ನೇಪಿಯರ್ನಲ್ಲಿ ನಡೆಯುವ ಪಂದ್ಯದಲ್ಲಿ ಗೆದ್ದು ಸರಣಿ ತಮ್ಮದಾಗಿಸಿಕೊಳ್ಳುವುದು ಹಾರ್ದಿಕ್ ಪಾಂಡ್ಯ ಬಳಗದ ಗುರಿ. ಸರಣಿಯ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರೆ, ಭಾನುವಾರ ನಡೆದಿದ್ದ ಎರಡನೇ ಪಂದ್ಯದಲ್ಲಿ ಭಾರತ ಗೆದ್ದು 1–0 ರಲ್ಲಿ ಮುನ್ನಡೆ ಸಾಧಿಸಿದೆ. ಸೂರ್ಯಕುಮಾರ್ ಯಾದವ್ ಅವರು ಭರ್ಜರಿ ಶತಕ ಗಳಿಸಿದ್ದರು.