2019ರ ನವೆಂಬರ್ನಲ್ಲಿ ದ್ವಿಶತಕ ಬಾರಿಸಿದ ನಂತರ ಬ್ಯಾಟಿಂಗ್ನಲ್ಲಿ ಸತತ ವೈಫಲ್ಯ ಅನುಭವಿಸಿದ್ದ ಮಯಂಕ್ ವಾಂಖೆಡೆಯಲ್ಲಿ ಅಮೋಘ ಆಟವಾಡಿದರು. ಈ ಸರಣಿಯ ಮೊದಲ ಪಂದ್ಯದಲ್ಲಿಯೂ ಅವರು ಹೆಚ್ಚು ರನ್ ಗಳಿಸಿರಲಿಲ್ಲ. ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ಗಾಯಗೊಂಡಿರುವ ಕೆ.ಎಲ್. ರಾಹುಲ್ ತಂಡದಲ್ಲಿ ಇಲ್ಲದ ಕಾರಣಕ್ಕೆ ಸ್ಥಾನ ಪಡೆದಿದ್ದ ಮಯಂಕ್ ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು.