<p><strong>ಮುಂಬೈ:</strong>ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಏಕದಿನ ಕ್ರಿಕೆಟ್ ಸರಣಿಯನ್ನು ರದ್ದು ಪಡಿಸಲು ತೀರ್ಮಾನಿಸಲಾಗಿದ್ದು, ಇನ್ನೊಮ್ಮೆ ಸರಣಿ ಆಯೋಜಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.ಕೋವಿಡ್–19 ವೈರಸ್ ಭೀತಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>‘ಏಕದಿನ ಸರಣಿಯ ವೇಳಾಪಟ್ಟಿಯನ್ನುಬಿಸಿಸಿಐ ಹಾಗೂ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (ಸಿಎಸ್ಎ) ಒಟ್ಟಾಗಿ ಮರುಹೊಂದಾಣಿಕೆ ಮಾಡಲಿವೆ. ಮೂರು ಪಂದ್ಯಗಳ ಸರಣಿ ಆಡಲು ದಕ್ಷಿಣ ಆಫ್ರಿಕಾ ಮತ್ತೆ ಭಾರತಕ್ಕೆ ಬರಲಿದೆ’ ಎಂದು ಬಿಸಿಸಿಐ ಅಧಿಕೃತ ಹೇಳಿಕೆ ನೀಡಿದೆ.</p>.<p>ಧರ್ಮಶಾಲಾದಲ್ಲಿ ಆಯೋಜನೆಯಾಗಿದ್ದ ಮೊದಲ ಏಕದಿನಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಎರಡು ಮತ್ತು ಮೂರನೇ ಪಂದ್ಯಗಳು ಕ್ರಮವಾಗಿಲಖನೌ ಹಾಗೂ ಕೋಲ್ಕತ್ತದಲ್ಲಿ ನಿಗದಿಯಾಗಿದ್ದವು.</p>.<p>ಲಖನೌ ಹಾಗೂ ಕೋಲ್ಕತ್ತದಲ್ಲಿ ಪಂದ್ಯಗಳನ್ನು ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬರುವುದಕ್ಕೆ ಅವಕಾಶ ನಿರಾಕರಿಸಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಗುರುವಾರ ಬಿಸಿಸಿಐ ಹೇಳಿತ್ತು. ಆದರೆ, ಇದೀಗ ಸರಣಿಯನ್ನು ರದ್ದುಪಡಿಸಲಾಗಿದೆ.</p>.<p>ಈ ನಿರ್ಧಾರಕ್ಕೂ ಮುನ್ನ ಬಿಸಿಸಿಐ, ಇದೇ ತಿಂಗಳು 29 ದಿಂದ ಆರಂಭವಾಗಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯನ್ನು ಏಪ್ರಿಲ್ 15ಕ್ಕೆ ಮುಂದೂಡಿತ್ತು.</p>.<p>ಪ್ರಪಂಚದಾದ್ಯಂತ 1 ಲಕ್ಷಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿರುವ ಕೋವಿಡ್–19 ಸೋಂಕು ಭಾರತದಲ್ಲಿಸುಮಾರು 80ಕ್ಕೂ ಹೆಚ್ಚು ಮಂದಿಯಲ್ಲಿ ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಏಕದಿನ ಕ್ರಿಕೆಟ್ ಸರಣಿಯನ್ನು ರದ್ದು ಪಡಿಸಲು ತೀರ್ಮಾನಿಸಲಾಗಿದ್ದು, ಇನ್ನೊಮ್ಮೆ ಸರಣಿ ಆಯೋಜಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ.ಕೋವಿಡ್–19 ವೈರಸ್ ಭೀತಿಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.</p>.<p>‘ಏಕದಿನ ಸರಣಿಯ ವೇಳಾಪಟ್ಟಿಯನ್ನುಬಿಸಿಸಿಐ ಹಾಗೂ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (ಸಿಎಸ್ಎ) ಒಟ್ಟಾಗಿ ಮರುಹೊಂದಾಣಿಕೆ ಮಾಡಲಿವೆ. ಮೂರು ಪಂದ್ಯಗಳ ಸರಣಿ ಆಡಲು ದಕ್ಷಿಣ ಆಫ್ರಿಕಾ ಮತ್ತೆ ಭಾರತಕ್ಕೆ ಬರಲಿದೆ’ ಎಂದು ಬಿಸಿಸಿಐ ಅಧಿಕೃತ ಹೇಳಿಕೆ ನೀಡಿದೆ.</p>.<p>ಧರ್ಮಶಾಲಾದಲ್ಲಿ ಆಯೋಜನೆಯಾಗಿದ್ದ ಮೊದಲ ಏಕದಿನಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಎರಡು ಮತ್ತು ಮೂರನೇ ಪಂದ್ಯಗಳು ಕ್ರಮವಾಗಿಲಖನೌ ಹಾಗೂ ಕೋಲ್ಕತ್ತದಲ್ಲಿ ನಿಗದಿಯಾಗಿದ್ದವು.</p>.<p>ಲಖನೌ ಹಾಗೂ ಕೋಲ್ಕತ್ತದಲ್ಲಿ ಪಂದ್ಯಗಳನ್ನು ಪ್ರೇಕ್ಷಕರು ಕ್ರೀಡಾಂಗಣಕ್ಕೆ ಬರುವುದಕ್ಕೆ ಅವಕಾಶ ನಿರಾಕರಿಸಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಗುರುವಾರ ಬಿಸಿಸಿಐ ಹೇಳಿತ್ತು. ಆದರೆ, ಇದೀಗ ಸರಣಿಯನ್ನು ರದ್ದುಪಡಿಸಲಾಗಿದೆ.</p>.<p>ಈ ನಿರ್ಧಾರಕ್ಕೂ ಮುನ್ನ ಬಿಸಿಸಿಐ, ಇದೇ ತಿಂಗಳು 29 ದಿಂದ ಆರಂಭವಾಗಬೇಕಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯನ್ನು ಏಪ್ರಿಲ್ 15ಕ್ಕೆ ಮುಂದೂಡಿತ್ತು.</p>.<p>ಪ್ರಪಂಚದಾದ್ಯಂತ 1 ಲಕ್ಷಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿರುವ ಕೋವಿಡ್–19 ಸೋಂಕು ಭಾರತದಲ್ಲಿಸುಮಾರು 80ಕ್ಕೂ ಹೆಚ್ಚು ಮಂದಿಯಲ್ಲಿ ದೃಢಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>