್ಮನ್ ವಿವಿಎಸ್ ಲಕ್ಷ್ಮಣ್ ಕೂಡಾ ಘಟನೆಯನ್ನು ಖಂಡಿಸಿದರು. ಎಸ್ಸಿಜಿ ದೃಶ್ಯಗಳು ತುಂಬಾ ದುರದೃಷ್ಟಕರ. ಈ ಅಸಂಬಂದ್ಧಕ್ಕೆ ಅಲ್ಲಿ ಯಾವುದೇ ಸ್ಥಾನವಿಲ್ಲ. ಕ್ರೀಡಾ ಮೈದಾನದಲ್ಲಿ ಆಟಗಾರರನ್ನು ನಿಂದಿಸುವ ಅವಶ್ಯಕತೆಯಾದರೂ ಎಂದಿಗೂ ಅರ್ಥವಾಗುತ್ತಿಲ್ಲ. ನೀವು ಆಟವನ್ನು ವೀಕ್ಷಿಸಲು ಬಂದಿಲ್ಲದಿದ್ದರೆ ಮತ್ತು ಗೌರವಿಸಲು ಸಾಧ್ಯವಾಗದಿದ್ದರೆ ದಯವಿಟ್ಟು ಉತ್ತಮ ವಾತಾವರಣವನ್ನು ಹಾಳು ಮಾಡಬೇಡಿ ಎಂದು ಹೇಳಿದರು.
Very unfortunate to see what’s happening at SCG. There is no place for this rubbish. Never understood the need to yell abuse at players on a sporting field.. If you’re not here to watch the game and can’t be respectful, then pls don’t come and spoil the atmosphere. #AUSvIND
— VVS Laxman (@VVSLaxman281) January 10, 2021
ಕ್ರಿಕೆಟ್ ಅಭಿಮಾನಿಗಳು ಸಹ ಜನಾಂಗೀಯ ನಿಂದನೆ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಸಾನಿಧ್ಯವನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿಕೆಲವು ಅಭಿಮಾನಿಗಳು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
The situation will be different when #KingKohli is around!! The #Aussie might be #racism to Indians but @imVkohli is the perfect reply for them...think every player should admire Virat's attitude.... pic.twitter.com/paFxGRnTdg
— rogers45 (@_rogers_45) January 10, 2021
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.