<p><strong>ನವದೆಹಲಿ:</strong> ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಕುತ್ತಿಗೆ ನೋವಿನಿಂದ ಪಂದ್ಯದಿಂದ ಹೊರಗುಳಿದಿದ್ದ ಭಾರತ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಿಸಿಸಿಐ ಬುಧವಾರ ಮಾಹಿತಿ ನೀಡಿದೆ.</p><p>ಮೊದಲ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ತಂಡದ ನಾಯಕ ಶುಭಮನ್ ಗಿಲ್ ಬ್ಯಾಟಿಂಗ್ ಮಾಡಲು ಆಗಮಿಸಿದಾಗ ಕುತ್ತಿಗೆ ನೋವಿನ ಸಮಸ್ಯೆಯಿಂದ ಮೈದಾನದಿಂದ ಹೊರನಡೆದಿದ್ದರು. ಈ ಪಂದ್ಯವನ್ನು ಭಾರತ 30 ರನ್ಗಳಿಂದ ಸೋಲು ಅನುಭವಿಸಿದೆ. </p><p>ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ.</p><p>‘ಶುಭಮನ್ ಗಿಲ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಮತ್ತು ಇಂದು (ಬುಧವಾರ) ತಂಡದೊಂದಿಗೆ ಅವರು ಗುವಾಹಟಿಗೆ ಪ್ರಯಾಣಿಸಲಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.</p><p>‘ಶುಭಮನ್ ಗಿಲ್ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದು, ಅದು ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಅವರು 2ನೇ ಟೆಸ್ಟ್ನಲ್ಲಿ ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದಿದ್ದಾರೆ.</p><p>ಗಿಲ್ ಎರಡನೇ ಟೆಸ್ಟ್ನಲ್ಲಿ ಆಡುವ ಸಾಧ್ಯತೆ ಕಡಿಮೆ ಇರುವುದರಿಂದ ಯುವ ಆಲ್ರೌಂಡರ್ ನಿತೀಶ್ ರೆಡ್ಡಿ ಅವರನ್ನು ಕೋಲ್ಕತ್ತಗೆ ಕರೆಸಿಕೊಳ್ಳಲಾಗಿದೆ. ಒಂದುವೇಳೆ ಗಿಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ ಅವರ ಜಾಗದಲ್ಲಿ ರೆಡ್ಡಿ ಆಡುವ ಸಾಧ್ಯತೆ ಇದೆ.</p>.ಕುತ್ತಿಗೆಗೆ ಗಾಯ: ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶುಭಮನ್ ಗಿಲ್.ಕುತ್ತಿಗೆ ನೋವು | ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ; ದೇವದತ್ತಗೆ ಅವಕಾಶ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಕುತ್ತಿಗೆ ನೋವಿನಿಂದ ಪಂದ್ಯದಿಂದ ಹೊರಗುಳಿದಿದ್ದ ಭಾರತ ಕ್ರಿಕೆಟ್ ತಂಡದ ನಾಯಕ ಶುಭಮನ್ ಗಿಲ್ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಗುವಾಹಟಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಬಿಸಿಸಿಐ ಬುಧವಾರ ಮಾಹಿತಿ ನೀಡಿದೆ.</p><p>ಮೊದಲ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ತಂಡದ ನಾಯಕ ಶುಭಮನ್ ಗಿಲ್ ಬ್ಯಾಟಿಂಗ್ ಮಾಡಲು ಆಗಮಿಸಿದಾಗ ಕುತ್ತಿಗೆ ನೋವಿನ ಸಮಸ್ಯೆಯಿಂದ ಮೈದಾನದಿಂದ ಹೊರನಡೆದಿದ್ದರು. ಈ ಪಂದ್ಯವನ್ನು ಭಾರತ 30 ರನ್ಗಳಿಂದ ಸೋಲು ಅನುಭವಿಸಿದೆ. </p><p>ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಆರಂಭವಾಗಲಿದೆ.</p><p>‘ಶುಭಮನ್ ಗಿಲ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಮತ್ತು ಇಂದು (ಬುಧವಾರ) ತಂಡದೊಂದಿಗೆ ಅವರು ಗುವಾಹಟಿಗೆ ಪ್ರಯಾಣಿಸಲಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.</p><p>‘ಶುಭಮನ್ ಗಿಲ್ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದು, ಅದು ಮುಂದುವರೆಯಲಿದೆ. ಮುಂದಿನ ದಿನಗಳಲ್ಲಿ ಅವರು 2ನೇ ಟೆಸ್ಟ್ನಲ್ಲಿ ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದಿದ್ದಾರೆ.</p><p>ಗಿಲ್ ಎರಡನೇ ಟೆಸ್ಟ್ನಲ್ಲಿ ಆಡುವ ಸಾಧ್ಯತೆ ಕಡಿಮೆ ಇರುವುದರಿಂದ ಯುವ ಆಲ್ರೌಂಡರ್ ನಿತೀಶ್ ರೆಡ್ಡಿ ಅವರನ್ನು ಕೋಲ್ಕತ್ತಗೆ ಕರೆಸಿಕೊಳ್ಳಲಾಗಿದೆ. ಒಂದುವೇಳೆ ಗಿಲ್ ಸಂಪೂರ್ಣವಾಗಿ ಚೇತರಿಸಿಕೊಳ್ಳದಿದ್ದರೆ ಅವರ ಜಾಗದಲ್ಲಿ ರೆಡ್ಡಿ ಆಡುವ ಸಾಧ್ಯತೆ ಇದೆ.</p>.ಕುತ್ತಿಗೆಗೆ ಗಾಯ: ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದ ಶುಭಮನ್ ಗಿಲ್.ಕುತ್ತಿಗೆ ನೋವು | ಅಂತಿಮ ಪಂದ್ಯದಲ್ಲಿ ಗಿಲ್ ಆಡುವುದು ಅನುಮಾನ; ದೇವದತ್ತಗೆ ಅವಕಾಶ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>