<p><strong>ಸಿಡ್ನಿ:</strong> ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ತೃತೀಯ ದಿನದಾಟದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವೇಳೆ ಎಡ ಮೊಣಕೈಗೆ ಗಾಯ ಮಾಡಿಕೊಂಡಿರುವ ಭಾರತೀಯ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರನ್ನು ಹೆಚ್ಚುವರಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.</p>.<p>ಆಸ್ಟ್ರೇಲಿಯಾ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ಗಾಯ ಮಾಡಿಕೊಂಡಿರುವ ಪಂತ್ ಅವರನ್ನು ಸ್ಕ್ಯಾನ್ ಮಾಡಲು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ತಿಳಿಸಿದೆ.</p>.<p>ಐದನೇ ವಿಕೆಟ್ಗೆ ಚೇತೇಶ್ವರ ಪೂಜಾರ ಜೊತೆಗೆ 53 ರನ್ಗಳ ಜೊತೆಯಾಟದಲ್ಲಿ ಭಾಗಿಯಾಗಿರುವ ರಿಷಭ್ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದರು.ಬಳಿಕ 36 ರನ್ ಗಳಿಸಿದ್ದ ಪಂತ್, ಜೋಶ್ ಹ್ಯಾಜಲ್ವುಡ್ ದಾಳಿಯಲ್ಲಿ ಡೇವಿಡ್ ವಾರ್ನರ್ಗೆ ಕ್ಯಾಚಿತ್ತು ನಿರ್ಗಮಿಸಿದ್ದರು.</p>.<p>ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ಎಡ ಮೊಣಕೈಗೆ ಗಾಯ ಮಾಡಿಕೊಂಡ ರಿಷಭ್ ಪಂತ್, ನೋವು ಶಮನ ಮಾಡುವ ಟ್ಯಾಬ್ಲೆಟ್ ತೆಗೆದುಕೊಂಡು ಬ್ಯಾಟಿಂಗ್ ಮುಂದುವರಿಸಿದ್ದರು. ಪಂತ್ ಅಲಭ್ಯತೆಯಲ್ಲಿ ದ್ವಿತೀಯ ಇನ್ನಿಂಗ್ಸ್ನಲ್ಲಿ ಬದಲಿ ಆಟಗಾರ ವೃಧಿಮಾನ್ ಸಹ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-all-out-for-244-trail-by-94-runs-against-australia-day-3-3rd-test-at-scg-794789.html" itemprop="url">IND vs AUS: ಭಾರತ 244ಕ್ಕೆ ಆಲೌಟ್; 94 ರನ್ ಹಿನ್ನೆಡೆ </a></p>.<p><strong>ಬದಲಿ ವಿಕೆಟ್ ಕೀಪರ್ಗೆ ಬ್ಯಾಟಿಂಗ್ ಮಾಡಲು ಸಾಧ್ಯವೇ?</strong><br />1980ರಿಂದ 2017ನೇ ಇಸವಿಯ ವರೆಗೂ ಗಾಯಗೊಂಡ ಸಂದರ್ಭದಲ್ಲಿ ಬದಲಿ ಆಟಗಾರನಿಗೆ ವಿಕೆಟ್ ಕೀಪಿಂಗ್ ಮಾಡುವ ಅನುಮತಿ ಇರಲಿಲ್ಲ. ಆದರೆ ಮೂರು ವರ್ಷಗಳ ಹಿಂದೆಯಷ್ಟೇ ಐಸಿಸಿ ನಿಯಮವನ್ನು ಬದಲಾಯಿಸಿತ್ತು.</p>.<p>ಎಲ್ಲ ಬದಲಿ ಆಟಗಾರರಂತೆ ರಿಷಭ್ ಪಂತ್ ಜಾಗದಲ್ಲಿ ವೃದ್ಧಿಮಾನ್ ಸಹಾಗೆ ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಹಾಗಾಗಿ ದ್ವಿತೀಯ ಇನ್ನಿಂಗ್ಸ್ನಲ್ಲಿ ಪಂತ್ ಬ್ಯಾಟಿಂಗ್ ಮಾಡಲು ಕ್ರೀಸಿಗಿಳಿಯುವರೇ ಎಂಬುದನ್ನು ಕಾದು ನೋಡಬೇಕಿದೆ.</p>.