ಸೌತಾಂಪ್ಟನ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಬಳಿಕ 20 ದಿನಗಳ ವಿಶ್ರಾಂತಿಯ ಅವಧಿಯ ವೇಳೆ ಪಂತ್ ಅವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಮಧ್ಯೆ ಯುರೋ ಕಪ್ ಪಂದ್ಯಾವಳಿಯನ್ನು ವೀಕ್ಷಿಸಲು ತೆರಳಿದ್ದರು.
ರಿಷಭ್ ಪಂತ್ ಅವರಲ್ಲಿ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬಿಸಿಸಿಐ ವೈದ್ಯಕೀಯ ತಂಡವು ಸೂಕ್ಷ್ಮ ನಿಗಾ ವಹಿಸಿತ್ತು.
ಭಾರತ ತಂಡದ ಥ್ರೋಡೌನ್ ಪರಿಣತ ದಯಾನಂದ ಗರಾನಿ ಅವರಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ, ಅಭಿಮನ್ಯು ಈಶ್ವರನ್ ಹಾಗೂ ಬೌಲಿಂಗ್ ಕೋಚ್ ಭರತ್ ಅರುಣ್ ಅವರನ್ನು ಐಸೋಲೇಷನ್ಗೆ ಒಳಪಡಿಸಲಾಗಿದೆ.