ಕೇಪ್ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಪರ್ಲ್ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಟೀಮ್ ಇಂಡಿಯಾ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ.
ನಾಲ್ವರಿಗೆ ಕೊಕ್... ಭಾರತ ತಂಡದಲ್ಲಿ ಪ್ರಮುಖವಾಗಿಯೂ ನಾಲ್ಕು ಬದಲಾವಣೆಗಳನ್ನು ತರಲಾಗಿದೆ. ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವೆಂಕಟೇಶ್ ಅಯ್ಯರ್ ಹಾಗೂ ಭುವನೇಶ್ವರ್ ಕುಮಾರ್ ಅವರನ್ನು ಕೈಬಿಡಲಾಗಿದೆ.
#TeamIndia win the toss and elect to bowl first in the final ODI.