ಲಖನೌ: ಭಾರತ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡವು ನ್ಯೂಜಿಲೆಂಡ್ ಎದುರಿನ ಚುಟುಕು ಕ್ರಿಕೆಟ್ ಸರಣಿ ಜಯಿಸುವ ಗುರಿ ಈಡೇರಬೇಕಾದರೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ಈಗ 1–0ಯ ಮುನ್ನಡೆಯಲ್ಲಿದೆ. ರಾಂಚಿಯಲ್ಲಿ ಶುಕ್ರವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ಆತಿಥೇಯ ತಂಡವು 21 ರನ್ಗಳಿಂದ ಸೋತಿತ್ತು.
ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಪಿಚ್ ಕೂಡ ಸ್ಪಿನ್ನರ್ಗಳಿಗೆ ಹೆಚ್ಚು ನೆರವು ನೀಡುವ ನಿರೀಕ್ಷೆ ಇದೆ.
ತಂಡಗಳು ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಶಿವಂ ಮಾವಿ, ಆರ್ಷದೀಪ್ ಸಿಂಗ್