<p><strong>ಸಿಡ್ನಿ:</strong> ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಿಂದಲೂ ಕರ್ನಾಟಕದ ಮನೀಷ್ ಪಾಂಡೆ ಅವರನ್ನು ಕಡೆಗಣಿಸಲಾಗಿದೆ. ಪಾಂಡೆ ಅವರನ್ನು ಆಡುವ ಬಳಗದಿಂದ ಕೈಬಿಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ.</p>.<p>ದ್ವಿತೀಯ ಪಂದ್ಯದಲ್ಲಿ ಆಡಲು ಶೇಕಡಾ 100ರಷ್ಟು ಫಿಟ್ ಅಲ್ಲದ ಕಾರಣ ಪಾಂಡೆ ಅವರ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಹೆಸರಿಸಲಾಗಿತ್ತು. ತಮಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿರುವ ಶ್ರೇಯಸ್ ಅಯ್ಯರ್, ಕೊನೆಯ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗೆ ಗೆಲುವಿನ ಜೊತೆಯಾಟವನ್ನು ಕಟ್ಟಿದ್ದರು.</p>.<p>ಅತ್ತ ಮೊದಲೆರಡು ಪಂದ್ಯಗಳಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಮನೀಷ್ ಪಾಂಡೆ ಹೆಸರಿಸುವ ಸಾಧ್ಯತೆಗಳಿವೆ ಎಂಬ ಬಗ್ಗೆ ವರದಿಗಳು ಬಂದಿದ್ದವು.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-vs-autralia-final-t20-team-india-won-the-toss-elected-to-field-785403.html" itemprop="url">IND vs AUS T20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ </a></p>.<p>ಆದರೆ ಸಂಜುಗೆ ಮಣೆ ಹಾಕಿರುವ ಟೀಮ್ ಮ್ಯಾನೇಜ್ಮೆಂಟ್, ಅಂತಿಮ ಟಿ20 ಪಂದ್ಯದಿಂದಲೂ ಮನೀಷ್ ಪಾಂಡೆ ಅವರನ್ನು ಕಡೆಗಣಿಸಿದೆ. ಪಾಂಡ್ಯ ಈಗಲೂ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆಯೇ ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಟೀಮ್ ಇಂಡಿಯಾದಿಂದ ಅಧಿಕೃತ ಮಾಹಿತಿಗಳು ಬಂದಿಲ್ಲ.</p>.<p>ಮೊದಲ ಟಿ20ನಲ್ಲಿ ಆಡಿದ್ದ ಮನೀಷ್ ಪಾಂಡೆ ಎರಡು ರನ್ನಿಗೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಈ ಮೊದಲು ಏಕದಿನ ಸರಣಿಯಲ್ಲೂ ಅವಕಾಶ ವಂಚಿತವಾಗಿದ್ದರು.</p>.<p>ಒಟ್ಟಾರೆಯಾಗಿ ಪದೇ ಪದೇ ಆಟಗಾರರನ್ನು ಬದಲಾಯಿಸುತ್ತಿರುವುದು ಮಾಜಿಗಳ ಅಸಮಾಧಾನಕ್ಕೂ ಕಾರಣವಾಗಿದೆ. ಈ ಬಗ್ಗೆ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಬಹಿರಂಗ ಹೇಳಿಕೆ ನೀಡಿದ್ದು, ತಂಡವನ್ನು ಪದೇ ಪದೇ ಬದಲಾಯಿಸಬಾರದು ಎಂಬ ಸಲಹೆ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/pv-web-exclusive-hardik-pandya-is-turning-into-the-finisher-785253.html" itemprop="url">PV Web Exclusive| ಪಾಂಡ್ಯ ಈಗ ‘ಫಿನಿಷರ್’ </a></p>.