ಭಾನುವಾರ ಮುಕ್ತಾಯವಾದ ಟಿ20 ಸರಣಿಯ ಕೊನೆಯ ಪಂದ್ಯದಿಂದ ನಾಯಕ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಹೀಗಾಗಿ ತಂಡ ಮುನ್ನಡೆಸುವ ಜವಾಬ್ದಾರಿ ಹೊತ್ತ ರೋಹಿತ್, ಬ್ಯಾಟಿಂಗ್ ವೇಳೆ ಸ್ನಾಯು ಸೆಳೆತಕ್ಕೊಳಗಾಗಿದ್ದರು. ನಿವೃತ್ತಿ ಪಡೆದು ಮೈದಾನದಿಂದ ಹೊರನಡೆದಿದ್ದ ಅವರು,ಬಳಿಕ ಮೈದಾನಕ್ಕಿಳಿದಿರಲಿಲ್ಲ.ರೋಹಿತ್ಬದಲು ಕನ್ನಡಿಗ ಕೆ.ಎಲ್.ರಾಹುಲ್ ತಂಡ ಮುನ್ನಡೆಸಿದ್ದರು.