<p><strong>ರಾಜ್ಕೋಟ್:</strong>ಭಾರತ–ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದಲ್ಲಿಬ್ಯಾಟಿಂಗ್ ವೇಳೆ ಪೆಟ್ಟು ತಿಂದಿದ್ದ ವಿಕೆಟ್ಕೀಪರ್ ರಿಷಭ್ ಪಂತ್, ತಂಡದ ಉಳಿದ ಆಟಗಾರರೊಂದಿಗೆ ರಾಜ್ಕೋಟ್ಗೆತೆರಳುವುದಿಲ್ಲ ಎಂದು ತಿಳಿದು ಬಂದಿದೆ.</p>.<p>‘ರಿಷಭ್ ಪಂತ್ ಸಹ ಆಟಗಾರರೊಂದಿಗೆ ಇಂದು ರಾಜ್ಕೋಟ್ಗೆ ತೆರಳುವುದಿಲ್ಲ. ನಿಧಾನವಾಗಿ ಅವರು ತಂಡ ಕೂಡಿಕೊಳ್ಳಲಿದ್ದಾರೆ’ ಎಂದುಬಿಸಿಸಿಐ ಮೂಲಗಳು ತಿಳಿಸಿವೆ.</p>.<p>‘ತಜ್ಞ ವೈದ್ಯರು ರಿಷಭ್ ಅವರ ತಪಾಸಣೆ ಮಾಡಿದ್ದಾರೆ. ಬುಧವಾರ ಬೆಳಿಗ್ಗೆಯವರೆಗೂ ಅವರ ಮೇಲೆ ವೈದ್ಯರು ವಿಶೇಷ ನಿಗಾ ಇಟ್ಟಿದ್ದು, ಆರೈಕೆ ಮಾಡುತ್ತಿದ್ದಾರೆ’ ಎಂದು ಪಂದ್ಯದ ಬಳಿಕ ಬಿಸಿಸಿಐ ಪ್ರಕಟಣೆಯಲ್ಲಿ ಹೇಳಿತ್ತು.</p>.<p>ಎರಡನೇ ಪಂದ್ಯಕ್ಕೆ ಪಂತ್ಲಭ್ಯವಾಗಿರಲಿದ್ದಾರೆಯೇ ಅಥವಾ ವಿಶ್ರಾಂತಿ ನೀಡಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.</p>.<p>44ನೇ ಓವರ್ ಬೌಲ್ ಮಾಡಿದ ಪ್ಯಾಟ್ ಕಮಿನ್ಸ್ ಎಸೆತವೊಂದು ನಿರೀಕ್ಷೆಗಿಂತ ಹೆಚ್ಚು ಎತ್ತರ ಪುಟಿದು ಪಂತ್ ಹೆಲ್ಮೆಟ್ಗೆ ಬಡಿದಿತ್ತು. ಇದರಿಂದಾಗಿ ಅವರಿಗೆ ಬ್ಯಾಟಿಂಗ್ ಬಳಿಕ ವಿಶ್ರಾಂತಿ ನೀಡಲಾಯಿತು. ಪಂತ್ ಬದಲುಕೆ.ಎಲ್.ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದರು. ಬದಲೀ ಫೀಲ್ಡರ್ ಆಗಿಮನೀಷ್ ಪಾಂಡೆ ಆಡಿದ್ದರು.</p>.<p>ಈ ಪಂದ್ಯದಲ್ಲಿ ತಾಳ್ಮೆಯಿಂದ ಆಡಿದ್ದ ಪಂತ್33 ಎಸೆತಗಳಲ್ಲಿ 28 ರನ್ ಗಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಕೋಟ್:</strong>ಭಾರತ–ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದಲ್ಲಿಬ್ಯಾಟಿಂಗ್ ವೇಳೆ ಪೆಟ್ಟು ತಿಂದಿದ್ದ ವಿಕೆಟ್ಕೀಪರ್ ರಿಷಭ್ ಪಂತ್, ತಂಡದ ಉಳಿದ ಆಟಗಾರರೊಂದಿಗೆ ರಾಜ್ಕೋಟ್ಗೆತೆರಳುವುದಿಲ್ಲ ಎಂದು ತಿಳಿದು ಬಂದಿದೆ.</p>.<p>‘ರಿಷಭ್ ಪಂತ್ ಸಹ ಆಟಗಾರರೊಂದಿಗೆ ಇಂದು ರಾಜ್ಕೋಟ್ಗೆ ತೆರಳುವುದಿಲ್ಲ. ನಿಧಾನವಾಗಿ ಅವರು ತಂಡ ಕೂಡಿಕೊಳ್ಳಲಿದ್ದಾರೆ’ ಎಂದುಬಿಸಿಸಿಐ ಮೂಲಗಳು ತಿಳಿಸಿವೆ.</p>.<p>‘ತಜ್ಞ ವೈದ್ಯರು ರಿಷಭ್ ಅವರ ತಪಾಸಣೆ ಮಾಡಿದ್ದಾರೆ. ಬುಧವಾರ ಬೆಳಿಗ್ಗೆಯವರೆಗೂ ಅವರ ಮೇಲೆ ವೈದ್ಯರು ವಿಶೇಷ ನಿಗಾ ಇಟ್ಟಿದ್ದು, ಆರೈಕೆ ಮಾಡುತ್ತಿದ್ದಾರೆ’ ಎಂದು ಪಂದ್ಯದ ಬಳಿಕ ಬಿಸಿಸಿಐ ಪ್ರಕಟಣೆಯಲ್ಲಿ ಹೇಳಿತ್ತು.</p>.<p>ಎರಡನೇ ಪಂದ್ಯಕ್ಕೆ ಪಂತ್ಲಭ್ಯವಾಗಿರಲಿದ್ದಾರೆಯೇ ಅಥವಾ ವಿಶ್ರಾಂತಿ ನೀಡಲಾಗುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.</p>.<p>44ನೇ ಓವರ್ ಬೌಲ್ ಮಾಡಿದ ಪ್ಯಾಟ್ ಕಮಿನ್ಸ್ ಎಸೆತವೊಂದು ನಿರೀಕ್ಷೆಗಿಂತ ಹೆಚ್ಚು ಎತ್ತರ ಪುಟಿದು ಪಂತ್ ಹೆಲ್ಮೆಟ್ಗೆ ಬಡಿದಿತ್ತು. ಇದರಿಂದಾಗಿ ಅವರಿಗೆ ಬ್ಯಾಟಿಂಗ್ ಬಳಿಕ ವಿಶ್ರಾಂತಿ ನೀಡಲಾಯಿತು. ಪಂತ್ ಬದಲುಕೆ.ಎಲ್.ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದರು. ಬದಲೀ ಫೀಲ್ಡರ್ ಆಗಿಮನೀಷ್ ಪಾಂಡೆ ಆಡಿದ್ದರು.</p>.<p>ಈ ಪಂದ್ಯದಲ್ಲಿ ತಾಳ್ಮೆಯಿಂದ ಆಡಿದ್ದ ಪಂತ್33 ಎಸೆತಗಳಲ್ಲಿ 28 ರನ್ ಗಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>