<p><strong>ಕ್ರೈಸ್ಟ್ಚರ್ಚ್:</strong> ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್, 1-0 ಅಂತರದ ಗೆಲುವು ದಾಖಲಿಸಿದೆ.</p>.<p>ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು. ಆದರೆ ಕೊನೆಯ ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ.</p>.<p>ಕ್ರೈಸ್ಟ್ಚರ್ಚ್ನಲ್ಲಿ ಇಂದು ನಡೆದ ಅಂತಿಮ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ ಪಡೆ ಸಾಧಾರಣ ಮೊತ್ತ ಗಳಿಸಿತು. 47.3 ಓವರ್ಗಳಲ್ಲಿ 219 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು.</p>.<p>ಇದನ್ನೂ ಓದಿ:<a href="https://www.prajavani.net/sports/cricket/bcci-serves-conflict-of-interest-notice-to-its-president-992890.html" itemprop="url">ಹಿತಾಸಕ್ತಿ ಸಂಘರ್ಷದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ </a></p>.<p>ವಾಷಿಂಗ್ಟನ್ ಸುಂದರ್ ಗರಿಷ್ಠ 51 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ 49 ರನ್ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು.</p>.<p>ನಾಯಕ ಶಿಖರ್ ಧವನ್ (28), ಶುಭಮನ್ ಗಿಲ್ (13), ರಿಷಭ್ ಪಂತ್ (10), ಸೂರ್ಯಕುಮಾರ್ ಯಾದವ್ (6), ದೀಪಕ್ ಹೂಡಾ (12), ದೀಪಕ್ ಚಾಹರ್ (8), ಯಜುವೇಂದ್ರ ಚಾಹಲ್ (8) ಹಾಗೂ ಆರ್ಷದೀಪ್ ಸಿಂಗ್ (9) ನಿರಾಸೆ ಮೂಡಿಸಿದರು.</p>.<p>ಕಿವೀಸ್ ಪರ ಆ್ಯಡಂ ಮಿಲ್ನೆ ಹಾಗೂ ಡೆರಿಲ್ ಮಿಚೆಲ್ ತಲಾ ಮೂರು ಮತ್ತು ಟಿಮ್ ಸೌಥಿ ಎರಡು ವಿಕೆಟ್ ಗಳಿಸಿ ಮಿಂಚಿದರು.</p>.<p>ಬಳಿಕ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 18 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡಚಣೆಯಾಯಿತು. ಆರಂಭಿಕ ಬ್ಯಾಟರ್ ಫಿನ್ ಅಲೆನ್ 57 ರನ್ ಗಳಿಸಿದರು. ಡೆವೂನ್ ಕಾನ್ವೇ ಅಜೇಯ 38 ಗಳಿಸಿದರು.</p>.<p>ಪಂದ್ಯದಲ್ಲಿ ಫಲಿತಾಂಶ ದಾಖಲಾಗಲು ಡಕ್ವರ್ಥ್-ಲೂಯಿಸ್ ನಿಯಮದ ಅನ್ವಯ ನ್ಯೂಜಿಲೆಂಡ್ ಕನಿಷ್ಠ 20 ಓವರ್ ಬ್ಯಾಟಿಂಗ್ ಮಾಡಬೇಕಿತ್ತು. ಆದರೆ ಸತತವಾಗಿ ಮಳೆ ಸುರಿದ ಪರಿಣಾಮ ಪಂದ್ಯ ಮುಂದುವರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಪಂದ್ಯವನ್ನು ಕೈಬಿಡಲಾಯಿತು.</p>.<p>ನ್ಯೂಜಿಲೆಂಡ್ನ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲೇಥಮ್ ಸರಣಿಶ್ರೇಷ್ಠ ಪುರಸ್ಕೃತರಾದರು.</p>.<p>ಏಕದಿನ ಸರಣಿಗೂ ಮುನ್ನ ನಡೆದ ಮೂರು ಪಂದ್ಯಗಳ ಟ್ವೆಂಟಿ-20 ಅಂತರರಾಷ್ಟ್ರೀಯ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದ ಗೆಲುವು ದಾಖಲಿಸಿತ್ತು. ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದ್ದರೆ ಎರಡನೇ ಪಂದ್ಯದಲ್ಲಿ ಭಾರತ ಜಯಿಸಿತ್ತು. ಅಂತಿಮ ಪಂದ್ಯಕ್ಕೂ ಮಳೆ ಅಡಚಣೆಯಾದಾಗ ಡಕ್ವರ್ಥ್-ಲೂಯಿಸ್ ನಿಮಯದನ್ವಯ 'ಟೈ' ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ರೈಸ್ಟ್ಚರ್ಚ್:</strong> ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಏಕದಿನ ಪಂದ್ಯವು ಮಳೆಯಿಂದಾಗಿ ರದ್ದುಗೊಂಡಿದೆ. