ಇದರಿಂದಾಗಿ ಟೀಮ್ ಇಂಡಿಯಾವು ತನ್ನ ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿದೆ.
ಯೋಗೇಶ್ ಪರ್ಮಾರ್ಗೆ ಕೋವಿಡ್ ಸೋಂಕು ತಗುಲಿರುವುದನ್ನು ಬಿಸಿಸಿಐ ಖಚಿತಪಡಿಸಿದೆ.
ಟೀಮ್ ಇಂಡಿಯಾ ಆಟಗಾರರಲ್ಲಿ ಕೊಠಡಿಯಲ್ಲೇ ಉಳಿದುಕೊಳ್ಳಲು ಸೂಚಿಸಲಾಗಿದ್ದು, ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ. ಇದರ ವರದಿ ಶುಕ್ರವಾರದಂದೇ ಲಭ್ಯವಾಗುವ ನಿರೀಕ್ಷೆಯಿದೆ.
ಓವಲ್ ಟೆಸ್ಟ್ ಸಂದರ್ಭದಲ್ಲಿ ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನ ಫಿಸಿಯೊ ನಿತಿನ್ ಪಟೇಲ್, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಪ್ರತ್ಯೇಕವಾಸದಲ್ಲಿರಲು ಸೂಚಿಸಲಾಗಿತ್ತು.
ಈ ಮಧ್ಯೆ ಹೆಚ್ಚುವರಿ ಫಿಸಿಯೊ ಒದಗಿಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ವಿನಂತಿ ಮಾಡಿದೆ ಎಂಬುದು ತಿಳಿದು ಬಂದಿದೆ.