<p>ಅಂದ ಹಾಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಉಳಿದಿರುವಂತೆಯೇ ಟೀಮ್ ಇಂಡಿಯಾ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಡ್ನಿ:</strong> ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಿಂದಲೂ ಕರ್ನಾಟಕದ ಮನೀಷ್ ಪಾಂಡೆ ಅವರನ್ನು ಕಡೆಗಣಿಸಲಾಗಿದೆ. ಪಾಂಡೆ ಅವರನ್ನು ಆಡುವ ಬಳಗದಿಂದ ಕೈಬಿಟ್ಟಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದೆ.</p>.<p>ದ್ವಿತೀಯ ಪಂದ್ಯದಲ್ಲಿ ಆಡಲು ಶೇಕಡಾ 100ರಷ್ಟು ಫಿಟ್ ಅಲ್ಲದ ಕಾರಣ ಪಾಂಡೆ ಅವರ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಹೆಸರಿಸಲಾಗಿತ್ತು. ತಮಗೆ ಸಿಕ್ಕ ಅವಕಾಶವನ್ನು ಸಮರ್ಥವಾಗಿ ಬಳಸಿರುವ ಶ್ರೇಯಸ್ ಅಯ್ಯರ್, ಕೊನೆಯ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಜೊತೆಗೆ ಗೆಲುವಿನ ಜೊತೆಯಾಟವನ್ನು ಕಟ್ಟಿದ್ದರು.</p>.<p>ಅತ್ತ ಮೊದಲೆರಡು ಪಂದ್ಯಗಳಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಸಂಜು ಸ್ಯಾಮ್ಸನ್ ಸ್ಥಾನಕ್ಕೆ ಮನೀಷ್ ಪಾಂಡೆ ಹೆಸರಿಸುವ ಸಾಧ್ಯತೆಗಳಿವೆ ಎಂಬ ಬಗ್ಗೆ ವರದಿಗಳು ಬಂದಿದ್ದವು.</p>.<p>ಇದನ್ನೂ ಓದಿ:<a href="https://www.prajavani.net/sports/cricket/india-vs-autralia-final-t20-team-india-won-the-toss-elected-to-field-785403.html" itemprop="url">IND vs AUS T20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ </a></p>.<p>ಆದರೆ ಸಂಜುಗೆ ಮಣೆ ಹಾಕಿರುವ ಟೀಮ್ ಮ್ಯಾನೇಜ್ಮೆಂಟ್, ಅಂತಿಮ ಟಿ20 ಪಂದ್ಯದಿಂದಲೂ ಮನೀಷ್ ಪಾಂಡೆ ಅವರನ್ನು ಕಡೆಗಣಿಸಿದೆ. ಪಾಂಡ್ಯ ಈಗಲೂ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆಯೇ ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಟೀಮ್ ಇಂಡಿಯಾದಿಂದ ಅಧಿಕೃತ ಮಾಹಿತಿಗಳು ಬಂದಿಲ್ಲ.</p>.<p>ಮೊದಲ ಟಿ20ನಲ್ಲಿ ಆಡಿದ್ದ ಮನೀಷ್ ಪಾಂಡೆ ಎರಡು ರನ್ನಿಗೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಈ ಮೊದಲು ಏಕದಿನ ಸರಣಿಯಲ್ಲೂ ಅವಕಾಶ ವಂಚಿತವಾಗಿದ್ದರು.</p>.<p>ಒಟ್ಟಾರೆಯಾಗಿ ಪದೇ ಪದೇ ಆಟಗಾರರನ್ನು ಬದಲಾಯಿಸುತ್ತಿರುವುದು ಮಾಜಿಗಳ ಅಸಮಾಧಾನಕ್ಕೂ ಕಾರಣವಾಗಿದೆ. ಈ ಬಗ್ಗೆ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಬಹಿರಂಗ ಹೇಳಿಕೆ ನೀಡಿದ್ದು, ತಂಡವನ್ನು ಪದೇ ಪದೇ ಬದಲಾಯಿಸಬಾರದು ಎಂಬ ಸಲಹೆ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/pv-web-exclusive-hardik-pandya-is-turning-into-the-finisher-785253.html" itemprop="url">PV Web Exclusive| ಪಾಂಡ್ಯ ಈಗ ‘ಫಿನಿಷರ್’ </a></p>.<p>ಅಂದ ಹಾಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಉಳಿದಿರುವಂತೆಯೇ ಟೀಮ್ ಇಂಡಿಯಾ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>