<p><strong>ಗುವಾಹಟಿ: </strong>ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ.</p>.<p>ಅಸ್ಸಾಂ ರಾಜಧಾನಿಯ ಬರ್ಸಾಪುರದಲ್ಲಿರುವ ಡಾ.ಭೂಪೆನ್ ಹಜಾರಿಕಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.</p>.<p>ತಿರುವನಂತಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಗೆದ್ದಿರುವ ಭಾರತ ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಇರಾದೆ ಟೀಂ ಇಂಡಿಯಾದ್ದು. ಆದರೆ, ಸರಣಿಯನ್ನು ಜೀವಂತವಾಗಿಡಬೇಕಿದ್ದರೆ ದಕ್ಷಿಣ ಆಫ್ರಿಕಾ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.</p>.<p>ಇನ್ನೊಂದೆಡೆ, ಜಸ್ಪ್ರೀತ್ ಬೂಮ್ರಾ ಇಲ್ಲದ ಬೌಲಿಂಗ್ ಪಡೆಯನ್ನು ಸಮತೋಲನಗೊಳಿಸುವ ಸವಾಲು ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ಬಳಗದ ಮುಂದಿದೆ.</p>.<p><strong>ಟಿಕೆಟ್ ಸೋಲ್ಡ್ ಔಟ್</strong></p>.<p>ಎರಡು ವರ್ಷಗಳ ನಂತರ ಇಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯುತ್ತಿರುವುದರಿಂದ ವೀಕ್ಷಣೆಗೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಲ್ಲ ಟಿಕೆಟ್ಗಳೂ ಮಾರಾಟವಾಗಿವೆ.</p>.<p>‘38 ಸಾವಿರ ಆಸನ ಸಾಮರ್ಥ್ಯವಿರುವ ಕ್ರೀಡಾಂಗಣದಲ್ಲಿ 21,200 ಟಿಕೆಟ್ಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಉಳಿದದ್ದು ಕ್ಲಬ್ಗಳು, ಗಣ್ಯರು, ಪದಾಧಿಕಾರಿಗಳಿಗಾಗಿ ಮೀಸಲಾಗಿವೆ. ಜನರಿಂದ ಅಪಾರ ಬೇಡಿಕೆ ಬಂದಿದೆ’ ಎಂದು ಅಸ್ಸಾಂ ಕ್ರಿಕೆಟ್ ಸಂಸ್ಥೆ ಮೂಲಗಳು ತಿಳಿಸಿವೆ.</p>.<p><strong>ಪಿಚ್ ಪರಿಸ್ಥಿತಿ?</strong></p>.<p>ಇಲ್ಲಿ ಈ ಹಿಂದೆ ನಡೆದಿರುವ ಐದು ಪಂದ್ಯಗಳಲ್ಲಿ ಬೃಹತ್ ಮೊತ್ತಗಳು ದಾಖಲಾಗಿಲ್ಲ. 160 ರನ್ ಇಲ್ಲಿ ದಾಖಲಾಗಿರುವ ಗರಿಷ್ಠ ಮೊತ್ತವಾಗಿದೆ. ಬೌಲರ್ಗಳಿಗೇ ಹೆಚ್ಚು ನೆರವು ಸಿಗುವ ಸಾಧ್ಯತೆ ಇದೆ.</p>.<p><strong>ಭಾರತ ತಂಡ</strong></p>.<p>ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ: </strong>ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ.</p>.<p>ಅಸ್ಸಾಂ ರಾಜಧಾನಿಯ ಬರ್ಸಾಪುರದಲ್ಲಿರುವ ಡಾ.ಭೂಪೆನ್ ಹಜಾರಿಕಾ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.</p>.<p>ತಿರುವನಂತಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಗೆದ್ದಿರುವ ಭಾರತ ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿಸಿದೆ. ಈ ಪಂದ್ಯವನ್ನೂ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಇರಾದೆ ಟೀಂ ಇಂಡಿಯಾದ್ದು. ಆದರೆ, ಸರಣಿಯನ್ನು ಜೀವಂತವಾಗಿಡಬೇಕಿದ್ದರೆ ದಕ್ಷಿಣ ಆಫ್ರಿಕಾ ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.</p>.<p>ಇನ್ನೊಂದೆಡೆ, ಜಸ್ಪ್ರೀತ್ ಬೂಮ್ರಾ ಇಲ್ಲದ ಬೌಲಿಂಗ್ ಪಡೆಯನ್ನು ಸಮತೋಲನಗೊಳಿಸುವ ಸವಾಲು ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ಬಳಗದ ಮುಂದಿದೆ.</p>.<p><strong>ಟಿಕೆಟ್ ಸೋಲ್ಡ್ ಔಟ್</strong></p>.<p>ಎರಡು ವರ್ಷಗಳ ನಂತರ ಇಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯುತ್ತಿರುವುದರಿಂದ ವೀಕ್ಷಣೆಗೆ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಎಲ್ಲ ಟಿಕೆಟ್ಗಳೂ ಮಾರಾಟವಾಗಿವೆ.</p>.<p>‘38 ಸಾವಿರ ಆಸನ ಸಾಮರ್ಥ್ಯವಿರುವ ಕ್ರೀಡಾಂಗಣದಲ್ಲಿ 21,200 ಟಿಕೆಟ್ಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಉಳಿದದ್ದು ಕ್ಲಬ್ಗಳು, ಗಣ್ಯರು, ಪದಾಧಿಕಾರಿಗಳಿಗಾಗಿ ಮೀಸಲಾಗಿವೆ. ಜನರಿಂದ ಅಪಾರ ಬೇಡಿಕೆ ಬಂದಿದೆ’ ಎಂದು ಅಸ್ಸಾಂ ಕ್ರಿಕೆಟ್ ಸಂಸ್ಥೆ ಮೂಲಗಳು ತಿಳಿಸಿವೆ.</p>.<p><strong>ಪಿಚ್ ಪರಿಸ್ಥಿತಿ?</strong></p>.<p>ಇಲ್ಲಿ ಈ ಹಿಂದೆ ನಡೆದಿರುವ ಐದು ಪಂದ್ಯಗಳಲ್ಲಿ ಬೃಹತ್ ಮೊತ್ತಗಳು ದಾಖಲಾಗಿಲ್ಲ. 160 ರನ್ ಇಲ್ಲಿ ದಾಖಲಾಗಿರುವ ಗರಿಷ್ಠ ಮೊತ್ತವಾಗಿದೆ. ಬೌಲರ್ಗಳಿಗೇ ಹೆಚ್ಚು ನೆರವು ಸಿಗುವ ಸಾಧ್ಯತೆ ಇದೆ.</p>.<p><strong>ಭಾರತ ತಂಡ</strong></p>.<p>ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>