<p><strong>ಢಾಕಾ:</strong> ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.</p>.<p>ಈ ಕುರಿತು ಬಿಸಿಸಿಐ ಟ್ವೀಟ್ನಲ್ಲಿ ತಿಳಿಸಿದೆ.</p>.<p>ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.</p>.<p>ಬಾಂಗ್ಲಾದೇಶ ಇನ್ನಿಂಗ್ಸ್ನ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್ಗೆ ಸವರಿ ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು.</p>.<p><br /><br />ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ.</p>.<p>ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ.</p>.<p>ಈಗ ಭಾರತದ ಇನ್ನಿಂಗ್ಸ್ ವೇಳೆ ರೋಹಿತ್ ಬ್ಯಾಟಿಂಗ್ ಮಾಡಲು ಕ್ರೀಸಿಗಿಳಿಯಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ.</p>.<p>ಈ ಕುರಿತು ಬಿಸಿಸಿಐ ಟ್ವೀಟ್ನಲ್ಲಿ ತಿಳಿಸಿದೆ.</p>.<p>ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು.</p>.<p>ಬಾಂಗ್ಲಾದೇಶ ಇನ್ನಿಂಗ್ಸ್ನ ಎರಡನೇ ಓವರ್ನಲ್ಲಿ ಮೊಹಮ್ಮದ್ ಸಿರಾಜ್ ಎಸೆದ ಚೆಂಡು ಬಾಂಗ್ಲಾ ಆರಂಭಿಕ ಬ್ಯಾಟರ್ ಅನಾಮುಲ್ ಹಕ್ ಅವರ ಬ್ಯಾಟ್ಗೆ ಸವರಿ ಸ್ಲಿಪ್ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರೋಹಿತ್ ಶರ್ಮಾ ಅವರತ್ತ ರಭಸದಿಂದ ಸಾಗಿತ್ತು.</p>.<p><br /><br />ಆದರೆ ಕ್ಯಾಚ್ ಅನ್ನು ಕೈಚೆಲ್ಲಿದ ರೋಹಿತ್, ಎಡಗೈಗೆ ಗಾಯಮಾಡಿಕೊಂಡಿದ್ದರು. ರೋಹಿತ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ.</p>.<p>ತಕ್ಷಣವೇ ರೋಹಿತ್ ಮೈದಾನ ತೊರೆದರು. ಬಳಿಕ ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ, ಸ್ಕ್ಯಾನಿಂಗ್ಗಾಗಿ ತೆರಳಿದ್ದಾರೆ ಎಂದು ತಿಳಿಸಿದೆ.</p>.<p>ಈಗ ಭಾರತದ ಇನ್ನಿಂಗ್ಸ್ ವೇಳೆ ರೋಹಿತ್ ಬ್ಯಾಟಿಂಗ್ ಮಾಡಲು ಕ್ರೀಸಿಗಿಳಿಯಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>