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್, 1-0 ಅಂತರದ ಗೆಲುವು ದಾಖಲಿಸಿದೆ.</p>.<p>ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ ಅಂತರದ ಗೆಲುವು ದಾಖಲಿಸಿತ್ತು. ಆದರೆ ಕೊನೆಯ ಎರಡು ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ.</p>.<p>ಕ್ರೈಸ್ಟ್ಚರ್ಚ್ನಲ್ಲಿ ಇಂದು ನಡೆದ ಅಂತಿಮ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ ಪಡೆ ಸಾಧಾರಣ ಮೊತ್ತ ಗಳಿಸಿತು. 47.3 ಓವರ್ಗಳಲ್ಲಿ 219 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು.</p>.<p>ಇದನ್ನೂ ಓದಿ:<a href="https://www.prajavani.net/sports/cricket/bcci-serves-conflict-of-interest-notice-to-its-president-992890.html" itemprop="url">ಹಿತಾಸಕ್ತಿ ಸಂಘರ್ಷದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ </a></p>.<p>ವಾಷಿಂಗ್ಟನ್ ಸುಂದರ್ ಗರಿಷ್ಠ 51 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ 49 ರನ್ಗಳ ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು.</p>.<p>ನಾಯಕ ಶಿಖರ್ ಧವನ್ (28), ಶುಭಮನ್ ಗಿಲ್ (13), ರಿಷಭ್ ಪಂತ್ (10), ಸೂರ್ಯಕುಮಾರ್ ಯಾದವ್ (6), ದೀಪಕ್ ಹೂಡಾ (12), ದೀಪಕ್ ಚಾಹರ್ (8), ಯಜುವೇಂದ್ರ ಚಾಹಲ್ (8) ಹಾಗೂ ಆರ್ಷದೀಪ್ ಸಿಂಗ್ (9) ನಿರಾಸೆ ಮೂಡಿಸಿದರು.</p>.<p>ಕಿವೀಸ್ ಪರ ಆ್ಯಡಂ ಮಿಲ್ನೆ ಹಾಗೂ ಡೆರಿಲ್ ಮಿಚೆಲ್ ತಲಾ ಮೂರು ಮತ್ತು ಟಿಮ್ ಸೌಥಿ ಎರಡು ವಿಕೆಟ್ ಗಳಿಸಿ ಮಿಂಚಿದರು.</p>.<p>ಬಳಿಕ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 18 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡಚಣೆಯಾಯಿತು. ಆರಂಭಿಕ ಬ್ಯಾಟರ್ ಫಿನ್ ಅಲೆನ್ 57 ರನ್ ಗಳಿಸಿದರು. ಡೆವೂನ್ ಕಾನ್ವೇ ಅಜೇಯ 38 ಗಳಿಸಿದರು.</p>.<p>ಪಂದ್ಯದಲ್ಲಿ ಫಲಿತಾಂಶ ದಾಖಲಾಗಲು ಡಕ್ವರ್ಥ್-ಲೂಯಿಸ್ ನಿಯಮದ ಅನ್ವಯ ನ್ಯೂಜಿಲೆಂಡ್ ಕನಿಷ್ಠ 20 ಓವರ್ ಬ್ಯಾಟಿಂಗ್ ಮಾಡಬೇಕಿತ್ತು. ಆದರೆ ಸತತವಾಗಿ ಮಳೆ ಸುರಿದ ಪರಿಣಾಮ ಪಂದ್ಯ ಮುಂದುವರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಪಂದ್ಯವನ್ನು ಕೈಬಿಡಲಾಯಿತು.</p>.<p>ನ್ಯೂಜಿಲೆಂಡ್ನ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲೇಥಮ್ ಸರಣಿಶ್ರೇಷ್ಠ ಪುರಸ್ಕೃತರಾದರು.</p>.<p>ಏಕದಿನ ಸರಣಿಗೂ ಮುನ್ನ ನಡೆದ ಮೂರು ಪಂದ್ಯಗಳ ಟ್ವೆಂಟಿ-20 ಅಂತರರಾಷ್ಟ್ರೀಯ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಅಂತರದ ಗೆಲುವು ದಾಖಲಿಸಿತ್ತು. ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದ್ದರೆ ಎರಡನೇ ಪಂದ್ಯದಲ್ಲಿ ಭಾರತ ಜಯಿಸಿತ್ತು. ಅಂತಿಮ ಪಂದ್ಯಕ್ಕೂ ಮಳೆ ಅಡಚಣೆಯಾದಾಗ ಡಕ್ವರ್ಥ್-ಲೂಯಿಸ್ ನಿಮಯದನ್ವಯ 'ಟೈ' ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>