<p>2019ರಲ್ಲಿ ಪರಿಚಯಿಸಲಾಗಿರುವ ಕಂಕಷನ್ ನಿಯದನ್ವಯ ಚೆಂಡು ತಲೆಗೆ ಬಡಿದ ಸಂದರ್ಭದಲ್ಲಿ ಮಾತ್ರ ಬದಲಿ ಆಟಗಾರನಿಗೆ ಬ್ಯಾಟಿಂಗ್, ಬೌಲಿಂಗ್ ಅಥವಾ ತಂಡದ ನಾಯಕನಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/steve-smith-registers-27th-test-ton-to-equal-virat-kohli-794454.html" itemprop="url">27ನೇ ಟೆಸ್ಟ್ ಶತಕ; ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಟೀವನ್ ಸ್ಮಿತ್ </a></p>.<p>ವಿಕೆಟ್ ಕೀಪರ್ಗೆ ಗಾಯವಾದಾಗ ಬದಲಿ ಆಟಗಾರ ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಬಹುದಾಗಿದೆ. ಆದರೆ ದುರುಪಯೋಗವನ್ನು ತಡೆಯಲು ಅಂಪೈರ್ಗಳು ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಇಲ್ಲಿ ಬದಲಿ ಆಟಗಾರ ಬ್ಯಾಟಿಂಗ್, ಬೌಲಿಂಗ್ ಅಥವಾ ನಾಯಕನಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ.</p>.<p>ಇಲ್ಲಿ ಆಸಕ್ತಿದಾಯಕ ವಿಷಯವೆಂಬಂತೆ ಈ ಹೊಸ ನಿಯಮದ ಲಾಭ ಪಡೆದ ಮೊದಲ ತಂಡ ಕೂಡಾ ಭಾರತ ಆಗಿದೆ. 2018ನೇ ಇಸವಿಯಲ್ಲಿ ಜೋಹಾನ್ಸ್ಬರ್ಗ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಗಾಯಾಳು ಪಾರ್ಥಿವ್ ಪಟೇಲ್ ಬದಲಿಗೆ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ:</strong> ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ತೃತೀಯ ದಿನದಾಟದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವೇಳೆ ಎಡ ಮೊಣಕೈಗೆ ಗಾಯ ಮಾಡಿಕೊಂಡಿರುವ ಭಾರತೀಯ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರನ್ನು ಹೆಚ್ಚುವರಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.</p>.<p>ಆಸ್ಟ್ರೇಲಿಯಾ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ಗಾಯ ಮಾಡಿಕೊಂಡಿರುವ ಪಂತ್ ಅವರನ್ನು ಸ್ಕ್ಯಾನ್ ಮಾಡಲು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ತಿಳಿಸಿದೆ.</p>.<p>ಐದನೇ ವಿಕೆಟ್ಗೆ ಚೇತೇಶ್ವರ ಪೂಜಾರ ಜೊತೆಗೆ 53 ರನ್ಗಳ ಜೊತೆಯಾಟದಲ್ಲಿ ಭಾಗಿಯಾಗಿರುವ ರಿಷಭ್ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದರು.ಬಳಿಕ 36 ರನ್ ಗಳಿಸಿದ್ದ ಪಂತ್, ಜೋಶ್ ಹ್ಯಾಜಲ್ವುಡ್ ದಾಳಿಯಲ್ಲಿ ಡೇವಿಡ್ ವಾರ್ನರ್ಗೆ ಕ್ಯಾಚಿತ್ತು ನಿರ್ಗಮಿಸಿದ್ದರು.</p>.<p>ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ಎಡ ಮೊಣಕೈಗೆ ಗಾಯ ಮಾಡಿಕೊಂಡ ರಿಷಭ್ ಪಂತ್, ನೋವು ಶಮನ ಮಾಡುವ ಟ್ಯಾಬ್ಲೆಟ್ ತೆಗೆದುಕೊಂಡು ಬ್ಯಾಟಿಂಗ್ ಮುಂದುವರಿಸಿದ್ದರು. ಪಂತ್ ಅಲಭ್ಯತೆಯಲ್ಲಿ ದ್ವಿತೀಯ ಇನ್ನಿಂಗ್ಸ್ನಲ್ಲಿ ಬದಲಿ ಆಟಗಾರ ವೃಧಿಮಾನ್ ಸಹ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-all-out-for-244-trail-by-94-runs-against-australia-day-3-3rd-test-at-scg-794789.html" itemprop="url">IND vs AUS: ಭಾರತ 244ಕ್ಕೆ ಆಲೌಟ್; 94 ರನ್ ಹಿನ್ನೆಡೆ </a></p>.<p><strong>ಬದಲಿ ವಿಕೆಟ್ ಕೀಪರ್ಗೆ ಬ್ಯಾಟಿಂಗ್ ಮಾಡಲು ಸಾಧ್ಯವೇ?</strong><br />1980ರಿಂದ 2017ನೇ ಇಸವಿಯ ವರೆಗೂ ಗಾಯಗೊಂಡ ಸಂದರ್ಭದಲ್ಲಿ ಬದಲಿ ಆಟಗಾರನಿಗೆ ವಿಕೆಟ್ ಕೀಪಿಂಗ್ ಮಾಡುವ ಅನುಮತಿ ಇರಲಿಲ್ಲ. ಆದರೆ ಮೂರು ವರ್ಷಗಳ ಹಿಂದೆಯಷ್ಟೇ ಐಸಿಸಿ ನಿಯಮವನ್ನು ಬದಲಾಯಿಸಿತ್ತು.</p>.<p>ಎಲ್ಲ ಬದಲಿ ಆಟಗಾರರಂತೆ ರಿಷಭ್ ಪಂತ್ ಜಾಗದಲ್ಲಿ ವೃದ್ಧಿಮಾನ್ ಸಹಾಗೆ ಬ್ಯಾಟಿಂಗ್ ಮಾಡಲು ಸಾಧ್ಯವಿಲ್ಲ. ಹಾಗಾಗಿ ದ್ವಿತೀಯ ಇನ್ನಿಂಗ್ಸ್ನಲ್ಲಿ ಪಂತ್ ಬ್ಯಾಟಿಂಗ್ ಮಾಡಲು ಕ್ರೀಸಿಗಿಳಿಯುವರೇ ಎಂಬುದನ್ನು ಕಾದು ನೋಡಬೇಕಿದೆ.</p>.<p>2019ರಲ್ಲಿ ಪರಿಚಯಿಸಲಾಗಿರುವ ಕಂಕಷನ್ ನಿಯದನ್ವಯ ಚೆಂಡು ತಲೆಗೆ ಬಡಿದ ಸಂದರ್ಭದಲ್ಲಿ ಮಾತ್ರ ಬದಲಿ ಆಟಗಾರನಿಗೆ ಬ್ಯಾಟಿಂಗ್, ಬೌಲಿಂಗ್ ಅಥವಾ ತಂಡದ ನಾಯಕನಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/steve-smith-registers-27th-test-ton-to-equal-virat-kohli-794454.html" itemprop="url">27ನೇ ಟೆಸ್ಟ್ ಶತಕ; ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಟೀವನ್ ಸ್ಮಿತ್ </a></p>.<p>ವಿಕೆಟ್ ಕೀಪರ್ಗೆ ಗಾಯವಾದಾಗ ಬದಲಿ ಆಟಗಾರ ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಬಹುದಾಗಿದೆ. ಆದರೆ ದುರುಪಯೋಗವನ್ನು ತಡೆಯಲು ಅಂಪೈರ್ಗಳು ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಇಲ್ಲಿ ಬದಲಿ ಆಟಗಾರ ಬ್ಯಾಟಿಂಗ್, ಬೌಲಿಂಗ್ ಅಥವಾ ನಾಯಕನಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ.</p>.<p>ಇಲ್ಲಿ ಆಸಕ್ತಿದಾಯಕ ವಿಷಯವೆಂಬಂತೆ ಈ ಹೊಸ ನಿಯಮದ ಲಾಭ ಪಡೆದ ಮೊದಲ ತಂಡ ಕೂಡಾ ಭಾರತ ಆಗಿದೆ. 2018ನೇ ಇಸವಿಯಲ್ಲಿ ಜೋಹಾನ್ಸ್ಬರ್ಗ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಗಾಯಾಳು ಪಾರ್ಥಿವ್ ಪಟೇಲ್ ಬದಲಿಗೆ ದಿನೇಶ್ ಕಾರ್ತಿಕ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>